ಆರೋಪ ಆಧಾರರಹಿತ, ಪೆಗಾಸಸ್ ಹಗರಣ ತನಿಖೆಗೆ ತಜ್ಞರ ಸಮಿತಿ ರಚನೆ: ಸುಪ್ರೀಂಗೆ ತಿಳಿಸಿದ ಕೇಂದ್ರ
ನವದೆಹಲಿ, ಆ.16: ಪೆಗಾಸಸ್ ಬೇಹುಗಾರಿಕೆಯು ಇತ್ತೀಚೆಗೆ ದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪ್ರತಿಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರನ್ನು ಗುರಿಯಾಗಿಸಲು ಇಸ್ರೇಲಿ ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗಿದೆ ಎಂಬ ಇತ್ತೀಚಿನ ವರದಿಗಳಿಗೆ ಸಂಬಂಧಿಸಿದ ಎಲ್ಲಾ ಆರೋಪಗಳನ್ನು ಕೇಂದ್ರವು ನಿರಾಕರಿಸಿದೆ. ಆದರೆ ಇಂತಹ ಎಲ್ಲಾ ಆರೋಪಗಳ ಬಗ್ಗೆ ತಜ್ಞರ ಗುಂಪು ತನಿಖೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
"ಪಟ್ಟಭದ್ರ ಹಿತಾಸಕ್ತಿಗಳಿಂದ ಹರಡಿರುವ ಯಾವುದೇ ತಪ್ಪು ಆರೋಪಗಳಿಂದ ಕೇಂದ್ರ ಸರ್ಕಾರವನ್ನು ಮುಕ್ತವಾಗಿಸಲು ಹಾಗೂ ವಿರೋಧ ಪಕ್ಷಗಳು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಪರಿಶೀಲಿಸುವ ನಿಟ್ಟಿನಲ್ಲಿ ನಾವು ಈ ತಂತ್ರಜ್ಞಾನ ಕ್ಷೇತ್ರದ ತಜ್ಞರ ಸಮಿತಿಯನ್ನು ರಚಿಸುತ್ತೇವೆ, ಅದು ಸಮಸ್ಯೆಯ ಎಲ್ಲಾ ಅಂಶಗಳ ಬಗ್ಗೆ ತನಿಖೆ ನಡೆಸಲಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ಗೆ ಈ ಪೆಗಾಸಸ್ ಬಗ್ಗೆ ಸ್ಪಷ್ಟನೆ ನೀಡಿದೆ.
ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸಲ್ಲಿಸಿದ ಎರಡು ಪುಟಗಳ ಅಫಿಡವಿಟ್ ಮೂಲಕ ಕೇಂದ್ರವು ಹೇಳಿಕೆಯೊಂದನ್ನು ನೀಡಿದೆ. "ಈ ಎಲ್ಲಾ ಆರೋಪಗಳನ್ನು ಕೇಂದ್ರ ಸರ್ಕಾರವು ನಿರಾಕರಿಸುತ್ತದೆ. ಇದು ಬರಿಯ ಸುಳ್ಳು ಆರೋಪವಾಗಿದೆ. ಈ ಎಲ್ಲಾ ಆರೋಪಗಳು ನಿಜವಾದುದು ಅಲ್ಲ. ಬರೀ ಊಹೆಗಳನ್ನು ಆಧರಿಸಿದೆ. ಯಾವುದೇ ಆಧಾರವನ್ನು ಹೊಂದಿಲ್ಲ. ಪೆಗಾಸಸ್ ತಂತ್ರಜ್ಞಾನದ ಮೂಲಕ ಬೇಹುಗಾರಿಕೆ ನಡೆಸಲಾಗಿದೆ ಎಂಬ ಎಲ್ಲಾ ಮಾಧ್ಯಮ ವರದಿಗಳು ಸುಳ್ಳು ಅಥವಾ ಅಪೂರ್ಣ ಅಥವಾ ದೃಢೀಕರಿಸಿದ ವಿಷಯವಾಗಿದೆ ಹಾಗೂ ಆಧಾರ ರಹಿತವಾಗಿದೆ ಎಂದು ನಾವು ಸ್ಪಷ್ಟಪಡಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಪೆಗಾಸಸ್ ತಂತ್ರಜ್ಞಾನ ಬಳಸಿ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಸೇರಿದಂತೆ ಹಲವಾರು ಗಣ್ಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ಆರೋಪದ ಬಗ್ಗೆ ಸ್ವತಂತ್ರ ತನಿಖೆ ನಡೆಸುವಂತೆ ಕೋರಿ ಒಂದು ಗುಂಪು ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ. ಈ ಹಿಂದೆ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಈ ಪ್ರಕರಣವನ್ನು ಆಲಿಸುವಾಗ, ಆರೋಪಗಳನ್ನು "ಗಂಭೀರ" ಎಂದು ಹೇಳಿದ್ದರು. ಹಾಗೆಯೇ ಆದರೆ ಫೋನ್ ಹ್ಯಾಕ್ ಮಾಡಲಾಗಿದೆ ಎಂಬುದಕ್ಕೆ ಪುರಾವೆಗಳಿದ್ದಲ್ಲಿ ಇಲ್ಲಿಯವರೆಗೆ ಏಕೆ ಎಫ್ಐಆರ್ ದಾಖಲಿಸಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದರು.
"ಪ್ರೈಮ ಫಾಸಿ ಮೆಟೀರಿಯಲ್ ಮತ್ತು ವರದಿಗಳ ವಿಶ್ವಾಸಾರ್ಹತೆ ಇದೆ ಎಂದು ನಿಮಗೆಲ್ಲರಿಗೂ ತಿಳಿದಿದೆ, ಅದರ ಆಧಾರದ ಮೇಲೆ ನಾವು ವಿಚಾರಣೆಗೆ ಆದೇಶಿಸಬಹುದು. ಆದರೆ ಇತ್ಯಾದಿ ಯಾವುದೇ ಪ್ರಯತ್ನ ಮಾಡಲಾಗಿದೆಯೇ ಎಂದು ನನಗೆ ಗೊತ್ತಿಲ್ಲ. ರಿಟ್ ಅರ್ಜಿಗಳನ್ನು ಸಲ್ಲಿಸಿದ ವ್ಯಕ್ತಿಗಳು ಸಂಪನ್ಮೂಲಗಳನ್ನು ಹೊಂದಿರುವ ಜ್ಞಾನವುಳ್ಳ ವ್ಯಕ್ತಿಗಳಾಗಿರುತ್ತಾರೆ. ಹೆಚ್ಚಿನ ಮಾಹಿತಿಯನ್ನು ಸುಪ್ರೀಂ ಕೋರ್ಟ್ಗೆ ಸಲ್ಲಿಸಲು ಅಗತ್ಯ ಅಧಿಕ ಪ್ರಯತ್ನವನ್ನು ಮಾಡಿರಬೇಕು. ಮನವಿ ಸಲ್ಲಿಸಿದ ಅರ್ಜಿದಾರರಲ್ಲಿ ಕೆಲವರು ಪರಿಣಾಮ ಬೀರುವುದಿಲ್ಲ ಮತ್ತು ಕೆಲವರು ತಮ್ಮ ಫೋನ್ಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಅವರ್ಯಾರು ಕ್ರಿಮಿನಲ್ ದೂರು ದಾಖಲಿಸಲು ಪ್ರಯತ್ನಿಸಿಲ್ಲ," ಎಂದು ಸಿಜೆಐ ಎನ್ ವಿ ರಮಣ ವಿವರಿಸಿದರು.
ಭಾರತದಲ್ಲಿ ತನ್ನದೇ ಮಂತ್ರಿಗಳು ಮತ್ತು ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಸೇರಿದಂತೆ ವಿರೋಧ ಪಕ್ಷದ ನಾಯಕರು, ಪತ್ರಕರ್ತರು ಮತ್ತು ಇತರರ ಮೇಲೆ ಕಣ್ಣಿಡಲು ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನು ಸರ್ಕಾರ ಬಳಸುತ್ತಿರುವ ಬಗ್ಗೆ ಸಂಸತ್ತಿನ ಮಾನ್ಸೂನ್ ಅಧಿವೇಶನ ಪ್ರಾರಂಭವಾಗುವ ಒಂದು ದಿನದ ಮೊದಲು ವರದಿಯಾಗಿದೆ. ಈ ವಿಚಾರದಲ್ಲಿ ವಿರೋಧ ಪಕ್ಷಗಳು ಸದನದಲ್ಲಿ ಭಾರೀ ಗದ್ದಲ ಎಬ್ಬಿಸಿದ್ದವು, ಆದರೆ ಸರ್ಕಾರ ಮಾತ್ರ ಈ ಆರೋಪವನ್ನು ನಿರಂತರವಾಗಿ ಅಲ್ಲಗಳೆಯುತ್ತಿದೆ. ಸುಪ್ರೀಂ ಕೋರ್ಟ್ನಲ್ಲಿಯೂ ಕೇಂದ್ರ ಸರ್ಕಾರ ಈ ಆರೋಪಗಳನ್ನು ಖಡಾಖಂಡಿತವಾಗಿ ನಿರಾಕರಿಸಿದೆ. ಆದರೂ ಈ ಆರೋಪಗಳ ವಿಚಾರದಲ್ಲಿ ತನಿಖೆ ನಡೆಸಲಾಗುವುದು ಎಂದು ಹೇಳಿದೆ.
(ಒನ್ಇಂಡಿಯಾ ಸುದ್ದಿ)
-
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications