ಸಂಸತ್ ಅಧಿವೇಶನ 14ನೇ ದಿನ: ರಾಜ್ಯಸಭೆಯಲ್ಲಿ ಓಮಿಕ್ರಾನ್ ಸದ್ದು
ನವದೆಹಲಿ, ಡಿಸೆಂಬರ್ 16: ಸಂಸತ್ ಚಳಿಗಾಲ ಅಧಿವೇಶನ ಗುರುವಾರ 14ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಸಭೆಯು ಬುಧವಾರ ಕೇಂದ್ರೀಯ ಜಾಗೃತ ಆಯೋಗವನ್ನು ಅಂಗೀಕರಿಸಿದೆ. ಈ ತಿದ್ದುಪಡಿ ಮಸೂದೆಯು ಐದು ವರ್ಷಗಳ ಜೊತೆಗೆ ಒಂದು ವರ್ಷ ಅವಧಿಯನ್ನು ವಿಸ್ತರಿಸುವುದಕ್ಕೆ ಅನುಮತಿ ನೀಡುತ್ತದೆ.
ಇನ್ನೊಂದು ಕಡೆ ರಾಜ್ಯಸಭೆಯ 12 ಸಂಸದರ ಅಮಾನತು ಆದೇಶವನ್ನು ವಿರೋಧಿಸಿ ವಿರೋಧ ಪಕ್ಷದ ಸದಸ್ಯರು ತಮ್ಮ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಈ ಕ್ಷಣವೇ ಸಂಸದರ ಅಮಾನತು ಆದೇಶವನ್ನು ವಾಪಸ್ ಪಡೆಯುವಂತೆ ಪ್ರತಿಪಕ್ಷ ನಾಯಕರು ಆಗ್ರಹಿಸುತ್ತಿದ್ದಾರೆ. ಕಳೆದ ನವೆಂಬರ್ 29ರಂದು ಸಂಸತ್ ಅಧಿವೇಶನ ಆರಂಭವಾದ ದಿನವೇ 12 ರಾಜ್ಯಸಭೆ ಸದಸ್ಯರನ್ನು ಚಳಿಗಾಲ ಅಧಿವೇಶನದಿಂದ ಅಮಾನತುಗೊಳಿಸಲಾಗಿತ್ತು. ಡಿಸೆಂಬರ್ 23ರವರೆಗೂ ನಡೆಯಲಿರುವ ಸಂಸತ್ ಅಧಿವೇಶನದಲ್ಲಿ ಈ ಸದಸ್ಯರು ಭಾಗಯಾಗದಂತೆ ನಿಷೇಧಿಸಲಾಗಿತ್ತು.
Winter Session Day 13 Roundup: ಕಲಾಪದ ಪ್ರಮುಖಾಂಶಗಳು
ರಾಜ್ಯಸಭೆ ಅಧ್ಯಕ್ಷ ವೆಂಕಯ್ಯ ನಾಯ್ಡು ನೀಡಿರುವ ಆದೇಶಕ್ಕೆ ಪ್ರತಿಪಕ್ಷ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. 12 ಸದಸ್ಯರ ಅಮಾನತು ಆದೇಶವನ್ನು ಹಿಂಪಡೆಯುವ ವಿಷಯ ಪ್ರತಿನಿತ್ಯ ಸದನದಲ್ಲಿ ಪ್ರಸ್ತಾಪವಾಗುತ್ತಿದ್ದು, ಕೋಲಾಹಲ ಸೃಷ್ಟಿಸುತ್ತಲೇ ಇದೆ.
ಲೋಕಸಭೆಯಲ್ಲಿ ಯಾವ ಮಸೂದೆ ಮಂಡನೆ?
ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ, 2021 ಮತ್ತು ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ, 2021ಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿ ರಾಜ್ಯಸಭೆಯಿಂದ ಎರಡು ಸಂದೇಶಗಳನ್ನು ವರದಿ ಮಾಡುತ್ತಾರೆ.
2021-2022ರ ಹಣಕಾಸು ವರ್ಷದ ಸೇವೆಗಳಿಗಾಗಿ ಭಾರತದ ಏಕೀಕೃತ ನಿಧಿಯಿಂದ ಮತ್ತು ಹೊರಗಿನ ಕೆಲವು ಹೆಚ್ಚಿನ ಮೊತ್ತಗಳ ಪಾವತಿ ಮತ್ತು ವಿನಿಯೋಗವನ್ನು ಅಧಿಕೃತಗೊಳಿಸುವ ಮಸೂದೆಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪರಿಚಯಿಸಲಿದ್ದಾರೆ.
ರಾಜ್ಯಸಭೆಯಲ್ಲಿ ಕಾಯ್ದೆ ಕುರಿತು ಚರ್ಚೆ:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ 1985 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಮಸೂದೆಯನ್ನು ಮಂಡಿಸಲಿದ್ದಾರೆ. ಕೇಂದ್ರ ಸಚಿವ, ಜನರಲ್ (ನಿವೃತ್ತ) ವಿ ಕೆ ಸಿಂಗ್ ಅವರು ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಯ 285ನೇ ವರದಿಯಲ್ಲಿ ಒಳಗೊಂಡಿರುವ ಶಿಫಾರಸುಗಳ ಅನುಷ್ಠಾನದ ಸ್ಥಿತಿಯ ಅನುದಾನಕ್ಕಾಗಿ ಬೇಡಿಕೆಗಳ ಕುರಿತು ಹೇಳಿಕೆ ನೀಡಲಿದ್ದಾರೆ.
ರಾಜ್ಯಸಭೆಯಲ್ಲಿ ಏನು ಚರ್ಚೆ?
ದೇಶದಲ್ಲಿ ಕೊರೊನಾವೈರಸ್ ಹೊಸ ರೂಪಾಂತರ ವೈರಸ್ ಓಮಿಕ್ರಾನ್ ಸೃಷ್ಟಿಸುವ ಅಪಾಯ ಮತ್ತು ಮುಂದೆ ತೆಗೆದುಕೊಳ್ಳಬೇಕಾದ ಶಿಸ್ತುಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ.
Recommended Video