ಉಗ್ರ ನುಡಿದ ಸತ್ಯ: 2009ರ ಜಮ್ಮು-ಕಾಶ್ಮೀರ ಬಸ್ ನಿಲ್ದಾಣ ಸ್ಫೋಟದ ಹಿಂದೆ ಐಎಸ್ಐ ಕೈವಾಡ
ನವದೆಹಲಿ, ಅಕ್ಟೋಬರ್ 13: ಪಾಕಿಸ್ತಾನ ಗುಪ್ತಚರ ಇಲಾಖೆ(ಐಎಸ್ಐ) ಜೊತೆ ನಂಟು ಹೊಂದಿರುವ ಬಂಧಿತ ಉಗ್ರ ಮೊಹಮ್ಮದ್ ಅಶ್ರಫ್ ಅಲಿ ವಿಚಾರಣೆ ವೇಳೆ ಆಘಾತಕಾರಿ ಅಂಶವೊಂದು ಬಹಿರಂಗವಾಗಿದೆ.
2009ರ ಜಮ್ಮು ಕಾಶ್ಮೀರ ಬಸ್ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದ ಹಿಂದೆ ಐಎಸ್ಐ ಕೈವಾಡವಿದೆ ಎಂದು ಆರೋಪಿ ಬಾಯಿ ಬಿಟ್ಟಿದ್ದಾನೆ ಎಂದು ಗೊತ್ತಾಗಿದೆ. ಮೂಲಗಳ ಪ್ರಕಾರ, 2011 ರ ದೆಹಲಿ ಹೈಕೋರ್ಟ್ ಹೊರಗೆ ನಡೆದ ಸ್ಫೋಟಕ್ಕೆ ಮುಂಚೆ, ಅವರು ಆವರಣದ ರೆಸಿಯನ್ನು ನಡೆಸಿದ್ದರು ಎಂದು ಹೇಳಲಾಗಿದೆ. ಆದರೆ, ಸ್ಫೋಟದಲ್ಲಿ ಉಗ್ರ ಮೊಹಮ್ಮದ್ ಅಶ್ರಫ್ ಅಲಿ ಭಾಗಿಯಾಗಿದ್ದಾನೋ ಇಲ್ಲವೋ ಎಂಬುದು ವಿಚಾರಣೆಯಿಂದ ಸ್ಪಷ್ಟವಾಗಬೇಕಿದೆ.
ಕಳೆದ 2011ರಲ್ಲಿ ಆತ ಹಲವು ಬಾರಿ ITO ನಲ್ಲಿರುವ ಪೊಲೀಸ್ ಪ್ರಧಾನ ಕಛೇರಿಯ (ಹಳೆಯ ಪೊಲೀಸ್ ಪ್ರಧಾನ ಕಛೇರಿಯನ್ನು) ಸುತ್ತಮುತ್ತಲಿನಲ್ಲಿ ಓಡಾಡಿದ್ದಾನೆ. ಆದರೆ, ಪೊಲೀಸರು ಜನರನ್ನು ಆವರಣದ ಹೊರಗೆ ನಿಲ್ಲಿಸಲು ಬಿಡದ ಕಾರಣಕ್ಕೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಾಗಿರಲಿಲ್ಲ. ಇದರೊಂದಿಗೆ ಆತ ಪಾಕಿಸ್ತಾನದಲ್ಲಿರುವ ತನ್ನ ISBT ಸಹಚರರಿಗೆ ಮಾಹಿತಿಯನ್ನು ಕಳುಹಿಸಿದ್ದನು ಎಂದು ಗೊತ್ತಾಗಿದೆ.

ಪ್ರಸ್ತುತ ತನಿಖಾ ತಂಡದಿಂದ ವಿಚಾರಣೆ:
ನವದೆಹಲಿಯಲ್ಲಿ ಯಾವುದೇ ರೀತಿ ಸ್ಫೋಟ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಬಂಧಿತ ಉಗ್ರ ಮೊಹಮ್ಮದ್ ಅಶ್ರಫ್ ಅಲಿ ಭಾಗಿಯಾಗಿದ್ದಾನೆಯೇ ಎಂಬುದರ ಬಗ್ಗೆ ತನಿಖಾ ತಂಡದ ಅಧಿಕಾರಿಗಳು ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಐಎಸ್ಐ ಉಗ್ರ ಅಶ್ರಫ್ ಅಲಿ ಹೇಳಿದ್ದೇನು?:
ಜಮ್ಮು ಕಾಶ್ಮೀರದ ಬಸ್ ನಿಲ್ದಾಣದಲ್ಲಿ 2009ರಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 3 ರಿಂದ 4 ಮಂದಿ ಮೃತಪಟ್ಟಿದ್ದರು. ಅಂದು ನಡೆದ ಬಾಂಬ್ ಸ್ಫೋಟದ ಹಿಂದೆ ಐಎಸ್ಐ ಅಧಿಕಾರಿ ನಾಸಿರ್ ಕೈವಾಡವಿದೆ ಎಂಬುದರ ಬಗ್ಗೆ ಬಂಧಿತ ಉಗ್ರ ಮೊಹಮ್ಮದ್ ಅಶ್ರಫ್ ಅಲಿ ವಿಚಾರಣೆ ವೇಳೆ ತಿಳಿಸಿದ್ದಾನೆ. 2011ರಲ್ಲಿ ದೆಹಲಿ ಹೈಕೋರ್ಟ್ ಬಳಿ ಸ್ಫೋಟ ನಡೆಸಲು ಇಬ್ಬರು ಪಾಕಿಸ್ತಾನಿಯರು ಬಂದಿದ್ದು, ಅವರಲ್ಲಿ ಒಬ್ಬರನ್ನು ಗುಲಾಂ ಸರ್ವಾರ್ ಎಂದು ಅಶ್ರಫ್ ಅಲಿ ಬಹಿರಂಗಪಡಿಸಿದ್ದಾನೆ. ಜಮ್ಮು ಮತ್ತು ಕಾಶ್ಮೀರದಲ್ಲಿ 5 ಸೇನಾ ಸಿಬ್ಬಂದಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಇ-ಮೇಲ್ ಮೂಲಕ ಐಎಸ್ಐ ಸಂಪರ್ಕ:
ಉಗ್ರ ಮೊಹಮ್ಮದ್ ಅಶ್ರಫ್ ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್ಐ) ಜೊತೆಗೆ ನೇರ ಸಂಪರ್ಕದಲ್ಲಿದ್ದನು ಎಂದು ಗೊತ್ತಾಗಿದೆ. ಬಂಧಿತ ಭಯೋತ್ಪಾದಕ ತಾನು ಕೆಲವು ದಿನಗಳವರೆಗೆ ಕಾಶ್ಮೀರದಲ್ಲೂ ವಾಸವಾಗಿರುವ ಬಗ್ಗೆ ಹೇಳಿಕೊಂಡಿದ್ದಾನೆ. ಐಎಸ್ಐ ಅಧಿಕಾರಿ ನಾಸಿರ್ ಆಜ್ಞೆಯ ಮೇರೆಗೆ ತಾನು ಹಲವಾರು ಬಾರಿ ಶಸ್ತ್ರಾಸ್ತ್ರಗಳನ್ನು ಪೂರೈಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಿದ್ದೆ ಎಂದು ಬಂಧಿತ ಉಗ್ರ ಮೊಹಮ್ಮದ್ ಅಶ್ರಫ್ ಅಲಿ ಹೇಳಿದ್ದಾನೆ. ತಾನು ಯಾವಾಗಲೂ ಐಎಸ್ಐ ಅಧಿಕಾರಿಗಳೊಂದಿಗೆ ಇ-ಮೇಲ್ ಮೂಲಕ ಸಂವಹನ ನಡೆಸುತ್ತಿದ್ದೆ ಎಂದು ಉಗ್ರ ಬಹಿರಂಗಪಡಿಸಿದ್ದಾನೆ.
ಮಂಗಳವಾರ ಸೆರೆ ಸಿಕ್ಕಿದ್ದ ಉಗ್ರ ಅಶ್ರಫ್ ಅಲಿ:
ಪಾಕಿಸ್ತಾನ ಮೂಲದ ಭಯೋತ್ಪಾದಕನನ್ನು ಮಂಗಳವಾರ ದೆಹಲಿಯ ಲಕ್ಷ್ಮೀನಗರ ಪ್ರದೇಶದಲ್ಲಿ ಬಂಧಿಸಲಾಗಿತ್ತು. ಪಾಕಿಸ್ತಾನದ ನರೋವಾಲ್ ನಿವಾಸಿ ಮೊಹಮ್ಮದ್ ಅಶ್ರಫ್ ಬಂಧಿತ ಉಗ್ರ ಎಂದು ಗುರುತಿಸಲಾಗಿದ್ದು, ಬಂಧಿತ ಉಗ್ರನಿಂದ ನಕಲಿ ಗುರುತಿನ ಚೀಟಿ, ಎಕೆ 47 ಬಂದೂಕು, ಗ್ರೆನೇಡ್ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ದೆಹಲಿಯಲ್ಲಿ ವಿಶೇಷ ತನಿಖಾ ತಂಡದ ಕೈಗೆ ಸಿಕ್ಕಿ ಬಿದ್ದಿರುವ ಉಗ್ರ ಮೊಹಮ್ಮದ್ ಅಶ್ರಫ್ ಅಲಿ, ಮೌಲಾನಾ ಆಗಿ ವಾಸವಾಗಿದ್ದನು. ದೆಹಲಿಯಷ್ಟೇ ಅಲ್ಲದೇ ಬೇರೆ ಬೇರೆ ನಗರಗಳಲ್ಲಿ ಈತ ಮೌಲಾನಾ ಆಗಿ ವಾಸವಾಗಿದ್ದನು ಎಂದು ವಿಚಾರಣೆ ವೇಳೆ ತಿಳಿದು ಬಂದಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications