ದೆಹಲಿಯಲ್ಲಿ ಕಾಂಗ್ರೆಸ್ ಧೂಳಿಪಟ; ಪಿ. ಸಿ. ಚಾಕೋ ರಾಜೀನಾಮೆ
ನವದೆಹಲಿ, ಫೆಬ್ರವರಿ 12 : ದೆಹಲಿ ವಿಧಾಸನಭೆ ಚುನಾವಣೆ ಫಲಿತಾಂಶದ ಬಗ್ಗೆ ದೇಶಾದ್ಯಂತ ಚರ್ಚೆಗಳು ನಡೆಯುತ್ತಿವೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕಳಪೆ ಸಾಧನೆ ಮಾಡಿದೆ. ಹಿರಿಯ ಕಾಂಗ್ರೆಸ್ ನಾಯಕ ಪಿ. ಸಿ. ಚಾಕೋ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ಪಿ. ಸಿ. ಚಾಕೋ ದೆಹಲಿ ಕಾಂಗ್ರೆಸ್ ಉಸ್ತುವಾರಿಯಾಗಿದ್ದರು. ಮಂಗಳವಾರ ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿತ್ತು. ಬುಧವಾರ ಪಿ. ಸಿ. ಚಾಕೋ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಶೀಲ ದೀಕ್ಷಿತ್ ಅವರ ವಿರುದ್ಧ ಆರೋಪ ಮಾಡಿದ್ದಾರೆ.
70 ಸದಸ್ಯ ಬಲದ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿತ್ತು. ಎಎಪಿ 62 ಸ್ಥಾನಗಳಲ್ಲಿ ಜಯಗಳಿಸಿ ಪುನಃ ಅಧಿಕಾರ ಪಡೆಯುವತ್ತ ಹೆಜ್ಜೆ ಇಟ್ಟಿದೆ. ಬಿಜೆಪಿ 8 ಕ್ಷೇತ್ರಗಳಲ್ಲಿ ಗೆಲುವು ಕಂಡು ಮುಖಭಂಗ ಅನುಭವಿಸಿತ್ತು.
ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಸುಭಾಷ್ ಚೋಪ್ರಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ಹಿರಿಯ ನಾಯಕ ಪಿ. ಸಿ. ಚಾಕೋ ರಾಜೀನಾಮೆ ಕೊಟ್ಟಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಉಂಟಾಗುತ್ತಿದೆ.

2013ರಲ್ಲಿಯೇ ಆರಂಭ
"ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪತನ ಶೀಲಾ ದೀಕ್ಷಿತ್ ಮುಖ್ಯಮಂತ್ರಿಯಾಗಿದ್ದ 2013ರಲ್ಲಿಯೇ ಆರಂಭವಾಯಿತು. ಹೊಸದಾಗಿ ಅಸ್ತಿತ್ವಕ್ಕೆ ಬಂದ ಎಎಪಿ ಪಕ್ಷ ಕಾಂಗ್ರೆಸ್ನ ಎಲ್ಲಾ ಮತಗಳನ್ನು ಕಸಿದುಕೊಂಡಿತು. ಇದು ಇನ್ನೂ ಎಎಪಿಯ ಜೊತೆಯಲ್ಲಿಯೇ ಇದೆ" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ

ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ
"ಶೀಲಾ ದೀಕ್ಷಿತ್ ಉತ್ತಮ ಆಡಳಿತಗಾರರು. ತಮ್ಮ ಆಡಳಿತದ ಅವಧಿಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅವರು ಶಕ್ತಿ ತುಂಬಿದರು. ಅವರು ತಮ್ಮ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕಾಗಿ ಮುಡುಪಾಗಿಟ್ಟಿದ್ದರು" ಎಂದು ಪಿ. ಸಿ. ಚಾಕೋ ಹೇಳಿದ್ದಾರೆ.

ಕಾಂಗ್ರೆಸ್ ಕಳಪೆ ಸಾಧನೆ
ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಮುಂದುವರೆದಿದೆ. ಈ ಬಾರಿಯ ಚುನಾವಣೆಯಲ್ಲಿಯೂ ಪಕ್ಷ ಯಾವುದೇ ಸ್ಥಾನವನ್ನು ಗಳಿಸುವಲ್ಲಿ ವಿಫಲವಾಗಿದೆ. 2015ರಲ್ಲಿ ಶೇ 9.7ರಷ್ಟು ಮತಗಳನ್ನು ಪಕ್ಷ ಪಡೆದಿತ್ತು. 2020ರ ಚುನಾವಣೆಯಲ್ಲಿ ಶೇ 4.27ರಷ್ಟು ಮತಗಳನ್ನು ಮಾತ್ರ ಪಡೆದಿದೆ.

ಬಿಜೆಪಿ-ಎಎಪಿ ಪೈಪೋಟಿ
ಕಾಂಗ್ರೆಸ್ ಪಕ್ಷ ದೆಹಲಿಯಲ್ಲಿ ತನ್ನ ಕಳಪೆ ಸಾಧನೆ ಮುಂದುವರೆಸಿದೆ. 2015ರಲ್ಲಿಯೂ ಯಾವುದೇ ಸ್ಥಾನ ಗೆದ್ದಿರಲಿಲ್ಲ. ಈ ಬಾರಿಯೂ ಒಂದು ಸ್ಥಾನ ಗೆದ್ದಿಲ್ಲ. ಆದರೆ, ಕಳೆದ ಬಾರಿ 9.7ರಷ್ಟು ಮತಗಳನ್ನು ಪಡೆದಿತ್ತು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications