ಕುಮಾರಣ್ಣ ಪ್ರಮಾಣ ಅಸಾಂವಿಧಾನಿಕ : ತ್ವರಿತ ವಿಚಾರಣೆಗೆ ಸುಪ್ರೀಂ ನಕಾರ
ನವದೆಹಲಿ, ಮೇ 22 : ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಅಸಾಂವಿಧಾನಿಕವಾಗಿದೆ ಎಂದು ಸಲ್ಲಿಸಲಾಗಿರುವ ಅರ್ಜಿಯ ತ್ವರಿತ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ನಿರಾಕರಿಸಿದೆ.
ಮೇ 23ರಂದು, ಗುರುವಾರ ಜಾಜ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ಪ್ರಶ್ನಿಸಿ ಹಿಂದೂ ಮಹಾಸಭಾ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.
ಕುಮಾರಸ್ವಾಮಿಯವರು 23ನೇ ತಾರೀಖಿನಂದೇ ಪ್ರಮಾಣ ಸ್ವೀಕರಿಸುತ್ತಿರುವುದರಿಂದ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಿ, ಪ್ರಮಾಣ ವಚನ ಸಮಾರಂಭಕ್ಕೆ ತಡೆಯೊಡ್ಡಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಇದನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದ್ದಾರೆ.

ಇದು, ಕರ್ನಾಟಕದ ಚುನಾವಣೆ ಮತ್ತು ಸರಕಾರಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಸರ್ವೋಚ್ಚ ನ್ಯಾಯಲಯದ ಮುಂದೆ ಸಲ್ಲಿಸಲಾಗಿರುವ ಮೂರನೇ ಅರ್ಜಿ. ಮೊದಲನೇ ಅರ್ಜಿಯನ್ನು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಹುಮತವಿಲ್ಲದಿದ್ದರೂ ಬಿಜೆಪಿಗೆ ಸರಕಾರ ರಚಿಸಲು ಆಹ್ವಾನ ನೀಡಿದ್ದನ್ನು ಪ್ರಶ್ನಿಸಿ ಮೇ 16ರ ಮಧ್ಯರಾತ್ರಿ ಸಲ್ಲಿಸಲಾಗಿತ್ತು.
ಇದರ ವಿಚಾರಣೆಯನ್ನು ರಾತ್ರಿ 2 ಗಂಟೆಗೆ ನಡೆಸಿದ ಮೂವರು ನ್ಯಾಯಮೂರ್ತಿಗಳ ಪೀಠ, ರಾಜ್ಯಪಾಲರ ತೀರ್ಮಾನಕ್ಕೆ ತಡೆ ವೊಡ್ಡಲಿಲ್ಲವಾದರೂ, ಬಹುಮತವನ್ನು ಒಂದೇ ದಿನದಲ್ಲಿ ಸಾಬೀತುಪಡಿಸಬೇಕೆಂದು ಆದೇಶ ನೀಡಿ, ಯಡಿಯೂರಪ್ಪನವರನ್ನು ಇಕ್ಕಟ್ಟಿನಲ್ಲಿ ತಳ್ಳಿತ್ತು. ವಿರೋಧಪಕ್ಷದ ಶಾಸಕರನ್ನು ಸೆಳೆಯಲು ಸಮಯ ಸಾಲದೆ, ಯಡಿಯೂರಪ್ಪನವರ ಸರಕಾರ ಮೂರೇ ದಿನದಲ್ಲಿ ಬಿದ್ದುಹೋಯಿತು.
ಮತ್ತೊಂದು ಅರ್ಜಿಯನ್ನು, ಇದೇ ರಾಜ್ಯಪಾಲರು ಹಂಗಾಮಿ ಸ್ಪೀಕರನ್ನಾಗಿ ಕೆಜಿ ಬೋಪಯ್ಯ ಅವರನ್ನು ಆಯ್ಕೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿತ್ತು. ಅವರಿಗಿಂತ ಹಿರಿಯ ನಾಯಕರಿದ್ದರೂ ಬಿಜೆಪಿ ಪರವಾಗಿರುವ ಬೋಪಯ್ಯನವರನ್ನೇಕೆ ನೇಮಿಸಲಾಗಿದೆ ಎಂದು ಪ್ರಶ್ನಿಸಲಾಗಿತ್ತು. ಈ ಅರ್ಜಿಯನ್ನು ಹಿಂದಿನ ರಾತ್ರಿ ಆಲಿಸಲು ನಿರಾಕರಿಸಿದ್ದ ಕೋರ್ಟ್, ಮರುದಿನ ಬಹುಮತ ಸಾಬೀತಿನ ದಿನದಂತೆ ವಿಚಾರಣೆ ನಡೆಸಿ, ಅರ್ಜಿಯನ್ನು ತಿರಸ್ಕರಿಸಿತ್ತು.
In Pics: ಧರ್ಮಸ್ಥಳಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಕುಮಾರಸ್ವಾಮಿ
ಈಗ ಸುಪ್ರೀಂ ಕೋರ್ಟಿನ ಮುಂದೆ ಮತ್ತೊಂದು ಅರ್ಜಿಯನ್ನು ಗುಜರಾಯಿಸಲಾಗಿದೆ. ತ್ವರಿತವಾಗಿ ಈ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಕುಮಾರಸ್ವಾಮಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಗುರುವಾರ ಸಂಜೆ 4.30ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಿರಾತಂಕವಾಗಿ ನಡೆಯಲಿದೆ. ಈ ಸಮಾರಂಭಕ್ಕೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಅರವಿಂದ್ ಕೇಜ್ರಿವಾಲ್, ಮಾಯಾವತಿ, ಮಮತಾ ಬ್ಯಾನರ್ಜಿ, ಅಖಿಲೇಶ್, ಕಮಲ್ ಹಾಸನ್ ಮುಂತಾದವರು ಬರುತ್ತಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications