ದೆಹಲಿಯಲ್ಲಿ ಕಾಂಗ್ರೆಸ್ ಧೂಳಿಪಟ; ಪಿ. ಸಿ. ಚಾಕೋ ರಾಜೀನಾಮೆ
ನವದೆಹಲಿ, ಫೆಬ್ರವರಿ 12 : ದೆಹಲಿ ವಿಧಾಸನಭೆ ಚುನಾವಣೆ ಫಲಿತಾಂಶದ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ಮಾಡಿದೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಸಿ. ಚಾಕೋ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಪಿ. ಸಿ. ಚಾಕೋ ದೆಹಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಮಂಗಳವಾರ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಬುಧವಾರ ಪಿ. ಸಿ. ಚಾಕೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಶೀಲ ದೀಕ್ಷಿತ್ ಅವರ ವಿರುದ್ಧ ಆರೋಪ ಮಾಡಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಎಎಪಿ 62 ಸ್ಥಾನಗಳಲ್ಲಿ ಜಯಗಳಿಸಿ ಪುನಃ ಅಧಿಕಾರ ಪಡೆಯುವತ್ತ ಹೆಜ್ಜೆ ಇಟ್ಟಿದೆ. ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲುವು ಕಂಡು ಮುಖಭಂಗ ಅನುಭವಿಸಿತ್ತು.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಹಿರಿಯ ನಾಯಕ ಪಿ. ಸಿ. ಚಾಕೋ ರಾಜೀನಾಮೆ ಕೊಟ್ಟಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗುತ್ತಿದೆ.

2013ರಲ್ಲಿಯೇ ಆರಂಭ
"ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪತನ ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ 2013ರಲ್ಲಿಯೇ ಆರಂಭವಾಯಿತು. ಹೊಸದಾಗಿ ಅಸ್ತಿತ್ವಕ್ಕೆ ಬಂದ ಎಎಪಿ ಪಕ್ಷ ಕಾಂಗ್ರೆಸ್ನ ಎಲ್ಲಾ ಮತಗಳನ್ನು ಕಸಿದುಕೊಂಡಿತು. ಇದು ಇನ್ನೂ ಎಎಪಿಯ ಜೊತೆಯಲ್ಲಿಯೇ ಇದೆ" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ

ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ
"ಶೀಲಾ ದೀಕ್ಷಿತ್ ಉತ್ತಮ ಆಡಳಿತಗಾರರು. ತಮ್ಮ ಆಡಳಿತದ ಅವಧಿಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಶಕ್ತಿ ತುಂಬಿದರು. ಅವರು ತಮ್ಮ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕಾಗಿ ಮುಡುಪಾಗಿಟ್ಟಿದ್ದರು" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ.

ಕಾಂಗ್ರೆಸ್ ಕಳಪೆ ಸಾಧನೆ
ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಮುಂದುವರೆದಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ವಿಫಲವಾಗಿದೆ. 2015ರಲ್ಲಿ ಶೇ 9.7ರಷ್ಟು ಮತಗಳನ್ನು ಪಕ್ಷ ಪಡೆದಿತ್ತು. 2020ರ ಚುನಾವಣೆಯಲ್ಲಿ ಶೇ 4.27ರಷ್ಟು ಮತಗಳನ್ನು ಮಾತ್ರ ಪಡೆದಿದೆ.

ಬಿಜೆಪಿ-ಎಎಪಿ ಪೈಪೋಟಿ
ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ತನ್ನ ಕಳಪೆ ಸಾಧನೆ ಮುಂದುವರೆಸಿದೆ. 2015ರಲ್ಲಿಯೂ ಯಾವುದೇ ಸ್ಥಾನ ಗೆದ್ದಿರಲಿಲ್ಲ. ಈ ಬಾರಿಯೂ ಒಂದು ಸ್ಥಾನ ಗೆದ್ದಿಲ್ಲ. ಆದರೆ, ಕಳೆದ ಬಾರಿ 9.7ರಷ್ಟು ಮತಗಳನ್ನು ಪಡೆದಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications