ಆರ್ಬಿಐ ಗವರ್ನರ್ ಆಗಿ ದಾಸ್ ನೇಮಕ: ಚಿದಂಬರಂ ವಿರೋಧ
ನವದೆಹಲಿ,ಡಿಸೆಂಬರ್ 12: ಶಕ್ತಿಕಾಂತ್ ದಾಸ್ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ನೂತನ ಗವರ್ನರ್ ಆಗಿ ನೇಮಕ ಮಾಡಿರುವುದಕ್ಕೆ ಮಾಜಿ ಸಚಿವ ಪಿ ಚಿದಂಬರಂ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.
ಯಾರ ಹೆಸರನ್ನೂ ಬಳಸದೇ ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರವು ನೋಟು ಅಪನಗದೀಕರಣಕ್ಕೆ ಬೆಂಬಲ ಸೂಚಿಸಿದ್ದ ಇಬ್ಬರನ್ನು ಎರಡು ಉನ್ನತ ಹುದ್ದೆಗಳಿಗೆ ನೇಮಕ ಮಾಡಿದೆ. ಮೋದಿ ಸರ್ಕಾರದ ನಿಲುವನ್ನು ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.
ದೇಶದ ಜನತೆ ಏನು ಬೇಕಾದರೂ ತಿಳಿದುಕೊಳ್ಳಲಿ ಇದಕ್ಕೆಲ್ಲಾ ನಾವು ತಲೆ ಕಡಿಸಿಕೊಳ್ಳುವುದಿಲ್ಲ, ನಾವು ಏನು ಮಾಡಬೇಕು ಎಂದುಕೊಂಡಿದ್ದೇವೋ ಅದನ್ನೇ ಮಾಡುತ್ತೇವೆ ಎಂದು ಹೇಳಲು ಕೇಂದ್ರ ಪ್ರಯತ್ನಿಸುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸಧ್ಯದ ಪರಿಸ್ಥಿತಿಯಲ್ಲಿ ಬಿಜೆಪಿಯು ತನ್ನ ನಡೆಯನ್ನು ಬದಲಿಸುವಂತೆ ಕಾಣುತ್ತಿಲ್ಲ ಆದರೂ ನಾವು ಕಾಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ಶಕ್ತಿಕಾಂತ್ ದಾಸ್ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.ಊರ್ಜಿತ್ ಪಟೇಲ್ ಆರ್ಬಿಐ ಗವರ್ನರ್ ಸ್ಥಾನಕ್ಕೆ ಡಿಸೆಂಬರ್ 10ರಂದು ರಾಜೀನಾಮೆ ನೀಡಿದ್ದರು.
2015-17ರವರೆಗೂ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಶಕ್ತಿಕಾಂತ್ ದಾಸ್ ಆರ್ಬಿಐನ 25ನೇ ಗವರ್ನರ್ ಆಗಿ ಸಧಿಕಾರ ವಹಿಸಿಕೊಳ್ಳಲಿದ್ದಾರೆ.
Government has appointed two persons who vocally supported demonetisation to two key posts. What does it say about the Modi government?
— P. Chidambaram (@PChidambaram_IN) December 12, 2018
Is government telling the people of the country 'we don't care what you think, we will do exactly as we please'?
ದೇಶದ ಹಣಕಾಸು ಆಯೋಗದ ಸದಸ್ಯರಾಗಿರುವ ದಾಸ್, ಕಂದಾಯ ಇಲಾಖೆಯಿಂದ ವಿತ್ತ ಸಚಿವಾಲಯದ ಆರ್ಥಿಕ ವ್ಯವಹಾರಗಳ ಜವಾಬ್ದಾರಿ ವಹಿಸಿದರು. 2016ರ ನೋಟು ಅಪನಗದೀಕರಣ ರದ್ದತಿ ನಂತರ ಬೆಳವಣಿಗೆಯಲ್ಲಿ ದಾಸ್ ಸುದ್ದಿಯಲ್ಲಿದ್ದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications