ಭಾರತ ಬಂದ್ನಲ್ಲಿ ಪಾಲ್ಗೊಂಡ ಕಾರ್ಮಿಕರಿಗೆ ಅಭಿನಂದನೆ ತಿಳಿಸಿದ ರಾಹುಲ್ ಗಾಂಧಿ
ನವದೆಹಲಿ, ಜನವರಿ 8: ಭಾರತ ಬಂದ್ನಲ್ಲಿ ಪಾಲ್ಗೊಂಡಿರುವ 25 ಕೋಟಿಗೂ ಅಧಿಕ ಕಾರ್ಮಿಕರಿಗೆ ನನ್ನ ವಂದನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಮೋದಿ-ಶಾ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾರಕಕ್ಕೇರಿದೆ. ಮೋದಿಯವರ ಬಂಡವಾಳಶಾಹಿ ಧೋರಣೆಯಿಂದ ಸಾರ್ವಜನಿಕ ವಲಯಗಳು ಇಂದು ದುರ್ಬಲಗೊಂಡಿವೆ. ಇಂದು 20ಕೋಟಿಗೂ ಅಧಿಕ ಕಾರ್ಮಿಕರು ಭಾರತ ಬಂದ್ ನಡೆಸುತ್ತಿದ್ದು ಅವರಿಗೆ ನನ್ನ ವಂದನೆಗಳು ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ: ಜನಜಾಗೃತಿ ಅಭಿಯಾನದಲ್ಲೂ ಬಿಜೆಪಿಗೆ ಹಿನ್ನಡೆ!
The Modi-Shah Govt’s anti people, anti labour policies have created catastrophic unemployment & are weakening our PSUs to justify their sale to Modi’s crony capitalist friends.
— Rahul Gandhi (@RahulGandhi) January 8, 2020
Today, over 25 crore 🇮🇳workers have called for #BharatBandh2020 in protest.
I salute them.
ಕೇಂದ್ರ ಸರ್ಕಾರದ ಆರ್ಥಿಕ ನೀತಿ, ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಕ್ರಮಗಳಿಗೆ ವಿರೋಧ, ಕನಷ್ಠ ವೇತನ 21 ಸಾವಿರದಿಂದ 24 ಸಾವಿರ ರೂ. ಏರಿಕೆಗೆ ಆಗ್ರಹ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣಕ್ಕೆ ವಿರೋಧ, ಪೌರತ್ವ ತಿದ್ದುಪಡಿ ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ, ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಹಿಂಪಡೆದುಕೊಳ್ಳಲು ಆಗ್ರಹ, 10 ಸಾರ್ವಜನಿಕ ವಲಯದ ಬ್ಯಾಂಕ್ಗಳನ್ನು ವಿಲೀನಗೊಳಿಸಿ 4 ಅತಿದೊಡ್ಡ ಬ್ಯಾಂಕ್ಗಳಾಗಿ ಪರಿವರ್ತಿಸುವುದಕ್ಕೆ ವಿರೋಧ ವ್ಯಕ್ತಪಡಿಸಿ ಭಾರತ ಬಂದ್ಗೆ ಕರೆ ನೀಡಲಾಗಿದೆ.
ಕಾರ್ಮಿಕ ಸಂಘಟನೆಗಳು, ಕೇಂದ್ರ-ರಾಜ್ಯ ಸರ್ಕಾರಿ ನೌಕರರು, ಬ್ಯಾಂಕ್ ನೌಕರರು, ಎಲ್ಐಸಿ ನೌಕರರು, ಸಹಕಾರಿ ಬ್ಯಾಂಕ್ ನೌಕರರು, ಸರ್ಕಾರಿ ಶಿಕ್ಷಕರು ಹಾಗೂ ಸಂಘಟಿತ ವಲಯದ ಕಾರ್ಮಿಕರು ಬಂದ್ಗೆ ಬೆಂಬಲ ನೀಡಿದ್ದಾರೆ.