'ಸುಳ್ಳು ಸುದ್ದಿ'ಗೆ ಶಿಕ್ಷೆ: ನಿರ್ಧಾರ ಹಿಂಪಡೆಯಲು ಮೋದಿ ಸೂಚನೆ
ನವದೆಹಲಿ, ಏಪ್ರಿಲ್ 03: ಸುಳ್ಳುಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದುಗೊಳಿಸುವ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಹಿಂಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಪತ್ರಕರ್ತರ ಮಾನ್ಯತೆಗೆ ಸಂಬಂಧಿಸಿದ ಮಾರ್ಗದರ್ಶಿ ಸೂತ್ರಗಳಲ್ಲಿ ತಿದ್ದುಪಡಿ ತಂದು, ಸುಳ್ಳು ಸುದ್ದಿ ಬಿತ್ತರಿಸಿದ್ದು ಸಾಬೀತಾದರೆ ಅಂಥ ಪತ್ರಕರ್ತರ ಮಾನ್ಯತೆ(ಅಕ್ರೆಡಿಷನ್) ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ಒಂದು ದಿನದ ನಂತರ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
'ಸುಳ್ಳುಸುದ್ದಿ' ಕಡಿವಾಣದ ನೆಪದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ?!
ಯಾವುದೇ ಒಂದು ಸುದ್ದಿ ಸುಳ್ಳೋ ಅಥವಾ ಅತ್ಯವೋ ಎಂಬುದನ್ನು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ(ಪಿಸಿಐ)ಮತ್ತು ನ್ಯೂಸ್ ಬ್ರಾಡ್ ಕಾಸ್ಟ್ಟರ್ಸ್ ಅಸೋಸಿಯೇಶನ್(ಎನ್ ಬಿಎ)ಗಳು ನಿರ್ಧರಿಸಬೇಕು ಎಂದು ಪ್ರಕಟಣೆಯಲ್ಲಿ ಹೇಳಲಾಗಿತ್ತು.
ಈ ಕುರಿತಂತೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರದ ನಿರ್ಧಾರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಕೂಗು ಎದ್ದಿತ್ತು.