ಚಿತ್ರಗಳಲ್ಲಿ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭ
ನವದೆಹಲಿ, ಏ. 27 : ಶನಿವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಮೂಲದ ಯೋಗಗುರು ಬಿ.ಕೆ.ಎಸ್.ಅಯ್ಯಂಗಾರ್ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಲಾಯಿತು. ಶನಿವಾರ ಕಾರ್ಯಕ್ರಮದಲ್ಲಿ ಒಟ್ಟು 56 ಗಣ್ಯರಿಗೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಂದು ಪದ್ಮ ವಿಭೂಷಣ, 11 ಪದ್ಮಭೂಷಣ ಹಾಗೂ 44 ಪದ್ಮಶ್ರೀ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರದಾನ ಮಾಡಿದರು. ಯೋಗಾಭ್ಯಾಸವನ್ನು ಆಧುನಿಕ ಜಗತ್ತಿಗೆ ಪರಿಚಯಿಸಿದ ಕೋಲಾರ ಜಿಲ್ಲೆಯ ಬೆಳ್ಳೂರು ಕೃಷ್ಣಮಾಚಾರ್ ಸುಂದರರಾಜ ಅಯ್ಯಂಗಾರ್ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ, ಕೃಷಿ ವಿಜ್ಞಾನಿ ಮಾದಪ್ಪ ಮಹದೇವಪ್ಪ, ನಟ ಪರೇಶ್ ರಾವಲ್, ಟೆನಿಸ್ ಪಟು ಲಿಯಾಂಡರ್ ಪೇಸ್, ಲೇಖಕ ರಸ್ಕಿನ್ ಬಾಂಡ್, ವಿಜ್ಞಾನಿ ಪಿ. ಬಲರಾಂ, ಇಸ್ರೋ ಅಧ್ಯಕ್ಷ ಕೆ. ರಾಧಾಕೃಷ್ಣನ್ ಸೇರಿದಂತೆ 56 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕ್ರಿಕೆಟಿಗ ಯುವರಾಜ್ ಸಿಂಗ್, ಲೇಖಕಿ ಅನಿತಾ ದೇಸಾಯಿ ಹಾಗೂ ಕಲಾವಿದ ಸುನೀಲ್ ದಾಸ್ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದರು. ಚಿತ್ರಗಳಲ್ಲಿ ನೋಡಿ ಪ್ರಶಸ್ತಿ ಪ್ರಧಾನ ಸಮಾರಂಭ (ಪಿಟಿಐ ಚಿತ್ರಗಳು)

ಪದ್ಮವಿಭೂಷಣ ಪಡೆದ ಬಿ.ಕೆ.ಎಸ್.ಅಯ್ಯಂಗಾರ್
ಯೋಗಾಭ್ಯಾಸವನ್ನು ಆಧುನಿಕ ಜಗತ್ತಿಗೆ ಪರಿಚಯಿಸಿದ ಕೋಲಾರ ಜಿಲ್ಲೆಯ ಬೆಳ್ಳೂರು ಕೃಷ್ಣಮಾಚಾರ್ ಸುಂದರರಾಜ ಅಯ್ಯಂಗಾರ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪ್ರದಾನ ಮಾಡಿದರು.

ರಸ್ಕಿನ್ ಬಾಂಡ್ ಗೆ ಪದ್ಮವಿಭೂಷಣ ಗೌರವ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಲೇಖಕ ರಸ್ಕಿನ್ ಬಾಂಡ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಿದರು.

ಸುಪ್ರಿತಾ ದೇವಿಗೆ ಪದ್ಮಶ್ರೀ ಪ್ರಶಸ್ತಿ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಬೆಂಗಾಲಿ ನಟಿ ಸುಪ್ರಿತಾ ದೇವಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದರು.

ರೆಹಮಾನ್ ಗೆ ಪದ್ಮಶ್ರೀ ಗೌರವ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಡ್ರಂ ವಾದಕ Musafir Ram Bhardwaj ಅವರಿಗೆ ಪ್ರದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ಪ್ರಭುವಿಗೆ ಪದ್ಮಶ್ರೀ ಪ್ರಶಸ್ತಿ
ಗಾಲಿ ಕುರ್ಚಿ ಟೆನಿಸ್ ಚಾಂಪಿಯನ್ ಬೋನಿಫೇಸ್ ಪ್ರಭು ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು.

ದಿನೇಶ್ ಸಿಂಗ್ ಅವರಿಗೆ ಪದ್ಮಶ್ರೀ ಗೌರವ
ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಪ್ರೊ.ದಿನೇಶ್ ಸಿಂಗ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಭಂಡಾರಿ ಅವರಿಗೆ ಪದ್ಮವಿಭೂಷಣ ಗೌರವ
ಶನಿವಾರ ರಾಷ್ಟ್ರಪತಿ ಭವನದಲ್ಲಿ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಲಿತ್ ಕುಮಾರ್ ಅವರಿಗೆ ಪದ್ಮಶ್ರೀ
ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ. ಲಲಿತ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications