ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸ್
ನವದೆಹಲಿ, ಡಿಸೆಂಬರ್ 9: ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೂ ಲೋಕಸಭೆಯಲ್ಲಿ ಮಹತ್ವದ ಪೌರತ್ವ ತಿದ್ದುಪಡಿ ಮಸೂದೆ, 2019 (ಕ್ಯಾಬ್) ಸೋಮವಾರ ಅಂಗೀಕಾರವಾಯಿತು.
ಗೃಹ ಸಚಿವ ಅಮಿತ್ ಶಾ ಮಸೂದೆಯನ್ನು ಮಂಡಿಸಿದರು. ಆಗ ಪ್ರತಿಪಕ್ಷಗಳು ಭಾರಿ ಆಕ್ಷೇಪ ವ್ಯಕ್ತಪಡಿಸಿದರು. ಕೆಲ ಕಾಲ ಚರ್ಚೆಯ ಬಳಿಕ ಸ್ಪೀಕರ್ ಮಸೂದೆಯನ್ನು ಮತಕ್ಕೆ ಹಾಕಿದರು. 293 ಮತಗಳು ಮಸೂದೆ ಪರವಾಗಿ ಬಂದರೆ, 82 ಮತಗಳು ಮಸೂದೆ ವಿರುದ್ಧವಾಗಿ ಬಿದ್ದವು.
ಪೌರತ್ವ ತಿದ್ದುಪಡಿ ಮಸೂದೆ, 2019ರ (ಕ್ಯಾಬ್) ಪ್ರಕಾರ 2014ರ ಡಿ. 31ರ ಒಳಗೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನಗಳಿಂದ ಧಾರ್ಮಿಕ ಶೋಷಣೆಗೆ ಒಳಪಟ್ಟು ಭಾರತಕ್ಕೆ ನಿರಾಶ್ರಿತರಾಗಿ ಬಂದ ಹಿಂದೂ, ಕ್ರೈಸ್ತ, ಸಿಖ್, ಬೌದ್ಧ, ಜೈನ ಮತ್ತು ಪಾರ್ಸಿ ಸಮುದಾಯಗಳ ಜನರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸದೆ ಅವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮಿಜೋರಾಂ ಈ ಮಸೂದೆಯಿಂದ ಸಂಪೂರ್ಣವಾಗಿ ವಿನಾಯಿತಿ ಪಡೆದಿವೆ. ಮೇಘಾಲಯ, ಅಸ್ಸಾಂನ ಕೆಲವು ಭಾಗಗಳು ಮತ್ತು ತ್ರಿಪುರಾ ಬಹುತೇಕ ವಿನಾಯಿತಿ ಪಡೆದಿವೆ. ಆದರೆ ಮಣಿಪುರ ಸಂಪೂರ್ಣವಾಗಿ ಈ ಮಸೂದೆ ವ್ಯಾಪ್ತಿಗೆ ಒಳಪಡಲಿದೆ. ಮಣಿಪುರಕ್ಕೆ ಸಂಬಂಧಿಸಿದಂತೆ ಸರ್ಕಾರವು ವಿಶೇಷ ಪ್ರಾತಿನಿಧ್ಯಗಳನ್ನು ಘೋಷಿಸುವ ಸಾಧ್ಯತೆ ಇದೆ.
ಪೌರತ್ವ ತಿದ್ದುಪಡಿ ಮಸೂದೆಯ ಮಂಡನೆ ವೇಳೆ ಉಂಟಾದ ಆಕ್ಷೇಪಗಳು ಮತ್ತು ಅದಕ್ಕೆ ಗೃಹ ಸಚಿವ ಅಮಿತ್ ಶಾ ನೀಡಿದ ಉತ್ತರಗಳೇನು? ಮುಂದೆ ಓದಿ.
Assam: Shops closed in Guwahati following shutdown call by various organisations opposing #CitizenshipAmendmentBill2019. pic.twitter.com/pEiienfDjd
— ANI (@ANI) December 9, 2019
Assam: People stage protest against #CitizenshipAmendmentBill2019 in Golaghat. pic.twitter.com/y4J76IU5it
— ANI (@ANI) December 9, 2019