8 ಸಂಸದರ ಅಮಾನತು: ಸಂಸತ್ತಿನ ಆವರಣದಲ್ಲಿ ಅನಿರ್ದಿಷ್ಟಾವಧಿ ಧರಣಿ
ನವದೆಹಲಿ, ಸೆಪ್ಟೆಂಬರ್ 21: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಚರ್ಚೆ ವೇಳೆ ಗದ್ದಲ ಮಾಡಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆ ವಿಪಕ್ಷದ ಎಂಟು ಮಂದಿ ಸಂಸದರನ್ನು ಒಂದು ವಾರಗಳ ಕಲಾಪದಿಂದ ಅಮಾನತು ಮಾಡಲಾಗಿದೆ.
ಹಾಸಿಗೆ, ದಿಂಬು ತೆಗೆದುಕೊಂಡು ಹೋಗಿರುವ ಆಮ್ ಆದ್ಮಿ ಪಕ್ಷದ ಸಂಜಯ್ ಸೀಮಗ್ ಸಂಸತ್ತಿನ ಆವರಣದಲ್ಲಿಯೇ ಧರಣಿ ಕೂತಿದ್ದಾರೆ.ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ವೇಳೆ ಕೋಲಾಹಲ ಸೃಷ್ಟಿಯಾಗಿತ್ತು, ಉಪಸಭಾಪತಿ ಎದುರೇ ರೂಲ್ ಬುಕ್ ಹರಿದುಹಾಕಿದ್ದರು.
ಭಾನುವಾರ ಕೋಲಾಹಲ ಸೃಷ್ಟಿಯಾಗಿದ್ದರೆ ಸೋಮವಾರವೂ ಅದರ ಬಿಸಿ ಇತ್ತು, ಅಮಾನತುಗೊಂಡ ಸದಸ್ಯರನ್ನು ಹೊರನಡೆಯಲು ಸೂಚಿಸಿದಾಗ ಮತ್ತಷ್ಟು ಗೊಂದಲ ವಾತಾವರಣ ನಿರ್ಮಾಣವಾಯಿತು.

ಕೃಷಿ ಮಸೂದೆ ರೈತರ ವಿರೋಧಿಯಾಗಿದ್ದು, ಕೇಂದ್ರ ಸರ್ಕಾರ ಮರಣ ಶಾಸನ ಬರೆಯುತ್ತಿದೆ ಎಂದು ಆರೋಪಿಸಿರುವ ಸಂಸದರು ಇದೀಗ ಅಮಾನತು ವಿರೋಧಿಸಿ ಧರಣಿ ಕುಳಿತಿದ್ದಾರೆ.
ಅಶಿಸ್ತಿನಿಂದ ನಡೆದುಕೊಂಡ ರಾಜ್ಯಸಭಾ ಸದಸ್ಯರಾದ ಡೆರೆಕ್ ಒಬ್ರಿಯಾನ್, ಸಂಜಯ್ ಸಿಂಗ್, ರಾಜು ಸತವ್, ಕೆಕೆ ರಾಕೇಶ್, ರಿಪೂನ್ ಬೋರಾ, ಡೋಲಾ ಸೇನ್, ಸೈಯದ್ ನಜೀರ್ ಹುಸೇನ್ ಮತ್ತು ಎಲಮರನ್ ಕರೀಮ್ ಅವರನ್ನು ಎಂಟು ದಿನ ಅಮಾನತು ಮಾಡಲಾಗಿದೆ.
#WATCH: Suspended Trinamool Congress MP Dola Sen sings a song in the Parliament premises.
— ANI (@ANI) September 21, 2020
8 suspended Rajya Sabha MPs are protesting at Gandhi statue against their suspension from the House. pic.twitter.com/o1LXmni7Sp
ಸಂಸದರ ಅಮಾನತು ನಿರ್ಧಾರ ಪ್ರಕಟಿಸುವ ಮುನ್ನ ಮಾತನಾಡಿದ ಸಭಾಧ್ಯಕ್ಷ ವೆಂಕಯ್ಯನಾಯ್ಡು ನಿನ್ನೆ ಬೆಳವಣಿಗೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಸಭೆಗೆ ನಿನ್ನೆ ಕೆಟ್ಟ ದಿನ, ಉಪ ಸಭಾಧ್ಯಕ್ಷರಿಗೆ ಸದಸ್ಯರು ದೈಹಿಕ ಬೆದರಿಕೆ ಹಾಕಿದ್ದಾರೆ. ಕರ್ತವ್ಯ ನಿಭಾಯಿಸಲು ಅಡ್ಡಿಪಡಿಸಿದ್ದಾರೆ ಇದೊಂದು ದುರಾದೃಷ್ಟವಕರ ಬೆಳವಣಿಗೆ ಸಂಸದರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಬೇಸರ ವ್ಯಕ್ತಪಡಿಸಿದ್ದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications