ಪಿಎಫ್ಐ- ಎಸ್ಡಿಪಿಐ ಮಧ್ಯೆ ನಂಟಿಲ್ಲ: ರಾಜೀವ್ ಕುಮಾರ್
ನವದೆಹಲಿ, ಅಕ್ಟೋಬರ್ 04: ಅಧಿಕಾರಿಗಳು ಕೇಳಿದ್ದ ಅಗತ್ಯ ಎಲ್ಲ ದಾಖಲೆ ಸಲ್ಲಿಸಿರುವ ರಾಜಕೀಯ ಸಂಘಟನೆ ಎಸ್ಡಿಪಿಐ ಹಾಗೂ ಐದು ವರ್ಷ ನಿಷೇಧಿಸಲ್ಪಟ್ಟ ಪಿಎಫ್ಐ ಮಧ್ಯದಲ್ಲಿ ಯಾವುದೇ ಸಂಪರ್ಕ, ಸಂಬಂಧಗಳು ಕಂಡು ಬಂದಿಲ್ಲ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ತಿಳಿಸಿದ್ದಾರೆ.
ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಹಾಗೂ ಅದರ ಅಂಗಸಂಸ್ಥೆಗಳ ಮೇಲೆ ಕಾನೂನು ಕ್ರಮ ಮುಂದುವರಿಯುತ್ತಿದೆ. ಈ ನಿಟ್ಟಿನಲ್ಲಿ ಕೇಳಲಾಗಿದ್ದ ಅಗತ್ಯ ದಾಖಲೆಗಳನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಒದಗಿಸಿದೆ. ಇದನ್ನು ಚುನಾವಣೆ ಆಯೋಗ ಹಾಗೂ ಸಂಬಂಧಿಸಿದ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಇದರಲ್ಲಿ ಕೇಂದ್ರ ಗೃಹ ಸಚಿವಾಲಯ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಾಗೂ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿ ನಡುವೆ ಯಾವುದೇ ಸಂಬಂಧಗಳು ಇಲ್ಲ ಎಂಬುದನ್ನು ಚುನಾವಣಾ ಆಯೋಗಕ್ಕೆ ತಿಳಿದು ಬಂದಿದೆ.

ಎಸ್ಡಿಪಿಐ ನಿಷೇಧಕ್ಕೆ ಒಳಪಟ್ಟಿಲ್ಲ
ಇತ್ತೀಚೆಗೆ ಸೆಪ್ಟಂಬರ್ 28 ರಂದು ಕೇಂದ್ರ ಸರ್ಕಾರವು ದೇಶದ ಹಿತ ದೃಷ್ಟಿಯಿಂದ ಭದ್ರತೆ ಮತ್ತು ಭಯೋತ್ಪಾದಕ ಸಂಬಂಧಗಳಿಗೆ ಆರೋಪದ ಮೇರೆಗೆ ತೀವ್ರಗಾಮಿ ಸಂಘಟನೆಯಾದ ಪಿಎಫ್ಐ ಮತ್ತದರ ಅಂಗ ಸಂಸ್ಥೆಗಳನ್ನು ಸೇರಿ ಒಟ್ಟು ಎಂಟು ಸಂಘಟನೆಗಳನ್ನು ಐದು ವರ್ಷ ನಿಷೇಧಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿಯಲ್ಲಿ ಸಂಘಟನೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಆದರೆ ಇದರಲ್ಲಿ ಎಸ್ಡಿಪಿಐ ನಿಷೇಧಕ್ಕೆ ಒಳಪಟ್ಟಿಲ್ಲ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
ಪಿಎಫ್ಐ ಚಟುವಟಿಕೆ ಕುರಿತು ತನಿಖಾ ಸಂಸ್ಥೆಗಳಿಂದ ತನಿಖೆ ಮುಂದುವರಿದಿದೆ. ಈ ವೇಳೆ ಎಸ್ಡಿಪಿಐಗೆ ಕೆಲವು ಅಗತ್ಯ ದಾಖಲೆಗಳನ್ನು ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಸಲ್ಲಿಕೆಯಾದ ದಾಖಲೆ ಪರಿಶೀಲಿಸಿದ ಅಧಿಕಾರಿಗಳು ಈ ಎರಡು ಸಂಘಟನೆಗಳನ ಮಧ್ಯದಲ್ಲಿನ ಸಂಬಂಧ ಬಗ್ಗೆ ಸ್ಪಷ್ಟತೆ ನೀಡಿದ್ದಾರೆ. ಪಿಎಫ್ಐನ ಎಲ್ಲ ಚಟುವಟಿಕೆಗಳ ಬಗ್ಗೆ ತಿಳಿದಿದೆ. ಆದರೆ ಎಸ್ಡಿಪಿಐ ಅಗತ್ಯ ದಾಖಲೆ ನೀಡಿದ್ದು, ಅದಕ್ಕೂ ಪಿಎಫ್ಐ ನಡುವೆ ಸಂಪರ್ಕ ಕಂಡು ಬಂದಿಲ್ಲ. ಎಸ್ಡಿಪಿಐ ಪಕ್ಷಕ್ಕೆ ಸಂಬಂಧಿಸಿದಂತೆ ಯಾವುದೇ ಲೋಪಗಳಿಲ್ಲ ಎಂದು ಅವರು ಹೇಳಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ 'PFI ಭಾಗ್ಯ' ಪೋಸ್ಟರ್ ಬಿಡುಗಡೆ ಮಾಡಿದ ಆರ್ ಅಶೋಕ್
ಸ್ಥಳಿಯ ಸಂಸ್ಥೆಗಳಲ್ಲಿ ಎಸ್ಡಿಪಿಐ ಸದಸ್ಯತ್ವ
2009 ಜೂನ್ 21ರಂದು ಸ್ಥಾಪನೆಯಾದ ಎಸ್ಡಿಪಿಐಯು ಏಪ್ರಿಲ್ 13ರ 2010ರಂದು ಭಾರತದ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಂಡಿದೆ. ಈವರೆಗೆ ಎಸ್ಡಿಪಿಐ ಪಕ್ಷವು ಕೇರಳ, ತಮಿಳುನಾಡು, ರಾಜಸ್ತಾನ್, ಬಿಹಾರ, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶದ ರಾಜ್ಯಗಳಲ್ಲಿ ಪುರಸಭೆ, ನಗರ ಪಾಲಿಕೆ ಮತ್ತು ಗ್ರಾಮ ಪಂಚಾಯತ್ಗಳಲ್ಲಿ ತನ್ನ ಸದಸ್ಯರನ್ನು ಆಯ್ಕೆ ಮಾಡಿದೆ.
ಎಸ್ಡಿಪಿಐ ಪಕ್ಷರು ಮುಸ್ಲಿಮರು ಸೇರಿದಂತೆ ದಲಿತರು, ಹಿಂದುಳಿದ ವರ್ಗ, ಆದಿವಾಸಿಗಳು ಹೀಗೆ ಎಲ್ಲ ನಾಗರಿಕರ ಏಳಿಗೆಗೆ ಹಾಗೂ ಏಕರೂಪದ ಅಭಿವೃದ್ಧಿ ದೃಷ್ಟಿಯಿಂದ ಅಸ್ತಿತ್ವಕ್ಕೆ ಬರಲಾಗಿದೆ ಪಕ್ಷವು ಹೇಳಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications