ಪಿಡಿಪಿ ನಾಯಕ ವಹೀದ್ ಉರ್ ರೆಹಮಾನ್ನನ್ನು ಬಂಧಿಸಿದ ಎನ್ಐಎ
ನವದೆಹಲಿ, ನವೆಂಬರ್ 25: ಪಿಡಿಪಿ ಯೂಥ್ ವಿಂಗ್ ಅಧ್ಯಕ್ಷ ವಹೀದ್ ಉರ್ ರೆಹಮಾನ್ ಪರನನ್ನು ನ್ಯಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ ಎರಡು ದಿನಗಳ ವಿಚಾರಣೆ ಬಳಿಕ ಬಂಧಿಸಿದೆ.
ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಆರೋಪಿಸಿ ಅಮಾನತುಗೊಳಿಸಿರುವ ಡಿಎಸ್ಪಿ ದವಿಂದರ್ ಸಿಂಗ್ ಜತೆ ಈತ ಸಂಪರ್ಕ ಹೊಂದಿದ್ದ ಎಂದು ಹೇಳಲಾಗಿದೆ.
ದೆಹಲಿಯ ಎನ್ಐಎ ಮುಖ್ಯ ಕಚೇರಿಯಲ್ಲಿ ವಹೀದ್ನನ್ನು ಪ್ರಶ್ನಿಸಲಾಗುತ್ತಿದೆ. ಎನ್ಐಎ ಜುಲೈನಲ್ಲಿ ಆರು ಮಂದಿ ಮೇಲೆ ಚಾರ್ಜ್ ಶೀಟ್ ಹಾಕಿತ್ತು. ಅದರಲ್ಲಿ ಡಿಎಸ್ಪಿ ದವಿಂದರ್ ಸಿಂಗ್ ಕೂಡ ಇದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಸಿಂಗ್ ಜತೆಗೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೈಯದ್ ನವೀದ್ ಮುಷ್ತಾಖ್, ಇರ್ಫಾನ್ ಶಾಫಿ ಮಿರ್, ರಾಫಿ ಅಹಮದ್, ತನ್ವೀರ್ ಅಹಮದ್ , ಸೈಯದ್ ಇರ್ಫಾನ್ ಅಹಮದ್ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಪಾಕಿಸ್ತಾನ ಹೈಕಮಿಷನ್ ಜತೆ ಸಂಪರ್ಕದಲ್ಲಿದ್ದ ಆರೋಪದ ಮೇರೆ ಇದೇ ವರ್ಷ ಡಿಎಸ್ಪಿ ದವಿಂದರ್ ಅವರನ್ನು ಬಂಧಿಸಲಾಗಿತ್ತು.
ತಮ್ಮ ಮನೆಯಲ್ಲಿ ಉಗ್ರರಿಗೆ ಆಶ್ರಯ ನೀಡಿದ್ದ ಜಮ್ಮು-ಕಾಶ್ಮೀರದ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ದವೀಂದರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿತ್ತು. ಇದರ ಬೆನ್ನಲ್ಲೇ ದವೀಂದರ್ ಸಿಂಗ್ ಅವರಿಗೆ ನೀಡಲಾಗಿದ್ದ ಶೇರ್-ಇ-ಕಾಶ್ಮೀರ್ ಪೊಲೀಸ್ ಪದಕವನ್ನು ಹಿಂಪಡೆಯಲಾಗಿದೆ.
ದವೀಂದರ್ ಸಿಂಗ್ ಅವರಿಗೆ ನೀಡಲಾಗಿದ್ದ ಶೇರ್-ಇ-ಕಾಶ್ಮೀರ ಎಂಬ ಶೌರ್ಯ ಪ್ರಶಸ್ತಿಯನ್ನು ಜಮ್ಮು ಕಾಶ್ಮೀರ ಆಡಳಿತದಿಂದ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಶ್ರೀನಗರದ ಬಾದಾಮಿ ಬಾಗ್ ಕಂಟೋನ್ಮೆಂಟ್ ಬಳಿಯ ಎಕ್ಸ್ ವಿ ಕಾರ್ಪ್ಸ್ ಸೇನೆಯ ಪ್ರಧಾನ ಕಚೇರಿಯ ಪಕ್ಕದ ತನ್ನ ಮನೆಯಲ್ಲಿ ಮೂವರು ಉಗ್ರರಿಗೆ ದವೀಂದರ್ ಸಿಂಗ್ ಆಶ್ರಯ ನೀಡಿದ್ದ ವಿಷಯ ಬಹಿರಂಗವಾಗುತ್ತಿದ್ದಂತೆ ದವೀಂದರ್ ಅವರನ್ನು ಅಮಾನತು ಮಾಡಲಾಗಿತ್ತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications