ಪೆಗಾಸಸ್ ಬೇಹುಗಾರಿಕೆ: ಮೋದಿ ವಿರುದ್ದ ತನಿಖೆ, ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ನವದೆಹಲಿ, ಜು.19: ತನ್ನದೇ ಮಂತ್ರಿಗಳು ಮತ್ತು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಸೇರಿದಂತೆ ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರ ಮೇಲೆ ಕಣ್ಣಿಡಲು ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಸರ್ಕಾರ ಬಳಸುತ್ತಿದೆ ಎಂಬ ಆರೋಪದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತನಿಖೆ ನಡೆಸಬೇಕು, ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಸೋಮವಾರ ಒತ್ತಾಯಿಸಿದೆ.
ಈ ನಡುವೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ಬಳಿ ಈ ವಿಚಾರದಲ್ಲಿ ಸರ್ಕಾರ ಯಾವ ಆಗ್ರಹವನ್ನು ಮಾಡಬೇಕಾಗಿಲ್ಲ ಎಂದು ಹೇಳಿದೆ. ಕೇಸರಿ ಪಕ್ಷವು ಆರೋಪಗಳನ್ನು ಸಂಪೂರ್ಣವಾಗಿ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಹೇಳಿದೆ.
ಸಂಸತ್ತಿನ ಅಧಿವೇಶನಕ್ಕೂ ಒಂದು ದಿನ ಮುನ್ನ ಪೆಗಾಸಸ್ ವರದಿ ಕಾಕತಾಳೀಯವಲ್ಲ ಎಂದ ಕೇಂದ್ರ
ಇಬ್ಬರು ಸೇವೆ ಸಲ್ಲಿಸುತ್ತಿರುವ ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಓರ್ವ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸೇರಿದಂತೆ 300 ಕ್ಕೂ ಹೆಚ್ಚು ನ್ಯಾಯಾಧೀಶರು, ಭಾರತದಲ್ಲಿ ಹಲವಾರು ಉದ್ಯಮಿಗಳು ಮತ್ತು ಕಾರ್ಯಕರ್ತರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಇಸ್ರೇಲಿ ಮೂಲಕ ಹ್ಯಾಕಿಂಗ್ ಮಾಡಲು ಗುರಿಯಾಗಬಹುದೆಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವು ಭಾನುವಾರ ವರದಿ ಮಾಡಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, "ರಾಹುಲ್ ಗಾಂಧಿ, ಪತ್ರಕರ್ತರು ಮತ್ತು ಕೇಂದ್ರ ಸಚಿವರು ಸೇರಿದಂತೆ ಪ್ರತಿಪಕ್ಷ ನಾಯಕರ ಮೇಲೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಬೇಹುಗಾರಿಕೆ ನಡೆಸುತ್ತಿದ್ದಾರೆ," ಎಂದು ಆರೋಪಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಯ ವೇಳೆ ಮೋದಿ ಸರ್ಕಾರವು ದೇಶದ 40 ಕ್ಕೂ ಹೆಚ್ಚು ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಿದ ಆರೋಪದ ಬಗ್ಗೆ ಜೆಪಿಸಿ ತನಿಖೆಗೂ ಕಾಂಗ್ರೆಸ್ ಒತ್ತಾಯಿಸಿದೆ. "ಆದರೆ ತನಿಖೆ ಪ್ರಾರಂಭಿಸುವ ಮೊದಲು, ಅಮಿತ್ ಶಾ ಸಾಹೇಬರು ರಾಜೀನಾಮೆ ನೀಡಬೇಕು. ಮೋದಿ ಸಾಹೇಬರ ವಿರುದ್ಧ ತನಿಖೆ ನಡೆಸಬೇಕು," ಎಂದು ಆಗ್ರಹಿಸಿದ್ದಾರೆ.
ಪೆಗಾಸಸ್ ಸಾಫ್ಟ್ವೇರ್ ಎಂದರೇನು? ಮೊಬೈಲ್ ಮೇಲಿನ ದಾಳಿ ಹೇಗಿರುತ್ತೆ?
ಲೋಕಸಭೆಯಲ್ಲಿ ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, "ಪಿಎಂ ಮೋದಿ ಡಿಜಿಟಲ್ ಇಂಡಿಯಾವನ್ನು ಉತ್ತೇಜಿಸುತ್ತಾರೆ ಎಂದು ಹೇಳುತ್ತಾರೆ. ಆದರೆ ನಾವು ಅದನ್ನು ಬೇಹುಗಾರಿಕೆ ಬಳಸುತ್ತಾರೆ ಎಂದು ಇಂದು ತಿಳಿದು ಬಂದಿದೆ," ಎಂದಿದ್ದಾರೆ.
"ಎನ್ಎಸ್ಒ ತನ್ನ ಉತ್ಪನ್ನಗಳನ್ನು ಅಪರಾಧ ಮತ್ತು ಭಯೋತ್ಪಾದನೆ ವಿರುದ್ಧ ಹೋರಾಡಲು ಸರ್ಕಾರ ಬಳಸುತ್ತಿದೆ ಎಂದು ಹೇಳುತ್ತಿದೆ. ಆದರೆ ಮೋದಿಯ ವಿರುದ್ಧ ಮಾತನಾಡುವ ಜನರ ವಿರುದ್ಧ ಪೆಗಾಸಸ್ ಅನ್ನು ಬಳಸುತ್ತಿದ್ದಾರೆ," ಎಂದು ಹೇಳಿದರು.
ನಾಳೆ ಸಂಸತ್ತಿನಲ್ಲಿ ಎಲ್ಲಾ ವಿರೋಧ ಪಕ್ಷಗಳ ಜೊತೆಗೆ ಕಾಂಗ್ರೆಸ್ ಈ ವಿಷಯವನ್ನು (ಪೆಗಾಸಸ್ ಪ್ರಾಜೆಕ್ಟ್ ವರದಿ) ಎತ್ತಲಿದೆ ಎಂದು ಘೋಷಿಸಿದರು.
(ಒನ್ಇಂಡಿಯಾ ಸುದ್ದಿ)