ಸಂಸತ್ನಲ್ಲಿ ಇನ್ನು ಪಾತ್ರೆ, ಊಟದ ಬಾಕ್ಸ್ ತೊಳೆಯುವಂತಿಲ್ಲ!
ನವದೆಹಲಿ, ಅಕ್ಟೋಬರ್ 22: ಸಂಸತ್ಗೆ ದಿನವೂ ಮಧ್ಯಾಹ್ನದ ಊಟ ತರುವ ನೂರಾರು ಉದ್ಯೋಗಿಗಳು ವಿಚಿತ್ರ ಸಮಸ್ಯೆಯೊಂದಕ್ಕೆ ಸಿಲುಕಿದ್ದಾರೆ. ಅವರಿಗೆ ಇನ್ನು ಮುಂದೆ ಸಂಸತ್ ಆವರಣದಲ್ಲಿ ಎಲ್ಲಿಯೂ ಪಾತ್ರೆಗಳು ಹಾಗೂ ಊಟದ ಬಾಕ್ಸ್ಗಳನ್ನು ತೊಳೆಯಲು ಅವಕಾಶ ನೀಡುವುದಿಲ್ಲ.
ಸಂಸತ್ ಭವನದ ಉದ್ಯೋಗಿಗಳು ಮಧ್ಯಾಹ್ನ ಊಟದ ಬಳಿಕ ಸಂಕೀರ್ಣದಲ್ಲಿನ ವಾಶ್ರೂಮ್ಗಳಲ್ಲಿ ಊಟದ ಬಾಕ್ಸ್ ಹಾಗೂ ಪಾತ್ರೆಗಳನ್ನು ತೊಳೆಯುತ್ತಿದ್ದಾರೆ. ಇದರಿಂದ ಚರಂಡಿ ಕೊಳವೆಗಳು ಕಟ್ಟಿಕೊಂಡು ಸಮಸ್ಯೆಯಾಗುತ್ತಿದೆ. ಶೌಚಾಲಯ ಬಳಕೆದಾರರಿಗೆ ತೊಂದರೆಯಾಗುತ್ತಿದೆ. ಹಾಗೆಯೇ ಸಂಸತ್ನಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯದ ಗುಣಮಟ್ಟ ಹಾಳಾಗುತ್ತಿದೆ ಎಂದು ಲೋಕಸಭೆ ಕಾರ್ಯಾಲಯ ಬುಧವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಹೇಳಲಾಗಿದೆ.
ಈ ವಿಚಾರವನ್ನು ಅಧಿಕಾರಿಗಳು ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ಮುಂದೆ ಸ್ವಚ್ಛತೆ ಹಾಗೂ ನೈರ್ಮಲ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಸಂಸತ್ ಭವನದಲ್ಲಿ ಪಾತ್ರೆ ಹಾಗೂ ಊಟದ ಬಾಕ್ಸ್ಗಳನ್ನು ತೊಳೆಯುವಂತಿಲ್ಲ ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ಸಂಸತ್ನಲ್ಲಿ ಉತ್ತರ ರೈಲ್ವೇಸ್ ಕ್ಯಾಟೀಂನ್ ನಡೆಸುತ್ತಿತ್ತು. ಕ್ಯಾಂಟೀನ್ನಲ್ಲಿ ಊಟದ ವೇಳೆ ಹೆಚ್ಚಿನ ಜನರು ಸೇರುವುದನ್ನು ತಪ್ಪಿಸಲು ಕ್ಯಾಂಟೀನ್ನಲ್ಲಿ ಊಟ ತಯಾರಿಸುತ್ತಿಲ್ಲ. ಸಣ್ಣಪುಟ್ಟ ತಿನಿಸು ಮತ್ತು ಪಾನೀಯವನ್ನು ಪೂರೈಸಲು ಮಾತ್ರವೇ ಕ್ಯಾಂಟೀನ್ಗಳಿಗೆ ಅವಕಾಶ ನೀಡಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಉದ್ಯೋಗಿಗಳು ಮನೆಯಿಂದಲೇ ಊಟ ತರುತ್ತಿದ್ದಾರೆ. ಸಂಸತ್ ಭವನದಲ್ಲಿ 2,000ಕ್ಕೂ ಅಧಿಕ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ 1,000 ಭದ್ರತಾ ಸಿಬ್ಬಂದಿ ಇದ್ದಾರೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications