2020ರ ಹೊತ್ತಿಗೆ ಎಸ್ಪಿ, ಬಿಎಸ್ಪಿ, ಆರ್ ಜೆಡಿ ನಿರ್ನಾಮ: ಪಾಸ್ವಾನ್
ನವದೆಹಲಿ, ಜೂನ್ 04: ಮಾಯಾವತಿ ನೇತೃತ್ವದ ಬಹುಜನ ಸಮಾಜ ಪಕ್ಷ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ನಡುವಿನ ಮೈತ್ರಿ ಬಿರುಕಿನ ಬಗ್ಗೆ ಬಿಜೆಪಿ ಮಿತ್ರಪಕ್ಷ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ) ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್ ಅವರು ಪ್ರತಿಕ್ರಿಯಿಸಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ದೇಶದ ಪುರಾತನ ಪಕ್ಷ ಕಾಂಗ್ರೆಸ್ ಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿ, ವಿರೋಧ ಪಕ್ಷ ಸ್ಥಾನ ಪಡೆಯಲು ಬೇಕಾದ ಸಂಖ್ಯೆಯನ್ನು ಪಡೆಯದ ಪಕ್ಷ ಎಂದು ಹಾಸ್ಯ ಮಾಡಿದ್ದರು. ಈಗ ಎಸ್ಪಿ- ಬಿಎಸ್ಪಿ ಮೈತ್ರಿ ಮುರಿಯುತ್ತಿದ್ದಂತೆ ಮಾತನಾಡಿ, 2020ರ ಹೊತ್ತಿಗೆ ಎಸ್ಪಿ, ಬಿಎಸ್ಪಿ, ಆರ್ ಜೆಡಿಯಂಥ ಪಕ್ಷಗಳು ನಿರ್ನಾಮವಾಗಲಿವೆ ಎಂದಿದ್ದಾರೆ.

'ಎಸ್ಪಿ ಹಾಗೂ ಬಿಎಸ್ಪಿ ನಡುವೆ ಎಂದಿಗೂ 'ಘಟಬಂಧನ್'(ಮೈತ್ರಿ) ಇರಲಿಲ್ಲ, ಎರಡು ಪಕ್ಷಗಳ ನಡುವೆ ಇದ್ದದ್ದು 'ಲಾಥ್ ಬಂಧನ್' (ಪರಸ್ಪರ ಕಿತ್ತಾಡಲು ಬಂದಿಯಾದವರು)' ಎಂದು ಎಲ್ ಜೆಪಿ ಅಧ್ಯಕ್ಷ ಪಾಸ್ವಾನ್ ಹೇಳಿದ್ದಾರೆ.
'ಉತ್ತರಪ್ರದೇಶದಲ್ಲಿ ಮೈತ್ರಿ ಈಗ ಮಾಯವಾಗಿದೆ, ಬಿಹಾರದಲ್ಲೂ ಕಣ್ಮರೆಯಾಗಿದೆ, ಇನ್ಮುಂದೆ ದೇಶದೆಲ್ಲೆಡೆ ಈ ರೀತಿ ಮೈತ್ರಿ ಕಾಣಿಸುವುದಿಲ್ಲ, 2020ರ ಹೊತ್ತಿಗೆ ಈ ಮೂರು ಪಕ್ಷಗಳು ಅಳಿಸಿ ಹೋಗಲಿವೆ' ಎಂದು ಹೇಳಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ವಿರುದ್ಧ ಎಸ್ಪಿ-ಬಿಎಸ್ಪಿ- ಆರ್ ಎಲ್ ಡಿ ಮೈತ್ರಿ ಕೂಟ ಸೆಣಸಿತ್ತು. ಆದರೆ, 80 ಸ್ಥಾನಗಳ ಪೈಕಿ 62 ಸ್ಥಾನ ಬಿಜೆಪಿ ಪಾಲಾದರೆ, ಮೈತ್ರಿಕೂಟಕ್ಕೆ 15 ಸ್ಥಾನ ಮಾತ್ರ ದಕ್ಕಿತ್ತು. ಇದಾದ ಬಳಿಕ ಮುಂಬರುವ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬಿಎಸ್ಪಿ ಅಧಿನಾಯಕಿ ಮಾಯಾವತಿ ಘೋಷಿಸಿದ್ದರು. ಎಸ್ಪಿ ನಾಯಕ ಅಖಿಲೇಶ್ ಕೂಡಾ ಸಮಾಜವಾದಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications