ಆಸ್ಕರ್ ಫರ್ನಾಂಡಿಸ್ ಬಿಚ್ಚಿಟ್ಟ ಗೋ ಮೂತ್ರದಿಂದ ಕ್ಯಾನ್ಸರ್ ಗುಣವಾದ ಕಥೆ
ನವದೆಹಲಿ, ಮಾರ್ಚ್ 19: ಕಾಂಗ್ರೆಸ್ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ವ್ಯಕ್ತಿಯೊಬ್ಬರು ಗೋಮೂತ್ರದಿಂದ ಕ್ಯಾನ್ಸರ್ ಗುಣಪಡಿಸಿಕೊಂಡಿರುವ ಕಥೆಯನ್ನು ರಾಜ್ಯಸಭೆಯಲ್ಲಿ ಹೇಳಿಕೊಂಡಿದ್ದಾರೆ.
ಅಷ್ಟೇ ಅಲ್ಲದೆ ಗೋ ಮೂತ್ರದಿಂದಾಗುವ ಉಪಯೋಗದ ಬಗ್ಗೆ ಅವರು ಮಾತನಾಡಿದ್ದಾರೆ.
ಹೋಮಿಯೋಪತಿ ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಗಳಿಗೆ ರಾಷ್ಟ್ರೀಯ ಆಯೋಗಗಳನ್ನು ಸ್ಥಾಪಿಸುವ ಎರಡು ಮಸೂದೆಗಳ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವರು, ಒಮ್ಮೆ ಮೀರತ್ ಬಳಿಯ ಆಶ್ರಮಕ್ಕೆ ಭೇಟಿ ನೀಡಿದಾಗ ಗೋ ಮೂತ್ರ ಕುಡಿದು ಕ್ಯಾನ್ಸರ್ ಗುಣಪಡಿಸಿಕೊಂಡಿದ್ದಾಗಿ ವ್ಯಕ್ತಿಯೊಬ್ಬರು ತಮ್ಮದೊಂದಿಗೆ ಹೇಳಿಕೊಂಡಿದ್ದಾಗಿ ಫರ್ನಾಂಡಿಸ್ ತಿಳಿಸಿದ್ದಾರೆ.

ಅನೇಕ ಬಿಜೆಪಿ ನಾಯಕರು ಕೂಡ ಗೋಮೂತ್ರದ ಬಗ್ಗೆ ಮಾತನಾಡಿದ್ದಾರೆ
ಅನೇಕ ಬಾರಿ ಬಿಜೆಪಿ ಮುಖಂಡರು ಗೋಮೂತ್ರದ ಶಕ್ತಿಯ ಬಗ್ಗೆ ಮಾತನಾಡಿದ್ದರು. ಇಂತಹ ಹೇಳಿಕೆಗಳಿಗೆ ಕಾಂಗ್ರೆಸ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತ್ತು.ಭಾರತೀಯ ವೈದ್ಯಕೀಯ ವ್ಯವಸ್ಥೆ ಉತ್ತಮ ಗುಣಗಳನ್ನು ಶ್ಲಾಘಿಸಿದರು.

ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಹೊರಗಿಡುವ ಬಗ್ಗೆ ಆಕ್ಷೇಪ
ಫರ್ನಾಂಡಿಸ್ ಮಸೂದೆಗಳನ್ನು ಬೆಂಬಲಿಸಿದರೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯನ್ನು ಹೊರಗಿಡುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.ಮಸೂದೆಯನ್ನು ತಿದ್ದುಪಡಿ ಮಾಡುವಂತೆ ಅಥವಾ ಯೋಗ ಮತ್ತು ಪ್ರಕೃತಿಚಿಕಿತ್ಸೆಯನ್ನು ಒಳಗೊಳ್ಳುವ ಪ್ರತ್ಯೇಕ ಶಾಸನವನ್ನು ತರುವುದಾಗಿ ಭರವಸೆ ನೀಡುವಂತೆ ಸಚಿವರನ್ನು ಒತ್ತಾಯಿಸುವುದಾಗಿ ಹೇಳಿದರು.

ಮೊಣಕಾಲಿನ ನೋವಿನಿಂದ ನರಳುತ್ತಿದ್ದೆ
ಮೊಣಕಾಲಿನ ತೀವ್ರ ನೋವು ಬಂದಾಗ ಬದಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ವೈದ್ಯರು ನೀಡಿದ ಸಲಹೆಗಳನ್ನು ನಿರಾಕರಿಸಿ, 'ವಜ್ರಾಸನ' ಮಾಡಲು ಪ್ರಾರಂಭಿಸಿದ್ದೆ. ಯೋಗ ವಜ್ರಾಸನ ಮಾಡಲು ಆರಂಭಿಸಿದ್ದು, ಸದ್ಯ ಯಾವುದೇ ತೊಂದರೆ ಇಲ್ಲದೆ ಕುಸ್ತಿ ಮಾಡುವಷ್ಟು ಸಮರ್ಥನಾಗಿದ್ದೇನೆ ಎಂದರು.

ವಾಜಪೇಯಿ ಅವರಿಗೂ ಹೇಳಿಕೊಡುತ್ತಿದ್ದೆ
ದಿವಂಗತ ಮಾಜಿ ಪ್ರಧಾನಿ ವಾಜಪೇಯಿ ಮೊಣಕಾಸಿನ ಶಸ್ತ್ರಚಿಕಿತ್ಸೆ ತಿಳಿದಿದ್ದರೆ ಅವರ ಬಳಿಗೆ ಹೋಗಿ ವಜ್ರಾಸನ ಆರಂಭಿಸುವಂತೆ ಕೇಳಿಕೊಳ್ಳುತ್ತಿದ್ದೆ. ಇದರಿಂದ ಅವರು ಖಂಡಿತವಾಗಿ ಗುಣಮುಖರಾಗುತ್ತಿದ್ದರು ಎಂದು ಹೇಳಿದರು.

ಯೋಗಾಭ್ಯಾಸ ಮಾಡಿದರೆ ಆರೋಗ್ಯ ಬಜೆಟ್ ಕಡಿಮೆ ಮಾಡಬಹುದು
ಅಮೆರಿಕಾದಲ್ಲಿ ಸುಮಾರು 104 ವರ್ಷ ವಯಸ್ಸಿನ ವ್ಯಕ್ತಿ ಯುವಕರನ್ನು ನಾಚಿಸುವಂತೆ ಓಡುತ್ತಾರೆ. ಯೋಗ ನಮ್ಮ ಸಂಪತ್ತು. ನೀವು ಯೋಗವನ್ನು ಅಭ್ಯಾಸ ಮಾಡಿದರೆ, ನಮ್ಮ ಆರೋಗ್ಯದ ಬಜೆಟ್ ವೆಚ್ಚವನ್ನು ಶೇಕಡಾ 50 ರಷ್ಟು ಕಡಿಮೆ ಮಾಡಬಹುದು. ಇದು ಜೀವನ ವಿಧಾನ ಎಂದು ಫರ್ನಾಂಡಿಸ್ ಹೇಳಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications