ಭ್ರಷ್ಟಾಚಾರ ಪ್ರಕರಣ: ಹಿರಿಯ ರಾಜಕಾರಣಿ ಜಯಾ ಜೇಟ್ಲಿಗೆ ಶಿಕ್ಷೆ
ನವದೆಹಲಿ, ಜುಲೈ 30: ರಕ್ಷಣಾ ಇಲಾಖೆ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಾಗಿದ್ದ ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿ ಹಾಗೂ ಇಬ್ಬರಿಗೆ ಇಂದು ಸಿಬಿಐ ನ್ಯಾಯಾಲಯವು ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಹಿರಿಯ ರಾಜಕಾರಣಿ ಜಯಾ ಜೇಟ್ಲಿ, ಸಮತಾ ಪಕ್ಷದ ಮಾಜಿ ಸದಸ್ಯ ಗೋಪಾಲ್ ಪಚೇರ್ವಾಲ್, ಮೇಜರ್ ಜನರಲ್ (ನಿವೃತ್ತ) ಎಸ್. ಪಿ ಮುರುಗೈ ಅವರನ್ನು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಿಬಿಐ ವಿಶೇಷ ನ್ಯಾಯಾಲಯದ ಜಡ್ಜ್ ವೀರೇಂದ್ರ ಭಟ್ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಗುರುವಾರದಂದು ತೀರ್ಪು ಪ್ರಕಟಿಸಿದ ಜಡ್ಜ್ ವೀರೇಂದ್ರ, ಜಯಾ ಜೇಟ್ಲಿ, ಗೋಪಾಲ್ ಪಚೇರ್ವಾಲ್, ಎಸ್. ಪಿ ಮುರುಗೈಗೆ 4 ವರ್ಷ ಜೈಲುಶಿಕ್ಷೆ ವಿಧಿಸಿದ್ದಾರೆ ಎಂದು ವಕೀಲ ವಿಕ್ರಮ್ ಪನ್ವಾರ್ ಹೇಳಿದರು. ಜೊತೆಗೆ 1 ಲಕ್ಷ ರು ದಂಡ ಹಾಕಲಾಗಿದ್ದು, ಗುರುವಾರ ಸಂಜೆಯೊಳಗೆ ಶರಣಾಗುವಂತೆ ತಪ್ಪಿತಸ್ಥರಿಗೆ ಸೂಚಿಸಲಾಗಿದೆ.

2001ರಲ್ಲಿ ಅನಾಮಧೇಯ ಕಂಪನಿಯೊಂದಕ್ಕೆ ನೆರವಲು ರಕ್ಷಣಾ ಇಲಾಖೆ ಮೂಲಕ ಇವರೆಲ್ಲರೂ ಒಪ್ಪಂದ ಮಾಡಿಕೊಂಡಿದ್ದರು ಎಂದು ಆರೋಪಿಸಿ ತೆಹಲ್ಕಾ ಸುದ್ದಿ ಸಂಸ್ಥೆಯು ಆಪರೇಷನ್ ವೆಸ್ಟ್ ಎಂಡ್ ಹೆಸರಿನಲ್ಲಿ ಸುದ್ದಿ ಪ್ರಸಾರ ಮಾಡಿತ್ತು.
ತೆಹೆಲ್ಕಾ ಆಪರೇಷನ್ ವೆಸ್ಟ್ ಎಂಡ್ ನಂತರ ಸಮತಾ ಪಾರ್ಟಿಯ ಮುಖಂಡ ಅಂದಿನ ರಕ್ಷಣಾ ಸಚಿವ ಸ್ಥಾನದಿಂದ ಜಾರ್ಜ್ ಫರ್ನಾಂಡೀಸ್ ಅವರು ಬಲವಂತವಾಗಿ ಕೆಳಗಿಳಿಯಬೇಕಾಗಿತ್ತು. ವೆಸ್ಟ್ ಎಂಡ್ ಇಂಟರ್ ನ್ಯಾಷನಲ್ ಎಂಬ ಕಂಪನಿಯಿಂದ ಜಯಾ ಜೇಟ್ಲಿ 2 ಲಕ್ಷ ರು ಹಾಗೂ ಮುರುಗೈ 20 ಸಾವಿರ ರು ಪಡೆದುಕೊಂಡಿದ್ದರು ಎಂದು ಸಂಸ್ಥೆಯ ಪ್ರತಿನಿಧಿ ಮ್ಯಾಥ್ಯೂ ಸ್ಯಾಮುಯಲ್ ಹೇಳಿಕೆ ನೀಡಿದ್ದಾರೆ.
ತೆಹೆಲ್ಕಾ ಸ್ಟಿಂಗ್ ಆಪರೇಷನ್ ವೆಸ್ಟ್ ಎಂಡ್ ಬಗ್ಗೆ ತಮ್ಮ ಜೀವನ ಚರಿತ್ರೆ ಪುಸ್ತಕದಲ್ಲಿ ವಿಸ್ತಾರವಾಗಿ ಸಮತಾ ಪಾರ್ಟಿಯ ಅಧ್ಯಕ್ಷೆ ಜಯಾ ಜೇಟ್ಲಿ ಬರೆದುಕೊಂಡಿದ್ದಾರೆ.
-
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications