ದಾಳಿಯ ಸಾಕ್ಷ್ಯ ಕೇಳುವವರು ಪಾಕಿಸ್ತಾನದ ದಲ್ಲಾಳಿಗಳು: ಮೋದಿ
Recommended Video

ನವದೆಹಲಿ, ಮಾರ್ಚ್ 05: ಭಾರತವು ಪಾಕ್ನ ಉಗ್ರರ ಅಡಗುತಾಣಗಳ ಮೇಲೆ ನಡೆಸಿದ ವೈಮಾನಿಕ ದಾಳಿಗೆ ಸಾಕ್ಷ್ಯ ಕೇಳುವವರು ಪಾಕಿಸ್ತಾನದ ದಲ್ಲಾಳಿಗಳು ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಭಾರತೀಯ ಸೇನೆ ಜೈಶೆ-ಎ-ಮೊಹಮ್ಮದ್ ಉಗ್ರರ ಅಡಗುತಾಣಗಳ ಮೇಲೆ ಮಾಡಿದ ದಾಳಿಗೆ ಸಾಕ್ಷ್ಯ ಕೇಳುವವರು ಭಾರತದ ಪರ ಕೆಲಸ ಮಾಡುತ್ತಿಲ್ಲದ, ಪಾಕಿಸ್ತಾನದ ಪರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಭಾರತೀಯ ವಾಯುಸೇನೆಯು ಪಾಕಿಸ್ತಾನದ ಬಾಲಾಕೋಟ್ ಹಾಗೂ ಇನ್ನೂ ಕೆಲವು ಉಗ್ರರ ಅಡಗುತಾಣಗಳ ಮೇಲೆ ನಡೆಸಿದ್ದ ದಾಳಿಯಲ್ಲಿ ಹತರಾದವರ ಬಗ್ಗೆ ಸಾಕ್ಷ್ಯಗಳನ್ನು ವಿಪಕ್ಷಗಳು ಕೇಳುತ್ತಿದ್ದವು. ಇದು ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ.

ನಾನು ಭಯೋತ್ಪಾದಕರ ವಿರುದ್ಧ ಹೋರಾಟ ಮಾಡುತ್ತಿದ್ದರೆ, ವಿಪಕ್ಷಗಳು ನನ್ನ ವಿರುದ್ಧ ಹೋರಾಟ ಮಾಡುತ್ತಿವೆ, ನಾವು ಪಾಕಿಸ್ತಾನದ ಮೇಲೆ ದಾಳಿ ಮಾಡಿದೆವು ಆದರೆ ಅದರ ಪರಿಣಾಮ ಭಾರತದಲ್ಲಿ ಕೂತಿದ್ದ ಕೆಲವರ ಮೇಲೆ ಆಗಿದೆ ಎಂದು ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಮಹಾಘಟಬಂಧನ್ ನ ಸದಸ್ಯರನ್ನು 'ಮಹಾಕಲಬೆರಕೆ' ಎಂದ ಮೋದಿ, ಇವರು ಪಾಕಿಸ್ತಾನದ ದಲ್ಲಾಳಿಗಳಂತೆ ವರ್ತಿಸುತ್ತಿದ್ದಾರೆ. ಅವರಿಗೆ ಪಾಕಿಸ್ತಾನವು ಶಾಂತಿಯ ರಾಯಭಾರಿಯಂತೆ ಕಾಣುತ್ತಿದೆ. ಅವರು ದೇಶದ ಜನರ ದಿಕ್ಕುತಪ್ಪಿಸುತ್ತಿದ್ದಾರೆ. ನಮ್ಮ ಸೇನೆಯ ಶಕ್ತಿಯನ್ನು ಅವರು ಅನುಮಾನಿಸುತ್ತಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications