ಸಿಜೆಐ ವಿರುದ್ಧ ವಿಪಕ್ಷಗಳಿಂದ ಮಹಾಭಿಯೋಗ ನಿಲುವಳಿ ಮಂಡನೆ
ನವದೆಹಲಿ, ಏಪ್ರಿಲ್ 20: ಸುಪ್ರೀಂಕೋರ್ಟಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗ (impeachment) ನಿಲುವಳಿಯನ್ನು ಕಾಂಗ್ರೆಸ್ ನೇತೃತ್ವದ ಏಳು ವಿಪಕ್ಷಗಳು ಮಂಡಿಸಿವೆ.
ಭಾರತೀಯ ಸಂವಿಧಾನದ 217 ಮತ್ತು 124(4)ನೇ ವಿಧಿಯ ಅಡಿಯಲ್ಲಿ ದೀಪಕ್ ಮಿಶ್ರಾ ಅವರನ್ನು ಪದಚ್ಯುತಿಗೊಳಿಸುವಂತೆ ಒತ್ತಾಯಿಸಿ ಮಹಾಭಿಯೋಗ ನಿಲುವಳಿ ಮಂಡಿಸಲಾಗಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಕಾಂಗ್ರೆಸ್, ನ್ಯಾಶ್ನಲ್ ಕಾಂಗ್ರೆಸ್ ಪಕ್ಷ, ಸಿಪಿಐ-ಎಂ ಮತ್ತು ಸಿಪಿಐ, ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷಗಳು ಈ ನಿಲುವಳಿಗೆ ಸಹಿ ಮಾಡಿವೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಗುಲಾಬ್ ನಬಿ ಆಜಾದ್, '64 ಸಂಸದರು ಈ ನಿಲುವಳಿಗೆ ಸಹಿ ಮಾಡಿದ್ದಾರೆ. ರಾಜ್ಯ ಸಭೆಯ ಚೇರ್ ಮನ್ ಆಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಮ್ಮ ಬೇಡಿಕೆಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ' ಎಂದಿದ್ದಾರೆ.

ದೀಪಕ್ ಮಿಶ್ರಾ ಅವರು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದಾಗಿನಿಂದಲೂ ನ್ಯಾಯಾಂಗಕ್ಕೆ ಸಂಬಂಧಿಸಿಸದಮತೆ ಹಲವು ವಿವಾದಗಳು ಸೃಷ್ಟಿಯಾಗಿವೆ, ಮತ್ತು ಹಲವು ಪ್ರಕರಣಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಲಾಗಿಲ್ಲ ಎಂದು ವಿಪಕ್ಷಗಳು ಆರೋಪಿಸಿವೆ.
ಪ್ರಕರಣಗಳನ್ನು ಇತರೆ ನ್ಯಾಯಮೂರ್ತಿಗಳಿಗೆ ಹಂಚುವಾಗ ಇರುವ ಮಾನದಂಡ ಮತ್ತು ಈ ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಇರುವ ಆಡಳಿತಾತ್ಮಕ ಅಧಿಕಾರದ ಕುರಿತು ಸ್ಪಷ್ಟನೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟಿನಲ್ಲಿಇತ್ತೀಚೆಗಷ್ಟೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications