ರಾಜ್ಯಸಭೆ ಗದ್ದಲ: ಉಪವಾಸ ಪ್ರತಿಭಟನೆಗೆ ಮುಂದಾದ ಉಪಾಧ್ಯಕ್ಷ ಹರಿವಂಶ್ ಸಿಂಗ್
ನವದೆಹಲಿ, ಸೆಪ್ಟೆಂಬರ್ 22: ರಾಜ್ಯಸಭೆಯಲ್ಲಿ ಭಾನುವಾರ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುವ ವೇಳೆ ವಿರೋಧಪಕ್ಷಗಳ ಸಂಸದರು ತಮ್ಮೊಂದಿಗೆ ಅಶಿಸ್ತಿನಿಂದ ವರ್ತಿಸಿದ್ದನ್ನು ಖಂಡಿಸಿ 24 ಗಂಟೆ ಉಪವಾಸ ನಿರಶನ ನಡೆಸುವುದಾಗಿ ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ಸಿಂಗ್ ತಿಳಿಸಿದ್ದಾರೆ.
ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಅವರಿಗೆ ಮಂಗಳವಾರ ಬರೆದಿರುವ ಸುದೀರ್ಘ ಪತ್ರದಲ್ಲಿ ಅವರು, ಭಾನುವಾರ ರಾಜ್ಯಸಭೆಯಲ್ಲಿ ನಡೆದ ಗದ್ದಲದಿಂದಾಗಿ ಎರಡು ರಾತ್ರಿ ತಮ್ಮಿಂದ ನಿದ್ದೆ ಮಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
'ಪ್ರಜಾಪ್ರಭುತ್ವದ ಹೆಸರಿನಲ್ಲಿ ಸದನದ ಗೌರವಾನ್ವಿತ ಸದಸ್ಯರು ದೈಹಿಕ ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ' ಎಂದು ಆರೋಪಿಸಿದ್ದಾರೆ.

ಆ ದಿನ ನಡೆದ ಘಟನೆಯ ವಿವರಗಳನ್ನು ಬರೆದಿರುವ ಹರಿವಂಶ್, ತಮ್ಮ ವಿಧೇಯ ಹಿನ್ನೆಲೆಯ ಬಗ್ಗೆ ವಿವರಿಸಿದ್ದಾರೆ. ಬುದ್ಧನಿಂದ ಸ್ಫೂರ್ತಿ ಪಡೆದಿರುವ ತಾವು, ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರಲ್ಲಿ ಸ್ವಯಂ ಶುದ್ಧೀಕರಣದ ಪ್ರೇರಣಿ ಮೂಡುವ ಆಶಯದೊಂದಿಗೆ ಒಂದು ದಿನದ ಉಪವಾಸ ಆಚರಿಸುವುದಾಗಿ ತಿಳಿಸಿದ್ದಾರೆ. ಆದರೆ ರಾಜ್ಯಸಭೆಯ ಕಲಾಪಗಳಿಗೆ ಹಾಜರಾಗುವುದಾಗಿ ಹೇಳಿದ್ದಾರೆ.
ಎಲ್ಲಿ ನಡೆದ ಘಟನೆಯಿಂದ ನನಗೆ ತೀವ್ರ ನೋವಾಗಿದೆ. ಮಾನಸಿಕ ಒತ್ತಡ ಉಂಟಾಗಿದೆ. ನನ್ನ ಮುಂದೆ ನಡೆದ ಘಟನೆಯು ಸದನ ಹಾಗೂ ರಾಜ್ಯಸಭೆ ಅಧ್ಯಕ್ಷ ಸ್ಥಾನದ ಘನತೆಗೆ ಊಹಿಸಲಾಗದ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications