ನ್ಯಾಯಾಂಗದಲ್ಲೂ ಮೀಸಲಾತಿಗೆ ಕೇಂದ್ರ ಸಚಿವರ ಆಗ್ರಹ
ನವದೆಹಲಿ, ಫೆಬ್ರವರಿ 15: ಸುಪ್ರೀಂಕೋರ್ಟ್ನ ಇತ್ತೀಚಿನ ಬೆಳವಣಿಗೆಗಳ ಬಳಿಕ ನ್ಯಾಯಾಂಗದಲ್ಲಿಯೂ ಮೀಸಲಾತಿ ವ್ಯವಸ್ಥೆಯನ್ನು ತರಬೇಕೆನ್ನುವ ಕೂಗು ಕೇಳಿಬರುತ್ತಿದೆ.
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹಾಗೂ ಸುಮಾರು 70ಕ್ಕೂ ಅಧಿಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂಸದರು ನ್ಯಾಯಾಂಗದಲ್ಲಿ ಮೀಸಲಾತಿ ವ್ಯವಸ್ಥೆಗೆ ಹಕ್ಕೊತ್ತಾಯ ಮಾಡಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ರಾಮ್ವಿಲಾಸ್ ಪಾಸ್ವಾನ್ ಮನೆಯಲ್ಲಿ ಫೆಬ್ರವರಿ 10ರಂದು ಈ ಸಂಬಂಧ ಸಭೆ ನಡೆದಿತ್ತು.

ನ್ಯಾಯಾಂಗದಲ್ಲಿ ಕೆಳವರ್ಗದ ಸಮುದಾಯದ ಜನರ ಪರ ಧ್ವನಿ
ನ್ಯಾಯಾಂಗದಲ್ಲಿ ಕೆಳವರ್ಗದ ಸಮುದಾಯದ ಜನರ ಪರ ಧ್ವನಿ ಎತ್ತುವ ಸಲುವಾಗಿ ಹಾಗೂ ಮೀಸಲಾತಿ ಹಕ್ಕುಗಳ ರಕ್ಷಣೆಗಾಗಿ ನ್ಯಾಯಾಂಗದ ಎಲ್ಲಾ ಹಂತಗಳಲ್ಲಿಯೂ ಮೀಸಲಾತಿ ವ್ಯವಸ್ಥೆ ಇರಬೇಕು.

ಲೋಕಸೇವಾ ಆಯೋಗದಂತೆ ನ್ಯಾಯಾಂಗದಲ್ಲೂ ನೇಮಕ ಪ್ರಕ್ರಿಯೆ
ಭಾರತೀಯ ಲೋಕಸೇವಾ ಆಯೋಗ ಮತ್ತು ಇತರೆ ಸಂಸ್ಥೆಗಳಲ್ಲಿ ನೇಮಕ ಪ್ರಕ್ರಿಯೆ ನಡೆಯುವಂತೆ ನ್ಯಾಯಾಂಗಕ್ಕೂ ಪ್ರತ್ಯೇಕ ನೇಮಕ ಪ್ರಕ್ರಿಯೆ ನಡೆಯಬೇಕು.
ಭಾರತೀಯ ನ್ಯಾಯಾಂಗ ಪ್ರಕಾರ ಆಯೋಗ ಅಥವಾ ಅದೇ ರೀತಿಯ ಸ್ವತಂತ್ರ ಸಂಸ್ಥೆಗಳನ್ನು ಆರಂಭಿಸಿ ಸಂವಿಧಾನದಂತೆ ಮೀಸಲಾತಿ ವ್ಯವಸ್ಥೆ ಮೂಲಕ ನೇಮಕ ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.
ಎಲ್ಲಾ ಶಾಸಕರ ಒತ್ತಾಯಕ್ಕೆ ಪಾಸ್ವಾನ್ ಸಮ್ಮತಿ
ಸಭೆಯಲ್ಲಿ ಎಲ್ಲಾ ಶಾಸಕರ ಒತ್ತಾಯಕ್ಕೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಕೂಡ ಸಮ್ಮತಿ ಸೂಚಿಸಿದ್ದಾರೆ. ಈ ಬೆಳವಣಿಗೆಗೆ ಕಾರಣವಾಗಿದ್ದು ಸುಪ್ರೀಂಕೋರ್ಟ್ನ ಇತ್ತೀಚಿನ ಎರಡು ತೀರ್ಪುಗಳು. ಒಂದು ಮೀಸಲಾತಿ ಎನ್ನುವುದು ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿತ್ತು. ಇನ್ನೊಂದೆಡೆ ಬಡ್ತಿ ಸಂದರ್ಭದಲ್ಲಿ ಮೀಸಲಾತಿ ನೀಡುವುದನ್ನೂ ಕೂಡ ತಡೆಹಿಡಿದಿತ್ತು. ಈ ಎರಡೂ ಆದೇಶದ ವಿರುದ್ಧ ಕೇಂದ್ರ ಸರ್ಕಾರ ನಿಯಮ ರಚಿಸಬೇಕು ಬೆಂಬುದು ಪಾಸ್ವಾನ್ ಅವರು ಹಾಗೂ ಇತರೆ ಪರಿಶಿಷ್ಟ ಸಂಸದರ ಆಗ್ರಹವಾಗಿದೆ.

ಸುಪ್ರೀಂಕೋರ್ಟ್ ತೀರ್ಪು
ಮೀಸಲಾತಿ ನೀಡಬೇಕೆ ಅಥವಾ ಬೇಡವೇ ಎನ್ನುವುದನ್ನು ನಿರ್ಧರಿಸುವ ಸಂಪೂರ್ಣ ವಿವೇಚನಾಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಇಲ್ಲ ಎಂದು ಕೋರ್ಟ್ ಹೇಳಿದೆ. "ರಾಜ್ಯ ಸರ್ಕಾರ ಮೀಸಲಾತಿ ನೀಡಲು ಕಾರ್ಯ ನಿರ್ವಹಿಸುತ್ತಿಲ್ಲ. ಸಾರ್ವಜನಿಕ ಉದ್ಯೋಗಗಳಲ್ಲಿ ಮೀಸಲಾತಿ ಪಡೆಯಲು ಯಾವುದೇ ಮೂಲಭೂತ ಹಕ್ಕಿಲ್ಲ. ಯಾವ ನ್ಯಾಯಲಯವೂ ಈ ಬಗ್ಗೆ ಆದೇಶ ನೀಡಲು ಸಾಧ್ಯವಿಲ್ಲ," ಎಂದು ನ್ಯಾಯಮೂರ್ತಿ ಎಲ್ ನಾಗೇಶ್ವರ್ ರಾವ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ಪೀಠ ಹೇಳಿದೆ. ಉತ್ತರಾಖಂಡದ ಸಾರ್ವಜನಿಕ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಹಾಯಕ ಇಂಜಿನಿಯರ್ ಹುದ್ದೆಗೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿ ಅರ್ಜಿ ಸಲ್ಲಿಕೆ ಆಗಿತ್ತು. ಈ ವೇಳೆ ಸುಪ್ರೀಂಕೋರ್ಟ್ ಈ ಆದೇಶ ಹೊರಡಿಸಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications