ಆಗಸ್ಟ್ 27ಕ್ಕೆ ಪತಂಜಲಿ 'ಕಿಂಭೋ' ಮೆಸೇಜಿಂಗ್ ಆಪ್ ಬಿಡುಗಡೆ
ನವದೆಹಲಿ, ಆಗಸ್ಟ್ 15: ಯೋಗ ಗುರು ಬಾಬಾ ರಾಮದೇವ್ ಮಾಲೀಕತ್ವದ ಮೆಸೇಜಿಂಗ್ ಆಪ್ 'ಕಿಂಭೋ' ಹೊಸ ರೂಪದೊಂದಿಗೆ ಆಗಸ್ಟ್ 27ರಂದು ಬಿಡುಗಡೆಯಾಗುತ್ತಿದೆ.
ಆಪ್ನಲ್ಲಿದ್ದ ಎಲ್ಲ ರೀತಿಯ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಕಂಪೆನಿ ಹೇಳಿಕೊಂಡಿದೆ.
ಟ್ವಿಟ್ಟರ್ ಖಾತೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿರುವ ಪತಂಜಲಿ ಯೋಗಪೀಠ ಹರಿದ್ವಾರದ ಸಹ ಸಂಸ್ಥಾಪಕ ಆಚಾರ್ಯ ಬಾಲಕೃಷ್ಣ ಈ ಮಾಹಿತಿ ನೀಡಿದ್ದಾರೆ.

ಹೊಸ ಮತ್ತು ಅತ್ಯಾಧುನಿಕ ವಿಶೇಷಗಳೊಂದಿಗೆ ಕಿಂಭೋ ಆಪ್ ಸಿದ್ಧವಾಗಿದೆ. ಸಣ್ಣಪುಟ್ಟ ನ್ಯೂನತೆಗಳನ್ನು ಸರಿಪಡಿಸಲಾಗಿದೆ. ಎಲ್ಲ ಸುಧಾರಣೆಗಳನ್ನು ಇದು ಒಳಗೊಂಡಿದ್ದು, ಆಗಸ್ಟ್ 27ರಂದು ಆಪ್ ಲಾಂಚ್ ಆಗಲಿದೆ ಎಂದು ಅವರು ತಿಳಿಸಿದರು.
ಕಿಂಭೋ ಆಪ್ನ ಮೊದಲ ಅಧಿಕೃತ ಪ್ರಕಟಣೆಯನ್ನು ಮೇ ತಿಂಗಳಿನಲ್ಲಿ ಮಾಡಲಾಗಿತ್ತು. ಈಗ ಮಾರುಕಟ್ಟೆಯಲ್ಲಿರುವ ಎಲ್ಲ ಮೆಸೇಜಿಂಗ್ ಆಪ್ಗಳಿಗೆ ಪ್ರಮುಖ ಸ್ಪರ್ಧಿಯಾಗುವುದಾಗಿ ಕಂಪೆನಿ ಹೇಳಿಕೊಂಡಿತ್ತು.
ಆದರೆ, ಆಪ್ ಬಿಡುಗಡೆಯಾದ ಮರುದಿನವೇ ಭದ್ರತೆ ಹಾಗೂ ಖಾಸಗಿತನದ ಸಮಸ್ಯೆಯ ಕಾರಣಗಳಿಂದ ಅದನ್ನು ಗೂಗಲ್ ಪ್ಲೇ ಸ್ಟೋರ್ ಹಾಗೂ ಐಓಎಸ್ನಿಂದ ತೆಗೆದುಹಾಕಲಾಗಿತ್ತು.
ಈ ಆಪ್ ಬಿಡುಗಡೆಯಾದ ಬೆನ್ನಲ್ಲೇ ಇದೇ ರೀತಿಯ ಅನೇಕ ಆಪ್ಗಳು ಗೂಗಲ್ ಪ್ಲೇ ಸ್ಟೋರ್ನಲ್ಲಿ ಕಾಣಿಸಿಕೊಂಡಿದ್ದವು. ಆದರೆ, ಈ ಯಾವ ಆಪ್ ಕೂಡ ಕಂಪೆನಿಗೆ ಸಂಬಂಧಿಸಿದ್ದಲ್ಲ ಎಂದು ಪತಂಜಲಿ ವಕ್ತಾರ ಎಸ್.ಕೆ. ತಿಜರಿವಾಲಾ ಸ್ಪಷ್ಟಪಡಿಸಿದ್ದರು.
ಈ ಹಿಂದೆ ಬಿಡುಗಡೆಯಾಗಿದ್ದ ಕಿಂಭೋ ಆಪ್ ವಾಟ್ಸಾಪ್ ಅನ್ನೇ ನಕಲು ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications