ಆರ್ಮಿ ಕ್ಯಾಂಟೀನ್ ನಿಂದ ಪತಂಜಲಿ ನೆಲ್ಲಿ ಜ್ಯೂಸ್ ಗೆ ಕೊಕ್
ಬಾಬಾ ರಾಮ್ ದೇವ್ ಅವರು ಪ್ರಚಾರ ಮಾಡುತ್ತಿರುವ ಪತಂಜಲಿ ಆಯುರ್ವೇದ ಉತ್ಪನ್ನಗಳ ಪೈಕಿ ನೆಲ್ಲಿ ಜ್ಯೂಸ್ ಮಾರಾಟ ಮಾಡುವುದನ್ನು ಆರ್ಮಿ ಕ್ಯಾಂಟೀನ್ ನಲ್ಲಿ ನಿಲ್ಲಿಸಲಾಗಿದೆ. ಅದಕ್ಕೆ ಕಾರಣ ತಿಳಿಯಲು ಈ ವರದಿ ಓದಿ
ನವದೆಹಲಿ, ಏಪ್ರಿಲ್ 24: ಭಾರತೀಯ ಸೇನೆಗೆ ಸರಬರಾಜು ಮಾಡುತ್ತಿರುವ ದ ಕ್ಯಾಂಟೀನ್ ಸ್ಟೋರ್ಸ್ ಪತಂಜಲಿ ಆಯುರ್ವೇದದವರ ನೆಲ್ಲಿಕಾಯಿ ಜ್ಯೂಸ್ ಮಾರಾಟವನ್ನು ನಿಲ್ಲಿಸಿದೆ. ಪ್ರಯೋಗಾಲಯದ ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಆದರೆ, ಯೋಗ ಗುರು ಬಾಬಾ ರಾಮದೇವ್ ಪ್ರಚಾರ ಮಾಡುತ್ತಿರುವ ಗ್ರಾಹಕ ವಸ್ತು ಮಾರಾಟ ಕಂಪೆನಿಯ ಹೇಳಿಕೆ ಪ್ರಕಾರ, ನೆಲ್ಲಿಕಾಯಿ ಜ್ಯೂಸ್ ಮಾರುಕಟ್ಟೆಯಲ್ಲಿರುವ ಉಳಿದ ಉತ್ಪನ್ನಗಳಂತಲ್ಲ. ಮನುಷ್ಯರ ಸೇವನೆಗೆ ಇದು ಯೋಗ್ಯವಾಗಿದೆ. ಇದು ವೈದ್ಯಕೀಯ ಉತ್ಪನ್ನ ಎಂದು ಹೇಳಲಾಗಿದೆ.[ಚಂಡಿಘಡದ ಪೌಷ್ಠಿಕ್ ಹೊಟೇಲ್ ಬಾಬಾ ರಾಮ್ ದೇವ್ ಗೆ ಸೇರಿದ್ದಾ?!]
ರಕ್ಷಣಾ ಸಚಿವಾಲಯದ ಮೂಲಗಳ ಪ್ರಕಾರ, ಪ್ರಯೋಗಾಲಯ ಪರೀಕ್ಷೆಯಲ್ಲಿ ವಿಫಲವಾದ ನಂತರ ಕಂಪೆನಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಪಶ್ಚಿಮ ಬಂಗಾಲದ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದಲ್ಲಿ ನೆಲ್ಲಿಕಾಯಿ ಜ್ಯೂಸ್ ನ ಪರೀಕ್ಷೆ ನಡೆಸಲಾಗಿತ್ತು.

ನಿಯಮಗಳ ಪ್ರಕಾರ ಆ ನಿರ್ದಿಷ್ಟ ಬ್ಯಾಚ್ ನ ಮಾರಾಟವನ್ನು ನಿಲ್ಲಿಸಲಾಗಿದೆ. ಮತ್ತು ಈ ರೀತಿ ತಪ್ಪಾಗಲು ಕಾರಣಗಳ ಬಗ್ಗೆ ಪರಿಶೀಲನೆ ನಡೆಸಿ, ಆ ಬಗ್ಗೆ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ನೀಡಲಾಗಿದೆ. ಉತ್ತರ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಲಾಗಿದೆ.[ಚೀನಾ, ಮ್ಯಾನ್ಮಾರ್, ಬಾಂಗ್ಲಾಕ್ಕೆ ರಾಮದೇವ್ ಪತಂಜಲಿ ಉತ್ಪನ್ನ!]
ಆಮ್ಲಾ ಜ್ಯೂಸ್ ನ ಇಂಡೆಕ್ಸ್ ಸಂಖ್ಯೆ 85417, ಬ್ಯಾಚ್ ಸಂಖ್ಯೆ GH1502 ಅನ್ನು ಕೋಲ್ಕತ್ತಾದ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪತಂಜಲಿ ಆಯುರ್ವೇದದವರು ಈ ಬಗ್ಗೆ ಮಾತನಾಡಿದ್ದು, ನೆಲ್ಲಿಕಾಯಿ ಜ್ಯೂಸ್ ಆಯುರ್ವೇದ ಔಷಧ. ಆಯುಷ್ ಅಚಿವಾಲಯದ ನಿಯಮಾವಳಿ ಪ್ರಕಾರವೇ ಪರೀಕ್ಷೆ ನಡೆಸಲಾಗಿದೆ. ಎಫ್ಎಸ್ಎಸ್ಎಐ ನಿಯಮಗಳು ಈ ಜ್ಯೂಸ್ ಗೆ ಅನ್ವಯ ಆಗಲ್ಲ ಎಂದಿದ್ದಾರೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications