2 ಉಗ್ರ ಸಂಘಟನೆಯಿಂದ ಭಾರತದ ಮೇಲೆ ಜಂಟಿ ದಾಳಿ ಸಂಚು: ಗುಪ್ತಚರ ಇಲಾಖೆ
ನವದೆಹಲಿ, ಮಾರ್ಚ್ 16: ಚುನಾವಣೆ ಸಮಯದಲ್ಲಿ ಭಾರತದಲ್ಲಿ ಹಿಂಸಾತ್ಮಕ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ಪಾಕಿಸ್ತಾನವೇ ಜೈಷ್ ಇ ಮೊಹಮ್ಮದ್ ಮತ್ತು ತಾಲಿಬಾನ್ ಉಗ್ರ ಸಂಘಟನೆಗಳನ್ನು ಮುಂದಿಟ್ಟುಕೊಂಡು ಭಾರತದ ಮೇಲೆ ದಾಳಿ ನಡೆಸಲು ಮುಂದಾಗಿದೆ ಎಂಬ ಆಘಾತಕಾರಿ ವಿಷಯವನ್ನು ಭಾರತೀಯ ಗುಪ್ತಚರ ಇಲಾಖೆ ಬಯಲು ಮಾಡಿದೆ.
ಪಾಕಿಸ್ತಾನ ಗುಪ್ತಚರ ಇಲಾಖೆ ತಾಲಿಬಾನ್ ಮತ್ತು ಜೈಷ್ ಇ ಮೊಹಮ್ಮದ್ ಉಗ್ರ ಸಂಘಟನೆಗಳ ಜಂಟಿ ದಾಳಿಗೆ ಸಂಚು ರೂಪಿಸಿದೆ ಎಂದು ಅದು ಹೇಳಿದೆ.
ಭಾರತ ಪಾಕಿಸ್ತಾನದ ಬಾಲಕೋಟ್ ಮೇಲೆ ದಾಳಿ ನಡೆಸುವ ಮೊದಲೇ ಜೆಇಎಂ, ತಾಲಿಬಾನ್ ಮತ್ತು ಹಕ್ಕಾನಿ ಸಂಘಟನೆಗಳು ಗುಟ್ಟಾಗಿ ಸಭೆ ಸೇರಿದ್ದವು ಎಂಬ ವಿಷಯವೂ ಬಯಲಾಗಿದೆ.

ಭಾರತದ ವಿರುದ್ಧ 'ಜಿಹಾದ್'(ಧರ್ಮಯುದ್ಧ) ಸಾರುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿತ್ತು. ಈ ಸಭೆ ಡಿಸೆಂಬರ್ 15-20 ರ ಒಳಗೆ ನಡೆದಿರಬಹುದು ಎಂದು ಗುಪ್ತಚರ ಇಲಾಖೆ ಮಾಹಿತಿ ಕಲೆ ಹಾಕಿದೆ.
ಅಫಘಾನಿಸ್ತಾನದಲ್ಲಿ ಅಮೆರಿಕ ಬೆಂಬಲಿತ ಪಡೆಗಳಿಗಳ ವಿರುದ್ಧ ದಾಳಿ ನಡೆಸುತ್ತಲೇ ಬಂದಿರುವ ತಾಲಿಬಾನ್ ಸಂಘಟನೆಯ ಮೂಲಕ ಜೆಇಎಂ ಗೆ ತರಬೇತಿ ನೀಡಲಾಗಿದ್ದು, ಆತ್ಮಾಹುತಿ ಬಾಂಬ್ ದಾಳಿಯನ್ನು ಹೇಗೆ ನಡೆಸಬೇಕು ಎಂಬ ಬಗ್ಗೆ ಅದೇ ತರಬೇತಿ ನೀಡಿದೆ ಎನ್ನಲಾಗಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications