ದೆಹಲಿ ಸಚಿವ ಸತ್ಯಂದರ್ ಜೈನ್ ಸ್ಥಿತಿ ಗಂಭೀರ, ಪ್ಲಾಸ್ಮಾ ಥೆರಪಿಗೆ ನಿರ್ಧಾರ
ದೆಹಲಿ, ಜೂನ್ 19: ದೆಹಲಿ ಆರೋಗ್ಯ ಸಚಿವ ಸತ್ಯಂದರ್ ಜೈನ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿರುವ ಜೈನ್ ಅವರಿಗೆ ಶ್ವಾಸಕೋಶದ ಸಮಸ್ಯೆ ಹೆಚ್ಚಾಗಿದ್ದು, ಆಕ್ಸಿಜನ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
Recommended Video
ಕೊವಿಡ್ ಸೋಂಕಿಗೆ ತುತ್ತಾಗಿರುವ ಸತ್ಯೇಂದರ್ ಜೈನ್ ಅವರಿಗೆ ನ್ಯುಮೋನಿಯಾ ರೋಗವಿರುವುದರಿಂದ ಶ್ವಾಸಕೋಶದ ಸಮಸ್ಯೆ ಉಲ್ಬಣವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
Breaking: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಆಸ್ಪತ್ರೆಗೆ ದಾಖಲು
ಸದ್ಯ ಜೈನ್ ಅವರ ಆರೋಗ್ಯ ಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಅವರನ್ನು ಸಾಕತ್ನ ಮ್ಯಾಕ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಲ್ಲಿ ಅವರಿಗೆ ಪ್ಲಾಸ್ಮಾ ಚಿಕಿತ್ಸೆಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.
ಇನ್ನು ಆಮ್ ಆದ್ಮಿ ಪಕ್ಷದ ಶಾಸಕ ಅತಿಶಿ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಸಲಹೆಗಾರ ಅಕ್ಷಯ್ ಮರಾಠೆ ಹಾಗೂ ಉಪ ಸಿಎಂ ಮನೀಶ್ ಸಿಸೋಡಿಯಾ ಅವರ ಸಲಹೆಗಾರ ಅನಿಂದಿತಾ ಮಾಥುರ್ ಅವರಿಗೆ ಸಹ ಕೊವಿಡ್ ದೃಢಪಟ್ಟಿತ್ತು. ಇವರು ಕೂಡ ಉಸಿರಾಟದ ಕಾಯಿಲೆಗೆ ಗುರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸತ್ಯಂದರ್ ಜೈನ್ ಅವರು ಆದಷ್ಟೂ ಬೇಗ ಚೇತರಿಸಿಕೊಳ್ಳಲಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವಿಟ್ಟರ್ ಮೂಲಕ ಶುಭಹಾರೈಸಿದ್ದರು.