ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಯಾ ಪ್ರಕರಣವನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸುತ್ತಿದೆ: ಬಿಜೆಪಿ

|
Google Oneindia Kannada News

ನವದೆಹಲಿ, ಏಪ್ರಿಲ್ 19: ನ್ಯಾ.ಬಿ ಎಚ್ ಲೋಯಾ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸುತ್ತಿದ್ದಂತೆಯೇ ಬಿಜೆಪಿ ಸುದ್ದಿಗೋಷ್ಠಿಯನ್ನು ನಡೆಸಿ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ನ್ಯಾ.ಲೋಯಾ ಹತ್ಯೆ: SIT ರಚಿಸುವಂತೆ ಕೋರಿದ್ದ ಅರ್ಜಿ ವಜಾನ್ಯಾ.ಲೋಯಾ ಹತ್ಯೆ: SIT ರಚಿಸುವಂತೆ ಕೋರಿದ್ದ ಅರ್ಜಿ ವಜಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಕಾಂಗ್ರೆಸ್ ನಡೆಸಿದ ಪಿತೂರಿ ಇದು. ದೇಶದಲ್ಲಿ ರಾಜಕೀಯ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರುವ ಕಾಂಗ್ರೆಸ್ ಬಿಜೆಪಿ ಹೆಸರಿಗೆ ಮಸಿಬಳಿಯಲು ಈ ಪ್ರಯತ್ನ ಮಾಡಿದೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಹೇಳಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಈ ಅರ್ಜಿಗಳು ನ್ಯಾಯಾಂಗದ ವಿರುದ್ಧ ನಡೆದ ಪಿತೂರಿ. ತಮ್ಮ ಸ್ವಾರ್ಥಕ್ಕಾಗಿ ಕೆಲವರು ಲೋಯಾ ನಿಧನವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪಾತ್ರಾ ಹೇಳಿದ್ದಾರೆ.

Plea in justice Loya case: BJP blanes Rahul Gandhi

ಈ ಕುರಿತು ಮಾತನಾಡಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ನ್ಯಾ.ಲೋಯಾ ಪ್ರಕರಣದಲ್ಲಿ ಸುಳ್ಳು ಆಪಾದನೆ ಮಾಡಿದ್ದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಕ್ಷಮೆ ಕೇಳಬೇಕು ಎಂದಿದ್ದಾರೆ.

English summary
Bharatiya Janata Party (BJP) on Thursday targeted Congress president Rahul Gandhi for allegedly hatching a conspiracy against party chief Amit Shah in Justice BH Loya case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X