ಚಳಿಗಾಲದ ನಂತರ ಪೆಟ್ರೋಲಿಯಂ ದರ ತುಸು ಕಡಿಮೆಯಾಗಲಿದೆ:ಧರ್ಮೇಂದ್ರ ಪ್ರಧಾನ್
ನವದೆಹಲಿ,ಫೆಬ್ರವರಿ 26:ದಿನೇ ದಿನೆ ತೈಲ ದರ ಏರಿಕೆಯಾಗುತ್ತಿದೆ. ಚಳಿಗಾಲದ ಬಳಿಕ ಪೆಟ್ರೋಲಿಯಂ ದರ ತುಸು ಕಡಿಮೆಯಾಗಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ದೇಶದಲ್ಲಿ ಕಳೆದ ಕೆಲವು ವಾರಗಳಿಂದೀಚೆಗೆ ಪ್ರತಿ ದಿನ ಪೆಟ್ರೋಲ್, ಡೀಸೆಲ್ ಹಾಗೂ ಎಲ್ಪಿಸಿ ಬೆಲೆ ಹೆಚ್ಚಾಗುತ್ತಿದೆ. ಪೆಟ್ರೋಲ್ 100ಸನಿಹ ತಲುಪಿದೆ.
ಗುರುವಾರವಷ್ಟೇ ಎಲ್ಪಿಜಿಸಿಲಿಂಡರ್ ಬೆಲೆಯಲ್ಲಿ 24ರೂನಷ್ಟು ಏರಿಕೆಯಾಗಿದೆ. ಇದರೊಂದಿಗೆ ಫೆಬ್ರವರಿಯಲ್ಲಿ ಒಟ್ಟು ಮೂರು ಬಾರಿ ಎಲ್ಪಿಜಿ ದರ ಏರಿಕೆಯಾದಂತಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಪರಿಣಾಮ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆಯಾಗಿರುವುದುಗ್ರಾಹಕರ ಮೇಲೂ ಪರಿಣಾಮ ಬೀರಿದೆ. ಚಳಿಗಾಲ ಮುಗಿಯುತ್ತಿದ್ದಂತೆ ಪೆಟ್ರೋಲ್ ಬೆಲೆ ಸ್ವಲ್ಪ ಇಳಿಕೆಯಾಗಲಿದೆ.
ಇದು ಅಂತಾರಾಷ್ಟ್ರೀಯ ವಿಚಾರ, ಬೇಡಿಕೆ ಹೆಚ್ಚಾಗಿರುವುದರಿಂದ ಬೆಲೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂದರು.
ತೈಲ ನಿಕ್ಷೇಪ
ದೇಶದ ಮೊದಲ ತೈಲ ನಿಕ್ಷೇಪಗಳು ಅಸ್ಸಾಂನ ಡಿಗ್ಬಾಯ್ ಮತ್ತು ದುಲಿಯಾಜನ್ ಪ್ರದೇಶಗಳ ಬಳಿ ಪತ್ತೆಯಾಗಿತ್ತು.ಮತ್ತು ದೇಶದ ತೈಲ ಸಂಪನ್ಮೂಲಗಳಲ್ಲಿಶೇ.18ರಷ್ಟು ಈಶಾನ್ಯ ಪೂರ್ವ ಪ್ರದೇಶಗಳಲ್ಲಿ ಇದೆ.
ಅಸ್ಸಾಂ, ಅರುಣಾಚಲ,ನಾಗಾಲ್ಯಾಂಡ್,ಮಿಜೋರಾಂ,ತ್ರಿಪುರಾ ತೈಲ ಹಾಗೂ ಅನಿಲ ಕ್ಷೇತ್ರಗಳಿಂದ ತುಂಬಿರುವ ಪ್ರದೇಶಗಳಾಗಿವೆ.

ಬೆಂಗಳೂರಲ್ಲಿ ಪೆಟ್ರೋಲ್ ದರ
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್ಗೆ 93.98 ರೂಪಾಯಿಗೆ ತಲುಪಿದೆ. ಡೀಸೆಲ್ ದರವು ಪ್ರತಿ ಲೀಟರ್ಗೆ 86.21ರೂಪಾಯಿಗೆ ಮುಟ್ಟಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರಕಟಿಸಿದೆ.

ಇಂಧನ ಬೆಲೆ ಏರಿಕೆ ವಿರೋಧಿಸಿ ಭಾರತ ಬಂದ್
ಇಂಧನ ಬೆಲೆ ಏರಿಕೆ, ಇ-ವೇ ಬಿಲ್ ಮತ್ತು ಸರಕು ಸೇವಾ ತೆರಿಗೆ ವಿರೋಧಿಸಿ ಅಖಿಲ ಭಾರತ ವರ್ತಕರ ಒಕ್ಕೂಟ ಭಾರತ್ ಬಂದ್ ಗೆ ಕರೆ ನೀಡಿದೆ. ಶುಕ್ರವಾರ ದೇಶಾದ್ಯಂತ ಎಲ್ಲ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಿದೆ.. ಅಖಿಲ ಭಾರತ ವರ್ತಕರ ಒಕ್ಕೂಟ ಕರೆ ನೀಡಿರುವ ಭಾರತ್ ಬಂದ್ ಗೆ 40,000 ವ್ಯಾಪಾರಿ ಸಂಘಗಳು ಬೆಂಬಲ ವ್ಯಕ್ತಪಡಿಸಿವೆ. ಅಖಿಲ ಭಾರತ ಸಾರಿಗೆ ಕಲ್ಯಾಣ ಸಂಘ ಸಹ ಭಾರತ್ ಬಂದ್ ಹಾಗೂ ಚಕ್ಕಾ ಜಾಮ್ ಹೋರಾಟಕ್ಕೆ ಬೆಂಬಲಿಸಿದೆ.
-
ಬೆಂಗಳೂರಿನ ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಕ್ಯೂ: ಗ್ಯಾಸ್ ಇಲ್ಲದೆ ಕಂಗಾಲಾದ ಆಟೋ ಚಾಲಕರು -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications