ಪಿ.ಚಿದಂಬರಂ ಗೆ ಜಾಮೀನು: ಆದರೂ ಇಲ್ಲ ಬಿಡುಗಡೆ ಭಾಗ್ಯ
ನವದೆಹಲಿ, ಅಕ್ಟೋಬರ್ 22: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಆದರೂ ಸಹ ಅವರಿಗೆ ಜೈಲಿನಿಂದ ಬಿಡುಗಡೆ ಆಗುವ ಭಾಗ್ಯವಿಲ್ಲ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಪಿ.ಚಿದಂಬರಂ ಮೇಲೆ ಕೇಸು ದಾಖಲಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ.
Recommended Video
ಆದರೆ ಪಿ.ಚಿದಂಬರಂ ಅವರು ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೆ ಒಳಗಾಗಿದ್ದರು. ಆದರೆ ಈ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಅವರಿಗೆ ಜಾಮೀನು ದೊರೆತಿಲ್ಲ. ಹಾಗಾಗಿ ಜೈಲು ವಾಸ ಇನ್ನಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ.
ಪಿ.ಚಿದಂಬರಂ ಅವರನ್ನು ಆಗಸ್ಟ್ 21 ರಂದು ಇಡಿ ಅಧಿಕಾರಿಗಳು ಬಂಧಿಸಿದ್ದರು. ವಿಚಾರಣೆ ಬಳಿಕ ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು ತಿಹಾರ್ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಗೆ ಜಾಮೀನು ಸಿಕ್ಕಿರುವುದು ಭರವಸೆ ಮೂಡಿಸಿದ್ದು, ಇಡಿ ಪ್ರಕರಣದಲ್ಲಿಯೂ ಜಾಮೀನು ಸಿಗಬಹುದೆಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.