ಗಾಲ್ವಾನ್ ಸಂಘರ್ಷದ ಕುರಿತು ರಾಷ್ಟ್ರಪತಿಗೆ ಪ್ರಧಾನಿ ಮಾಹಿತಿ
ನವದೆಹಲಿ, ಜುಲೈ.03: ಭಾರತ ಗಡಿ ಪ್ರದೇಶ ಲಡಾಖ್ ಗೆ ಭೇಟಿ ನೀಡಿ ಯೋಧರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾನುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರನ್ನು ಭೇಟಿ ಮಾಡಿದರು.
ನವದೆಹಲಿಯ ರಾಷ್ಟ್ರಪತಿ ಭವನಕ್ಕೆ ತೆರಳಿದ ಪ್ರಧಾನಿ ಮೋದಿ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿರುವ ಸನ್ನಿವೇಶ ಮತ್ತು ಸಮಸ್ಯೆಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಜೊತೆಗೆ ಚರ್ಚೆ ನಡೆಸಿದರು.
ಜುಲೈ.03ರ ಶುಕ್ರವಾರ ಲಡಾಖ್ ನ ಲೇಹ್ ಜಿಲ್ಲೆಯ ನಿಮು ಪ್ರದೇಶಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಭಾರತೀಯ ಯೋಧರನ್ನು ಉದ್ದೇಶಿಸಿ ಮಾತನಾಡಿದರು. ಗಾಲ್ವಾನ್ ನದಿ ಕಣಿವೆಯಲ್ಲಿ ಹೋರಾಟ ನಡೆಸಿ ಹುತಾತ್ಮರಾದ ಭಾರತೀಯ ಯೋಧರ ಬಗ್ಗೆ ಪ್ರತಿಯೊಬ್ಬ ಭಾರತೀಯರಿಗೂ ಗೌರವ ಮತ್ತು ಹೆಮ್ಮೆಯಿದೆ ಎಂದು ಮೋದಿ ತಿಳಿಸಿದ್ದರು.

ಗಾಲ್ವಾನ್ ಕಣಿವೆ ಸಂಘರ್ಷದ ಬಗ್ಗೆ ಚರ್ಚೆ
ಭಾರತ-ಚೀನಾದ ಲಡಾಖ್ ಪೂರ್ವಭಾಗದಲ್ಲಿರುವ ಗಾಲ್ವಾನ್ ಕಣಿವೆಗೆ ಸಂಬಂಧಿಸಿದಂತೆ ನಡೆದ ಸಂಘರ್ಷ ಹಾಗೂ ಅದರ ಸುತ್ತಮುತ್ತಲಿನಲ್ಲಿ ನಡೆದ ಚರ್ಚೆಗಳ ಬಗ್ಗೆ ಉಭಯ ನಾಯಕರು ಮಾಕುಕತೆ ನಡೆಸಿದರು. ಲಡಾಖ್ ನಲ್ಲಿರುವ ಸನ್ನಿವೇಶ, ಯೋಧರ ಆರೋಗ್ಯ ಸ್ಥಿತಿ ಹಾಗೂ ಗಡಿಯಲ್ಲಿ ಸುರಕ್ಷತಾ ಕ್ರಮಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಮಾಹಿತಿ ನೀಡಿದರು ಎಂದು ಹೇಳಲಾಗುತ್ತಿದೆ.

ಪ್ರಧಾನಮಂತ್ರಿ ಮೋದಿಯಿಂದ ಚೀನಾಗೆ ಎಚ್ಚರಿಕೆ ಸಂದೇಶ
ವಿಶ್ವದಲ್ಲಿ ವಿಕಾಸವಾದದ ಯುಗವು ಆರಂಭವಾಗಿದೆ. ವಿಸ್ತಾರವಾದಕ್ಕಿಂತ ವಿಕಾಸವಾದವು ಹೆಚ್ಚು ಶಕ್ತಿಶಾಲಿಯಾಗಿರುತ್ತದೆ. ಆದರೆ ವಿಸ್ತಾರವಾದದಿಂದ ಇಡೀ ಜಗತ್ತಿಗೆ ಹಾಗೂ ಮಾನವೀಯತೆಗೆ ಸಾಕಷ್ಟು ಹಾಸಿಯುಂಟಾಗಿದೆ. ಭಾರತಕ್ಕೆ ಮಾನವನ ಜೀವನ ಮತ್ತು ಶಾಂತಿ, ಸ್ನೇಹ, ಸೌಹಾರ್ದತೆಯೇ ಅಗತ್ಯವಾಗಿದೆ. ವಿಸ್ತಾರವಾದವು ಯಾರಿಗೂ ಉತ್ತಮವಲ್ಲ ಎನ್ನುವ ಮೂಲಕ ಚೀನಾಗೆ ನೇರವಾಗಿ ಎಚ್ಚರಿಕೆ ಸಂದೇಶ ರವಾನಿಸಿದ್ದರು.

ಭಾರತೀಯ ಯೋಧರಿಗೆ ಸಲಾಂ ಎಂದಿದ್ದ ಮೋದಿ
ಭಾರತ ಮಾತೆಯ ಮಣ್ಣಿನ ಶಕ್ತಿ ಎಂಥದ್ದು ಎಂಬುದು ಶತ್ರುಗಳಿಗೆ ತಿಳಿದಿರಲಿಲ್ಲ. ನಮ್ಮ ಯೋಧರ ಶೌರ್ಯ ಹೇಗಿದೆ ಎನ್ನುವುದನ್ನು ಅರಿತುಗೊಳ್ಳದೇ ಗಡಿಯಲ್ಲಿ ಕಾಲ್ಕೆರೆದು ನಿಂತವರಿಗೆ ತಕ್ಕ ಪಾಠ ಕಲಿಸಿದ್ದೀರಿ. ಶತ್ರುಗಳಿಗೆ ಭಾರತೀಯ ಯೋಧರ ಶೌರ್ಯ ಏನು. ಭಾರತ ಮಾತೆಯ ಮಣ್ಣಿನ ಗುಣ ಎಂಥದ್ದು ಎಂಬುದರ ಅರಿವಾಗಿದೆ. ನಿಮ್ಮ ಶೌರ್ಯ ಮತ್ತು ಸಮರ್ಪಣೆಗೆ ಸರಿಸಾಟಿ ಇಲ್ಲ. ನಿಮ್ಮ ತೋಳುಗಳು ನಿಮ್ಮನ್ನು ಸುತ್ತುವರೆದಿರುವ ಪರ್ವತಗಳಂತೆ ಬಲವಾಗಿರುತ್ತವೆ. ನಿಮ್ಮ ಆತ್ಮವಿಶ್ವಾಸ, ದೃಢ ನಿಶ್ಚಯ ಮತ್ತು ನಂಬಿಕೆಯು ಇಲ್ಲಿರುವ ಶಿಖರಗಳಂತೆ ಸ್ಥಿರವಾಗಿವೆ. ಪ್ರತಿಯೊಬ್ಬ ಭಾರತೀಯರು ಕೂಡಾ ನಿಮ್ಮ ಬಗ್ಗೆ ಗೌರವ ಮತ್ತು ಹೆಮ್ಮೆ ಪಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಯೋಧರನ್ನು ಹಾಡಿ ಹೊಗಳಿದ್ದರು.

53 ವರ್ಷಗಳಲ್ಲ ಮೊದಲ ಬಾರಿ ಗಾಲ್ವಾನ್ ನಲ್ಲಿ ಗಾಂಚಾಲಿ
ಕಳೆದ 53 ವರ್ಷಗಳ ನಂತರದಲ್ಲೇ ಮೊದಲ ಬಾರಿಗೆ ಗಾಲ್ವಾನ್ ಕಣಿವೆ ವಿಚಾರಕ್ಕೆ ಭಾರತ-ಚೀನಾ ಯೋಧರ ನಡುವೆ ಸಂಘರ್ಷ ನಡೆದಿತ್ತು. ಜೂನ್.15 ಮತ್ತು 16ರಂದು ಚೀನಾ ಸೈನಿಕರು ತೋರಿದ ಕ್ರೌರ್ಯಕ್ಕೆ 20 ಭಾರತೀಯ ಯೋಧರು ಹುತಾತ್ಮರಾಗಿದ್ದು, 76 ಯೋಧರು ಗಾಯಗೊಂಡಿರುವ ಬಗ್ಗೆ ಭಾರತೀಯ ಸೇನೆಯು ಬಹಿರಂಗವಾಗಿ ಸ್ಪಷ್ಟನೆ ನೀಡಿತು. ಆದರೆ ಚೀನಾ ಯಾವುದೇ ರೀತಿಯ ಮಾಹಿತಿ ನೀಡಿರಲಿಲ್ಲ. ಬದಲಿಗೆ ಅಮೆರಿಕಾದ ಗುಪ್ತಚರ ಇಲಾಖೆ ನೀಡಿದ ಅಂಕಿ-ಅಂಶಗಳ ಪ್ರಕಾರ ಭಾರತೀಯ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಚೀನಾದ ಕನಿಷ್ಠ 35 ಸೈನಿಕರು ಹತರಾಗಿದ್ದಾರೆ ಎಂದು ತಿಳಿದು ಬಂದಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications