ಮತ್ತೆ ಬಯಲಾಯ್ತು ಪಾಕ್ ವಿಕೃತಿ: ಕ್ರಿಕೆಟ್ ಜಾಹೀರಾತಿನಲ್ಲಿ ಅಭಿನಂದನ್ ಗೆ ಅವಮಾನ
Recommended Video
ನವದೆಹಲಿ, ಜೂನ್ 12: ಭಾರತ ಮತ್ತು ಪಾಕಿಸ್ತಾನದ ನಡುವೆ ಜೂನ್ 16 ರಂದು ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯದ ಜಾಹೀರಾತೊಂದು ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.
ಮಿಗ್ 21 ಬೈಸನ್ ಯುದ್ಧ ವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರು ಫೆಬ್ರವರಿ 27ರಂದು ಪಾಕ್ ಸೇನೆಯ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಲ್ಲದೆ, ಇತರ ವಿಮಾನಗಳನ್ನು ಹಿಮ್ಮೆಟ್ಟಿಸುವ ಸಮಯದಲ್ಲಿ ಪಾಕ್ ಸೇನೆಯ ವಶಕ್ಕೆ ಸಿಕ್ಕಿದ್ದರು. ಈ ಸಮಯದಲ್ಲಿ ಅವರು ಟೀ ಕುಡಿಯುತ್ತ, ಪಾಕಿಸ್ತಾನಿ ಸೇನೆ ಕೇಳುವ ಪ್ರಶ್ನೆಗಳಿಗೆ ಉತ್ತರ ನೀಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋವನ್ನೇ ಆಧಾರವಾಗಿಟ್ಟುಕೊಂಡು ಇದೀಗ ಜಾಹೀರಾತೊಂದನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ.

ಈ ಜಾಹೀರಾತಿನಲ್ಲಿ ಅಭಿನಂದನ್ ವರ್ಧಮಾನ್ ಅವರಂತೆಯೇ ವೇಷಧರಿಸಿದ ವ್ಯಕ್ತಿಯೊಬ್ಬ ಟೀ ಹೀರುತ್ತ, ಪಾಕ್ ಸೇನೆ ಕೇಳುವ ಪ್ರಶ್ನೆಗೆ ಉತ್ತರಿಸುತ್ತಿರುವ ದೃಶ್ಯವನ್ನು ಪುನರ್ನಿರ್ಮಿಸಲಾಗಿದೆ. ವಿಡಿಯೋ ನೋಡಲು ಈ ಲಿಂಕ್ ಕ್ಲಿಕ್ ಮಾಡಿ.
ವಿಡಿಯೋದಲ್ಲೇನಿದೆ?
ಈ ವಿಡಿಯೋದಲ್ಲಿನ ಸಂಭಾಷಣೆಯ ಸಾರಾಂಶ ಇಲ್ಲಿದೆ.
ಪಾಕ್ ಸೇನೆ: ನೀವು ಟಾಸ್ ಗೆದ್ದರೆ ಯಾವ ನಿರ್ಧಾರ ಕೈಗೊಳ್ಳುತ್ತೀರಿ?
ವ್ಯಕ್ತಿ(ಅಭಿನಂದನ್ ಅವರಂತೆ ವೇಷ ಧರಿಸಿದ): ಸಾರಿ ಸರ್, ನಾನು ನಿಮಗೆ ಅದನ್ನು ಹೇಳುವಂತಿಲ್ಲ.
ಪಾಕ್ ಸೇನೆ: ತಂಡದಲ್ಲಿರುವ ಹನ್ನೊಂದು ಜನರು ಯಾರ್ಯಾರು?
ವ್ಯಕ್ತಿ: ಸಾರಿ ಸರ್, ಅದನ್ನು ನಾನು ಹೇಳುವಂತಿಲ್ಲ.
ಪಾಕ್ ಸೇನೆ: ಟೀ ಹೇಗಿದೆ?
ವ್ಯಕ್ತಿ: ಟೀ ಬಹಳ ಚೆನ್ನಾಗಿದೆ ಸರ್
ಪಾಕ್ ಸೇನೆ: ಸರಿ, ನೀವಿನ್ನು ಹೊರಡಬಹುದು.
ವ್ಯಕ್ತಿ: ಓಕೆ ಸರ್ (ಎಂದು ಕೈಯಲ್ಲಿ ಟೀ ಕಪ್ ಹಿಡಿದೇ ಹೊರಡುತ್ತಾರೆ)
ಪಾಕ್ ಸೇನೆ: ಕಪ್ ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀರಿ..?(ಎಂದು ಆತನ ಕೈಯಲ್ಲಿದ್ದ ಟೀ ಕಪ್ ಅನ್ನು ಕಿತ್ತುಕೊಳ್ಳುತ್ತಾರೆ)
ಈ ಬಾರಿ ಪಾಕಿಸ್ತಾನವೇ ವಿಶ್ವಕಪ್ ಗೆಲ್ಲಿದೆ ಎಂಬರ್ಥದಲ್ಲಿ ಈ ಜಾಹೀರಾತು ಮಾಡಲಾಗಿದ್ದು, ಜೂನ್ 16 ರಂದು ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯಲಿದೆ.
ಪಾಕಿಸ್ತಾನಕ್ಕೆ ಟೀ ಕಪ್ ಅಲ್ಲದೆ ಬೇರೆ ಕಪ್ ಪಡೆಯೋಕೆ ಸಾಧ್ಯವಿಲ್ಲ ಅನ್ನೋದು ಅವರಿಗೂ ಗೊತ್ತಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನವನ್ನು ಲೇವಡಿ ಮಾಡಲಾಗುತ್ತಿದೆ. ಜೊತೆಗೆ ಅಭಿನಂದನ್ ಅವರ ವ್ಯಕ್ತಿತ್ವಕ್ಕೆ ಘಾಸಿಯಾಗುವಂಥ ಜಾಹೀರಾತು ಹೊರತಂದ ಪಾಕಿಸ್ತಾನದ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications