ಅಪನಗದೀಕರಣದಿಂದ ನಗದು ವ್ಯವಹಾರ ಇಳಿಕೆ: ಜೇಟ್ಲಿ
ನವದೆಹಲಿ, ಸೆಪ್ಟೆಂಬರ್ 13: ಸಮಾಜದಲ್ಲಿ ನಗದು ವ್ಯವಹಾರ ಕಡಿಮೆ ಮಾಡಬೇಕು ಎಂಬುದೇ ಅಪನಗದೀಕರಣದ ಉದ್ದೇಶವಾಗಿತ್ತು. ಅದು ಈಡೇರಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ನವದೆಹಲಿಯಲ್ಲಿ ಬುಧವಾರ ಆಯೋಜಿಸಿರುವ ವಿಶ್ವಸಂಸ್ಥೆಯ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು.
ಆಧಾರ್ ಜಾರಿಗೆ ತಂದಾಗ ಅದರ ಪ್ರಭಾವವನ್ನು ಪೂರ್ಣ ಪ್ರಮಾಣದಲ್ಲಿ ಅರಿತಿರಲಿಲ್ಲ. ಆಧಾರ್ ಶಾಸನಬದ್ಧಗೊಳಿಸುವುದು ಸಂವಿಧಾನಕ್ಕೆ ಒಂದು ಸವಾಲು ಎಂದು ಅವರು ಹೇಳಿದ್ದಾರೆ.

ಅಪನಗದೀಕರಣದ ಪರಿಣಾಮವಾಗಿ ನಗದು ವ್ಯವಹಾರದ ಪ್ರಮಾಣ ಕಡಿಮೆಯಾಗಿದೆ. ತೆರಿಗೆ ಪಾವತಿಸುವವರ ಸಂಖ್ಯೆ ಹೆಚ್ಚಾಗಿದೆ. ಆರ್ಥಿಕತೆಯಲ್ಲಿ ಎಲ್ಲವೂ ಅಧಿಕೃತ ಲೆಕ್ಕಾಚಾರ ತಿಳಿಯುತ್ತಿದೆ ಎಂದು ಅವರು ಹೇಳಿದ್ದಾರೆ.
ಶೂನ್ಯ ಠೇವಣಿಯ ಪ್ರಧಾನ ಮಂತ್ರಿ ಜನ್ ಧನ್ ಯೋಜನೆ ಕಳೆದ ಮೂರು ವರ್ಷದಲ್ಲಿ ಶೇ 77ರಿಂದ ಶೇ 20ಕ್ಕೆ ಇಳಿಕೆಯಾಗಿದೆ. ದುರ್ಬಲ ವರ್ಗದವರಿಗಾಗಿ ತೆರೆಯಲಾದ ಖಾತೆಗಳು ವಿಪರೀತ ದೊಡ್ಡ ಸಂಖ್ಯೆಯಲ್ಲಿವೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ವಿಶ್ವಸಂಸ್ಥೆಯ ಫೈನಾನ್ಷಿಯಲ್ ಇನ್ ಕ್ಲೂಷನ್ ನ ಸಮಾವೇಶದಲ್ಲಿ ಅರುಣ್ ಜೇಟ್ಲಿ ಅವರು ಹೇಳಿದ ಪ್ರಮುಖಾಂಶಗಳು ಹೀಗಿವೆ.
* ಜನರು ಬ್ಯಾಂಕ್ ಖಾತೆ ತೆರೆದರಷ್ಟೇ ಆಗುವುದಿಲ್ಲ, ಅದನ್ನು ಬಳಸಬೇಕು. ಅದಕ್ಕಾಗಿ ಎಲ್ಲ ಸಾಧ್ಯತೆಗಳ ಬಗ್ಗೆಯೂ ಯೋಚಿಸಬೇಕು
* ಸರಕಾರದ ಸಂಪನ್ಮೂಲಗಳು ಅಗತ್ಯ ಇರುವವರನ್ನು ಗುರಿಯಾಗಿಟ್ಟುಕೊಂಡು ತಲುಪಿಸಬೇಕು
* ಸರಕಾರದ ಸಬ್ಸಿಡಿಗಳು ಯಾರನ್ನು ಗುರಿಯಾಗಿಟ್ಟುಕೊಂಡು ನೀಡಲಾಗುತ್ತಿದೆಯೋ ಆ ಜನರಿಗೆ ತಲುಪಬೇಕು
* ಕೇಂದ್ರ ಹಾಗೂ ರಾಜ್ಯದ ಹಂತದಲ್ಲಿ ಪರಿಣಾಮಕಾರಿಯಾದ ಯೋಜನೆಗಳಿವೆ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ತಲುಪುತ್ತಿದೆಯೇ ಎಂಬುದನ್ನು ಖಾತ್ರಿ ಮಾಡಿಕೊಳ್ಳಬೇಕು
* ಬ್ಯಾಂಕ್ ಗಳ ಕಾರ್ಯ ಚಟುವಟಿಕೆ ಉತ್ತಮವಾಗಲಿ ಎಂಬ ಕಾರಣಕ್ಕೆ ಬ್ಯಾಂಕ್ ಮೂಲಕವೇ ಇನ್ಷೂರೆನ್ಸ್ ಹಾಗೂ ನಿವೃತ್ತಿ ವೇತನ ದೊರೆಯುವಂತೆ ಯೋಜನೆ ಮಾಡಿದ್ದೇವೆ
* ನಾವೀಗ ಆಧಾರ್ ನ ಪ್ರಾಮುಖ್ಯತೆ ತಿಳಿಯಲು ಆರಂಭಿಸಿದ್ದೇವೆ. ಭಾರತದ ಭವಿಷ್ಯಕ್ಕೆ ಇದು ಬಹಳ ಮುಖ್ಯ
* ಈ ಹಿಂದೆ ಆಗದಂಥ ಆರ್ಥಿಕ- ರಾಜಕೀಯ ಬದಲಾವಣೆಗಳು ಫೈನಾನ್ಷಿಯಲ್ ಇನ್ ಕ್ಲೂಷನ್ ವಿಚಾರದಲ್ಲಿ ಕಳೆದ ಮೂರು ವರ್ಷದಲ್ಲಿ ಆಗಿದೆ
* ಮೂರು ವರ್ಷದಲ್ಲಿ ಶೂನ್ಯ ಮೊತ್ತದ ಬ್ಯಾಂಕ್ ಖಾತೆಗಳು ಶೇ 77ರಿಂದ ಶೇ 20ಕ್ಕೆ ಇಳಿಕೆಯಾಗಿವೆ
ಇನ್ನು ಜನ್ ಧನ್ ಖಾತೆಯ ಕ್ರಾಂತಿ ಕಾರಿ ಬದಲಾವಣೆ ಬಗ್ಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಇದೇ ಸಮಾವೇಶದಲ್ಲಿ ಸಂಜೆ 4.35ಕ್ಕೆ ಮಾತನಾಡಲಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications