ಶಿಕ್ಷಣ ಗುಣಮಟ್ಟ ಹೆಚ್ಚಿಸಲು ಕೇಂದ್ರ ಸರ್ಕಾರದಿಂದ ಹೊಸ ಯೋಜನೆ
ನವದೆಹಲಿ, ಜನವರಿ 7: ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟ ಹೆಚ್ಚಿಸಲು ಮಾನವ ಸಂಪನ್ಮೂಲ ಸಚಿವಾಲಯ ಹೊಸ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.
ಶಾಲಾ ಶಿಕ್ಷಣದ ಗುಣಮಟ್ಟ ತಿಳಿಯಲು ಪ್ರತಿ ರಾಜ್ಯದಲ್ಲಿಯೂ ಅಲ್ಲಿನ ಗುಣಮಟ್ಟದ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲು ಮುಂದಾಗಿದೆ.
1,000 ಅಂಕಗಳಿಗೆ ಮೌಲ್ಯಮಾಪನ ಮಾಡಲಾಗುತ್ತದೆ. ಇದಕ್ಕೆ ಒಟ್ಟು 70 ಮಾನದಂಡಗಳನ್ನು ಪರಿಗಣಿಸಲಾಗುತ್ತದೆ. ಆಯಾ ರಾಜ್ಯಗಳು ಗಳಿಸುವ ಅಂಕಗಳಿಗೆ ಅನುಗುಣವಾಗಿ ನಿಗದಿತ ಶ್ರೇಣಿ ನೀಡಲಾಗುತ್ತದೆ ಎಂದು ಎಚ್ಆರ್ಡಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ಈ ಮೌಲ್ಯಮಾಪನ ಪದ್ಧತಿಯಿಂದ ಆಯಾ ರಾಜ್ಯಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಸ್ಪಷ್ಟ ಚಿತ್ರಣ ದೊರಕುತ್ತದೆ. ಅದರ ಆಧಾರದಲ್ಲಿ ಅವುಗಳಲ್ಲಿನ ಗುಣಮಟ್ಟವನ್ನು ಸುಧಾರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನೆರವಾಗುತ್ತದೆ. ಹಾಗೂ ಅಧಿಕ ಶ್ರೇಣಿ ಪಡೆದು ಸಾಧನೆ ಮಾಡಲು ರಾಜ್ಯಗಳ ನಡುವೆ ಸ್ಪರ್ಧಾತ್ಮಕ ಮನೋಭಾವ ಮೂಡಿಸಲು ಕೂಡ ಸಾಧ್ಯವಾಗುತ್ತದೆ ಎಂದಿದ್ದಾರೆ.
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತಯ ತರಬೇತಿ ಮಂಡಳಿಯ (ಎನ್ಸಿಇಆರ್ಟಿ) ಪುಸ್ತಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಿಸಲು ಸಚಿವಾಲಯ ನಿರ್ಧರಿಸಿದೆ. ಪೋಷಕರಿಗೆ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಪುಸ್ತಕವನ್ನು ಖರೀದುಸವ ಹಕ್ಕಿದೆ. ಇದನ್ನು ಈಡೇರಿಸಲು ಪ್ರಸಕ್ತ ವರ್ಷ 6 ಕೋಟಿ ಪುಸ್ತಕಗಳನ್ನು ಮುದ್ರಣ ಮಾಡುವ ಗುರಿ ಹೊಂದಲಾಗಿದೆ. ಇದಕ್ಕೂ ಮೊದಲು ಎರಡು ವರ್ಷಗಳ ಹಿಂದೆ 2 ಕೋಟಿ ಪುಸ್ತಕಗಳನ್ನಷ್ಟೇ ಮುದ್ರಿಸಲಾಗಿತ್ತು ಎಂದು ವಿವರಿಸಿದ್ದಾರೆ.
ಶಾಲಾ ಪಠ್ಯಕ್ರಮದಲ್ಲಿಯೂ ಬದಲಾವಣೆ ಮಾಡುವ ಉದ್ದೇಶವಿದ್ದು, ದೈಹಿಕ ಶಿಕ್ಷಣ, ಮೌಲ್ಯಯುತ ಶಿಕ್ಷಣ, ಜೀವನಕೌಶಲ ಶಿಕ್ಷಣ ಮತ್ತು ಪ್ರಾಯೋಗಿಕ ಕಲಿಕೆಗೆ ಸಮಯ ಮೀಸಲಿರುವಂತೆ ಶಾಲಾ ಪಠ್ಯಕ್ರಮವನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications