ಪದ್ಮಾವತ್ ವಿರುದ್ಧ ಗಲಭೆ: ಬಿಜೆಪಿಯನ್ನು ದೂರಿದ ರಾಹುಲ್
ನವದೆಹಲಿ, ಜನವರಿ 25: ಪದ್ಮಾವತ್ ಚಿತ್ರದ ವಿರುದ್ಧ ದೇಶದಾದ್ಯಂತ ಆರಂಭವಾಗಿರುವ ಗಲಭೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ದೇಶದಲ್ಲಿ ದ್ವೇಷ ಮತ್ತು ಹಿಂಸೆ ಬಿತ್ತಲು ಬಿಜೆಪಿ ಪ್ರಯತ್ನಿಸುತ್ತಿದೆ' ಎಂದಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ಅವರ ಐತಿಹಾಸಿಕ ಕತೆ ಆಧಾರಿತ ಚಿತ್ರ ಪದ್ಮಾವತಿ, ಹಲವು ವಿರೋಧಗಳಿಂದಾಗಿ ಪದ್ಮಾವತ್ ಎಂದು ಹೆಸರು ಬದಲಿಸಿಕೊಂಡಿದೆ. ಸೆನ್ಸಾರ್ ಮಂಡಳಿ ಸಹ ಈ ಚಿತ್ರದಲ್ಲಿ ಯಾವುದೇ ರೀತಿಯ ಅವಹೇಳನಾಕಾರಿ ದೃಶ್ಯಗಳಿಲ್ಲ ಎಂದು ಬಿಡುಗಡೆಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದರೂ ಪ್ರತಿಭಟನೆ ಮಾತ್ರ ನಿಂತಿಲ್ಲ.
ನಿನ್ನೆ(ಜ.24) ಹರ್ಯಾಣದ ಗುರ್ಗಾಂವ್ ನ ಶಾಲಾ ವಾಹನವೊಂದರ ಮೇಲೆ ಪದ್ಮಾವತ್ ಪ್ರತಿಭಟನಾಕಾರರು ದಾಳಿ ನಡೆಸಿದ್ದರು. ಇದನ್ನು ತೀವ್ರವಾಗಿ ಖಂಡಿಸಿದ ರಾಹುಲ್ ಗಾಂಧಿ, ಪುಟ್ಟ ಮಕ್ಕಳ ಮೇಲೆ ಹಿಂಸೆ ನಡೆಸುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಚಿತ್ತೂರಿನ ರಾಣಿ ಪದ್ಮಿನಿಯ ಕತೆಯನ್ನೊಳಗೊಂಡ ಈ ಚಿತ್ರದಲ್ಲಿ ರಜಪೂತ ಭಾವನೆಗಳಿಗೆ ನೋವನ್ನುಂಟುಮಾಡಲಾಗಿದೆ ಎಂಬುದು ಪ್ರತಿಭಟನಾಕಾರರ ವಾದ. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಶಾಹಿದ್ ಕಪೂರ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications