ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಸಾಧ್ಯತೆ

|
Google Oneindia Kannada News

ನವದೆಹಲಿ, ಜುಲೈ 31: ಮುಂದಿನ ವಾರ ವಿಪಕ್ಷಗಳು ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಾರಿ ಸಂಸತ್ ಮುಂಗಾರು ಅಧಿವೇಶನವು ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಪೆಗಾಸಸ್‌ನಿಂದಲೇ ಆರಂಭವಾಗಿತ್ತು. ಆಮೇಲೆ ಕೃಷಿ ಕಾಯ್ದೆ ಸೇರಿದಂತೆ ಬೇರೆ ವಿಚಾರಗಳಿಗೆ ತಿರುಗಿತು.

ಅಧಿವೇಶನ ಆರಂಭವಾಗಿ ಎರಡು ವಾರಗಳೇ ಕಳೆದರೂ ಇದುವರೆಗೂ ಸರಿಯಾಗಿ ಅಧಿವೇಶನವನ್ನು ನಡೆಸಲು ಸಾಧ್ಯವಾಗಿಲ್ಲ. ಇಡೀ ದೇಶದಲ್ಲಿ ಸಂಚಲನ ಮೂಡಿಸಿರುವ ಪೆಗಾಸಸ್ ಬೇಹುಗಾರಿಕೆ ವಿವಾದದ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಸಲು ಸೂಕ್ತ ಅವಕಾಶ ನೀಡದ ಹಿನ್ನೆಲೆಯಲ್ಲಿ ಮುಂದಿನ ವಾರ ರಾಜ್ಯಸಭೆ ಸಭಾಪತಿ ಎಂ. ವೆಂಕಯ್ಯ ನಾಯ್ಡು ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಎನ್ನುವ ವಿಷಯ ಮೂಲಗಳಿಂದ ತಿಳಿದುಬಂದಿದೆ.

ಸಂಸತ್ ಭವನಕ್ಕೆ ರೈತರ ಜಾಥಾ; ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು ಸಂಸತ್ ಭವನಕ್ಕೆ ರೈತರ ಜಾಥಾ; ಭದ್ರತೆ ಹೆಚ್ಚಿಸಿದ ದೆಹಲಿ ಪೊಲೀಸರು

ಭಾರತದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ವಿರೋಧ ಪಕ್ಷಗಳಾದ ಕಾಂಗ್ರೆಸ್, ಟಿಎಂಸಿ, ಡಿಎಂಕೆ ಮತ್ತಿತರ ಪಕ್ಷಗಳ ನಾಯಕರು ಚಿಂತನೆ ನಡೆಸಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

Oppositions No Confidence Motion Against Rajya Sabha Chairman Venkaiah Naidu

ಜುಲೈ 19ರಂದು ಆರಂಭವಾಗಿರುವ ಮುಂಗಾರು ಅಧಿವೇಶನದಲ್ಲಿ ಪೆಗಾಸಸ್ ಬೇಹುಗಾರಿಕೆ, ಕೋವಿಡ್ ಲಸಿಕೆ ಮತ್ತಿತರ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಬೇಕೆಂದು ಪ್ರತಿದಿನವೂ ನೋಟಿಸ್ ನೀಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ವಿವರಣೆಯನ್ನು ನೀಡಿಲ್ಲ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.

ಈ ವಾರ ಅಧಿವೇಶನದಲ್ಲಿ ಪೆಗಾಸಸ್‌, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು.

ಈಗಾಗಲೇ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಂಸದ ಶಂತನು ಸೇನ್ ಕಳೆದ ವಾರ ರಾಜ್ಯಸಭಾ ಅಧಿವೇಶನದ ವೇಳೆ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರ ಕೈಯಲ್ಲಿದ್ದ ಪೆಗಾಸಸ್ ವಿವಾದದ ಕುರಿತ ಹೇಳಿಕೆಯ ಪ್ರತಿಯನ್ನು ಕಸಿದುಕೊಂಡು, ಹರಿದುಹಾಕಿದ್ದಾರೆ ಎಂಬ ಕಾರಣಕ್ಕೆ ಅವರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದೆ. ಈ ಕಾರಣದಿಂದ ವಿಪಕ್ಷಗಳಿಗೆ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ವಿರುದ್ಧ ಅಸಮಾಧಾನ ಇನ್ನೂ ಹೆಚ್ಚಾಗಿದೆ.

ಅದೇ ರೀತಿ ಆಡಳಿತ ಪಕ್ಷದವರು ಕೂಡ ವಿರೋಧ ಪಕ್ಷದವರಿಂದಲೇ ಅಧಿವೇಶನ ಮುಂದೂಡಿಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ. ವಿರೋಧ ಪಕ್ಷದವರು ದಿನಕ್ಕೊಂದು ಗಲಾಟೆಯೆಬ್ಬಿಸಿ, ಪ್ರತಿಭಟನೆ ಮಾಡುವ ಮೂಲಕ ಸದನವನ್ನು ಮುನ್ನಡೆಸದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮುಂದಿನ ವಾರ ಒಂದುವೇಳೆ ವಿರೋಧ ಪಕ್ಷಗಳು ರಾಜ್ಯಸಭೆಯಲ್ಲಿ ಎಂ. ವೆಂಕಯ್ಯ ನಾಯ್ಡು ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದರೆ ಮುಂದಿನ ವಾರ ಅಧಿವೇಶನದಲ್ಲಿ ಮತ್ತೊಂದು ಗಲಾಟೆಯೇಳುವುದು ಖಚಿತ.

ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್‌, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಾರ್ವಜನಿಕರಿಗೆ ಅನುಕೂಲವಾಗುವ ಪ್ರಮುಖವಾದ ವಿಷಯಗಳ ಬಗ್ಗೆ ಚರ್ಚಿಸದಂತೆ ರಾಜ್ಯಸಭಾ ಸದಸ್ಯರನ್ನು ತಡೆಯಲಾಗಿದೆ. ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ ಎಂದು ವೆಂಕಯ್ಯ ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದರು.

ನಾವು ಅಸಹಾಯಕರಾಗುತ್ತಿದ್ದೇವೆ ಎಂದಿದ್ದ ಸಭಾಪತಿ: ಪೆಗಾಸಸ್‌, ನೂತನ ಕೃಷಿ ಕಾಯ್ದೆ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳ ಗದ್ದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸಭಾಪತಿ ವೆಂಕಯ್ಯನಾಯ್ಡು ಅವರು ತೀವ್ರ ಅಸಮಾಧಾನಗೊಂಡಿದ್ದು, ನಾವು ಅಸಹಾಯಕರಾಗುತ್ತಿದ್ದೇವೆ ಎಂದು ಹೇಳಿದ್ದರು.

ಜುಲೈ 26ರಂದು ಸಂಸತ್ತಿನ ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಸದಸ್ಯರು ಪೆಗಾಸಸ್‌, ನೂತನ ಕೃಷಿ ಕಾಯ್ದೆಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಇದರಿಂದ ಗದ್ದಲ ಉಂಟಾದ ಪರಿಣಾಮ ಕಲಾಪವನ್ನು ಮಧ್ಯಾಹ್ನ 2 ಗಂಟೆವರೆಗೆ ಮಂದೂಡಲಾಗಿತ್ತು.

ರಾಜ್ಯಸಭಾ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಿದ ಸಭಾಧ್ಯಕ್ಷ ಎಂ.ವೆಂಕಯ್ಯನಾಯ್ಡು, ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಚರ್ಚಿಸದಂತೆ ಸದಸ್ಯರನ್ನು ತಡೆಯಲಾಗಿದೆ.

ದಿನದಿಂದ ದಿನಕ್ಕೆ ನಾವು ಅಸಹಾಯಕರಾಗುತ್ತಿದ್ದೇವೆ' ಎಂದರು. ಲೋಕಸಭೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಕಲಾಪ ನಡೆದಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಕೆಲವೊಂದು ಪ್ರಶ್ನೆಗಳಿಗೆ ಉತ್ತರಿಸಲಾಯಿತು.

English summary
Two weeks have already passed and Parliament is unable to function properly due to Opposition’s demand to discuss Pegasus snooping list, farm laws and other issues. If sources in the Opposition are to be believed, their leaders may bring in no confidence motion next week against Rajya Sabha chairman Venkaiah Naidu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X