ಮೋದಿಯನ್ನು ಇಳಿಸುವುದೇ ವಿರೋಧಿಗಳ ಅಜೆಂಡಾ : ಆರ್ಎಸ್ಪಿ ವ್ಯಂಗ್ಯ
ನವದೆಹಲಿ, ಜನವರಿ 19 : "ಕೊಲ್ಕತಾದಲ್ಲಿ ಬಿಜೆಪಿ ವಿರೋಧಿ ನಾಯಕರು ಒಬ್ಬರ ನಂತರ ಒಬ್ಬರು ಅಬ್ಬರಿಸಿರುವುದನ್ನು ನೋಡಿದರೆ, ಅವರ ಗುರಿ ಒಂದೇ, ನರೇಂದ್ರ ಮೋದಿಯವರನ್ನು ಪ್ರಧಾನಿ ಸ್ಥಾನದಿಂದ ತೆಗೆಯುವುದು" ಎಂದು ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರು ಟೀಕಿಸಿದ್ದಾರೆ.
ನರೇಂದ್ರ ಮೋದಿಯವರ ವಿರುದ್ಧ ಎಲ್ಲಾ ನಾಯಕರು 'ಯುನೈಟೆಡ್ ಇಂಡಿಯಾ ರ್ಯಾಲಿ'ಯಲ್ಲಿ ಆಡಿರುವುದನ್ನು ಗಮನಿಸಿದರೆ, ಅವರ್ಯಾರಿಗೂ ದೇಶದ ಅಭಿವೃದ್ಧಿಯ ಬಗ್ಗೆ ಯಾವುದೇ ನೀಲನಕ್ಷೆ ಇದ್ದಂತಿಲ್ಲ. ಒಬ್ಬರ ಕಣ್ಣಲ್ಲಿ ಕಣ್ಣಿಟ್ಟು ನೋಡಲಾಗದವರು ಈಗ ಎಲ್ಲರೂ ಒಟ್ಟಿಗೇ ಬಂದಿದ್ದಾರೆ ಎಂದು ಕೇಂದ್ರ ಕಾನೂನು, ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಅವರು ವಾಗ್ದಾಳಿ ಮಾಡಿದರು.
ಅವರ ಭಾಷಣದಲ್ಲಿ ಯಾರೋ ಒಬ್ಬರು, ನಮ್ಮ ನಾಯಕರನ್ನು ದೇಶದ ಜನರು ಆರಿಸುತ್ತಾರೆ ಎಂದು ತಮಾಷೆಯಾಗಿ ಹೇಳಿದರು. ಆರೇ, ಭಾರತದ ಜನರಿಂದ ಆಯ್ಕೆಯಾಗಬೇಕಿದ್ದರೆ ನಿಮ್ಮ ನಾಯಕ ಯಾರು ಎಂದು ಮೊದಲು ಹೇಳಿ. ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಮಾಯಾವತಿ ಅಥವಾ ಪ್ರಾದೇಶಿಕ ಪಕ್ಷದ ನಾಯಕರೂ ಇದ್ದಾರೆ. ಈ ಎಲ್ಲರಿಗೂ ಪ್ರಧಾನಿಯಾಗುವ ಹೆಬ್ಬಯಕೆ ಇದೆ ಎಂದು ವ್ಯಂಗ್ಯವಾಗಿ ರವಿ ಶಂಕರ್ ಪ್ರಸಾದ್ ಹೇಳಿದರು.

ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರಕಾರವನ್ನು ಉರುಳಿಸಬೇಕು ಎಂಬ ಉದ್ದೇಶದಿಂದ ಕೋಲ್ಕತಾದಲ್ಲಿ ಇಪ್ಪತ್ತಕ್ಕೂ ಹೆಚ್ಚು ಪಕ್ಷಗಳು ಒಟ್ಟಿಗೆ ಸೇರಿದ್ದವು. ಈ ಮಹಾಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ ಅವರು, ನರೇಂದ್ರ ಮೋದಿ ಸರಕಾರದ ಡೇಟ್ ಎಕ್ಸ್ ಪೈರ್ ಆಗಿದೆ. ವಿರೋಧ ಪಕ್ಷಗಳ ಸಂಯುಕ್ತ ಕೂಟ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಲಿದೆ ಎಂದು ಘೋಷಿಸಿದರು.
ಬ್ರಿಗೇಡ್ ಪರೇಡ್ ಗ್ರೌಂಡ್ ನಲ್ಲಿ ನಡೆದ ಆಯೋಜಿಸಲಾಗಿದ್ದ ಸಭೆಯಲ್ಲಿ, ಎಲ್ಲ ವಿರೋಧ ಪಕ್ಷಗಳೊಂದಿಗೆ ಒಟ್ಟಿಗೆ ಕೆಲಸ ಮಾಡುವೆ. ಮುಂದಿನ ಪ್ರಧಾನಿ ಯಾರಾಗಬೇಕೆಂದು ಚುನಾವಣೆಯ ನಂತರ ನಿರ್ಧರಿಸಲಾಗುವುದು ಎಂದು ಅವರು ನುಡಿದಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications