ದೆಹಲಿಯಿಂದ ಪಾಕಿಸ್ತಾನಕ್ಕೆ ಹೊರಟ ಕೊನೆ ಬಸ್ಸಿನಲ್ಲಿ 2 ಪ್ರಯಾಣಿಕರು!
ನವದೆಹಲಿ, ಆಗಸ್ಟ್ 10: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರವನ್ನು ನೀಡುವ ಕಲಂ 370 ರದ್ದು ಪಡಿಸಿದ ಬಳಿಕ ಭಾರತ ಜೊತೆಗಿನ ಸಾರಿಗೆ ಸಂಪರ್ಕ, ವ್ಯಾಪಾರ ವಹಿವಾಟು ಸಂಬಂಧ ಕಡಿದುಕೊಳ್ಳಲು ಪಾಕಿಸ್ತಾನ ಮುಂದಾಗಿದೆ. ಸಂಜೋತಾ ಎಕ್ಸ್ ಪ್ರೆಸ್, ಥಾರ್ ಎಕ್ಸ್ ಪ್ರೆಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
"ದೆಹಲಿ-ಲಾಹೋರ್ ನಡುವಿನ ಬಸ್ ಸಂಚಾರವನ್ನು ಭಾನುವಾರದಿಂದ ಸ್ಥಗಿತಗೊಳಿಸಲಾಗುವುದು" ಎಂದು ಪಾಕಿಸ್ತಾನ ಸಚಿವ ಮುರಾದ್ ಸಯೀದ್ ಹೇಳಿದ್ದಾರೆ. ಇದಕ್ಕೂ ಮುನ್ನ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಅವರು ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಬಂದ್ ಮಾಡಿರುವ ಬಗ್ಗೆ ಘೋಷಿಸಿದ್ದರು.
In line with the decisions of NSC Pak-India bus service is suspended.
— Murad Saeed (@MuradSaeedPTI) August 9, 2019
ಅಟಲ್ ಬಿಹಾರಿ ವಾಜಪೇಯಿ ಅವರು 1999ರ ಫೆಬ್ರವರಿ 19ರಂದು ದೆಹಲಿ- ಲಾಹೋರ್ ನಡುವೆ ಬಸ್ ಸೇವೆಗೆ ಚಾಲನೆ ನೀಡಿದ್ದರು. ಕಾರ್ಗಿಲ್ ಯುದ್ಧ ನಡೆದಾಗಲೂ ಬಸ್ ಸೇವೆ ಸ್ಥಗಿತಗೊಂಡಿರಲಿಲ್ಲ. 2001ರಲ್ಲಿ ಭಾರತದ ಸಂಸತ್ತಿನ ಮೇಲೆ ಉಗ್ರರ ದಾಳಿ ನಡೆದ ಬಳಿಕ ಬಸ್ ಸೇವೆ ಬಂದ್ ಮಾಡಲಾಗಿತ್ತು. 2003ರಿಂದ ಮತ್ತೆ ಸಂಚಾರ ಆರಂಭಿಸಿತ್ತು.

ಬಸ್ ಸಂಚಾರ: ವಾರಕ್ಕೆ ಮೂರು ದಿನದಂತೆ ಉಭಯ ದೇಶಗಳ ನಡುವೆ ಬಸ್ ಸಂಚರಿಸುವ ವ್ಯವಸ್ಥೆಯಿದೆ. ದೆಹಲಿ ಸಾರಿಗೆ ಸಂಸ್ಥೆ ನಿಗಮ(ಪಿಟಿಡಿಸಿ)ದಿಂದ ಲಾಹೋರ್ ಗೆ ತೆರಳುವ ಬಸ್ ಗಳು ಅಂಬೇಡ್ಕರ್ ಟರ್ಮಿನಲ್ ನಿಂದ ಬೆಳಗ್ಗೆ ಹೊರಡುತ್ತವೆ. ಅತ್ತ ಕಡೆಯಿಂದ ಪಾಕಿಸ್ತಾನ ಪ್ರವಾಸೋದ್ಯಮ ನಿಗಮದ ಮೂಲಕ ಪಾಕಿಸ್ತಾನದಿಂದ ಒಂದು ಬಸ್ ಇತ್ತ ಕಡೆ ಪ್ರಯಾಣ ಬೆಳೆಸಿದ್ದಾರೆ.
ಭಾರತದಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ ಹಾಗೂ ಪಾಕಿಸ್ತಾನದಿಂದ ಮಂಗಳವಾರ, ಗುರುವಾರ್ ಮತ್ತು ಶನಿವಾರ ಬಸ್ ಸಂಚರಿಸುತ್ತವೆ.
ಇಬ್ಬರು ಪ್ರಯಾಣಿಕರು: ಸುಮಾರು 530 ಕಿ.ಮೀ ದೂರದ ಪ್ರಯಾಣಕ್ಕೆ 8 ಗಂಟೆಗಳ ಅವಧಿ ನಿಗದಿ ಮಾಡಲಾಗಿದೆ. "ಇಂದು ಬೆಳಗ್ಗೆ 6 ಗಂಟೆಗೆ ದೆಹಲಿ ಗೇಟ್ ಬಳಿಯ ಅಂಬೇಡ್ಕರ್ ಸ್ಟೇಡಿಯಂನಿಂದ ಹೊರಟ ಪಿಟಿಡಿಸಿ ಬಸ್ ಹೊರಡಿದ್ದು, ಇಬ್ಬರು ಪ್ರಯಾಣಿಕರಿದ್ದರು. ಲಾಹೋರ್ ನಿಂದ ಹೊರಟ ಬಸ್ ನಲ್ಲಿ ಮೂವರು ಪ್ರಯಾಣಿಕರು ಬರುತ್ತಿರುವ ಮಾಹಿತಿಯಿದೆ" ಎಂದು ದೆಹಲಿ ಸಾರಿಗೆ ನಿಗಮ(ಡಿಟಿಸಿ) ಅಧಿಕಾರಿ ಹೇಳಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications