ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಬಾಯ್ತುಂಬ ಹೊಗಳಿದ ಬೆಂಗಳೂರಿನ ಆದರ್ಶ ಶಿಕ್ಷಕಿ ಶೈಲಾ

|
Google Oneindia Kannada News

Recommended Video

ಶಿಕ್ಷಕರ ದಿನಾಚರಣೆಯಂದು ಬೆಂಗಳೂರು ಮೂಲದ ಶಿಕ್ಷಕಿಯನ್ನ ಹೊಗಳಿದ ಮೋದಿ | Oneindia Kannada

ನವದೆಹಲಿ, ಸೆಪ್ಟೆಂಬರ್ 05: ಶೈಕ್ಷಣಿಕ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದ ಬೆಂಗಳೂರಿನ ಶಿಕ್ಷಕಿ ಶೈಲಾ ಆರ್ ಎನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಬಾಯ್ತುಂಬ ಹೊಗಳಿದ್ದಾರೆ.

"ಬೆಂಗಳೂರು ಉತ್ತರದಲ್ಲಿ ತಾವು ಕೆಲಸ ಮಾಡುತ್ತಿದ್ದ ಶಾಲೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ಕು.ಶೈಲಾ ಆರ್ ಎನ್ ಅವರು ಅವಿರತವಾಗಿ ಶ್ರಮಿಸಿದ್ದಾರೆ. ಅವರ ಸೇವೆ ಸಾಕಷ್ಟು ವಿದ್ಯಾರ್ಥಿಗಳ ಬದುಕಿನಲ್ಲಿ ಧನಾತ್ಮಕ ಪ್ರಭಾವ ಬೀರಿದೆ. ಅದರಲ್ಲೂ ಬಡ ಕುಟುಂಬಕ್ಕೆ ಸೇರಿದ ಮಕ್ಕಳ ಮೇಲೆ ಅವರ ಪ್ರಭಾವ ಸಾಕಷ್ಟಿದೆ. ಇವರಂಥ ಶಿಕ್ಷಕರು ನಮ್ಮ ಹೆಮ್ಮೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಶೈಕ್ಷಣಿಕ ಕ್ಷೇತ್ರದ ಅತ್ಯತ್ತಮ ಸಾಧನೆಗಾಗಿ ಶೈಲಾ ಅವರಿಗೆ ಈ ಬಾರಿಯ ಅತ್ಯುತ್ತಮ ಶಿಕ್ಷಕಿ ರಾಷ್ಟ್ರ ಪ್ರಶಸ್ತಿಯೂ ಸಂದಿದೆ. 46 ವರ್ಷ ವಯಸ್ಸಿನ ಶೈಲಾ ಅವರು ಕಳೆದ 24 ವರ್ಷಗಳಿಂದ ಹಲವು ಶಾಲೆಗಳಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯಕ್ಕೆ ಬೆಂಗಳೂರು ಉತ್ತರದ ಉಪನಿರ್ದೇಶಕರ ಕಚೇರಿಗೆ ವರ್ಗಾವಣೆಯಾಗಿರುವ ಅವರು ಶಿಕ್ಷಣ ಕ್ಷೇತ್ರಕ್ಕಾಗಿಯೇ ತಮ್ಮ ಬದುಕನ್ನು ಮುಡಿಪಾಗಿಟ್ಟಿದ್ದಾರೆ.

PM Modi praises Bangaluru teacher Shaila R N on teachers day

ಕಲಿಕೆಯ ಹಸಿವನ್ನು ನೀಗಿಸಲು ಅರಿವೆಂಬ ತುತ್ತು ತಿನ್ನಿಸುವ ಶಿಕ್ಷಕಕಲಿಕೆಯ ಹಸಿವನ್ನು ನೀಗಿಸಲು ಅರಿವೆಂಬ ತುತ್ತು ತಿನ್ನಿಸುವ ಶಿಕ್ಷಕ

ಶಿಕ್ಷಕರ ದಿನವಾದ ಇಂದು(ಸೆ.5) ನಮ್ಮ ಕನ್ನಡದ ಶಿಕ್ಷಕಿಯನ್ನು ಪ್ರಧಾನಿ ಮೋದಿಯವರು ಶ್ಲಾಘಿಸಿದ್ದು ಹೆಮ್ಮೆಯೇ ತಾನೇ?

ಪುರಸ್ಕರಿಸಬೇಕಾದ ಗುರುವಿನ ಗೌರವ ಕುಸಿಯಲು ಕಾರಣವೇನು?ಪುರಸ್ಕರಿಸಬೇಕಾದ ಗುರುವಿನ ಗೌರವ ಕುಸಿಯಲು ಕಾರಣವೇನು?

ಶೈಲಾ ಅವರಷ್ಟೇ ಅಲ್ಲದೆ, ಕರ್ನಾಟಕದ ಡಾ. ಎಂ ಶಿವಕುಮಾರ್ ಮತ್ತು ಡಾ.ಜಿ ರಮೇಶಪ್ಪ ಎಂಬ ಮೂವರು ಶಿಕ್ಷಕರಿಗೂ ಈ ಸಾಲಿನ ರಾಷ್ಟ್ರ ಪ್ರಶಸ್ತಿ ಸಂದಿರುವುದು ಶ್ಲಾಘನೀಯ.

ಶಿವಕುಮಾರ್ ಅವರು ಚಿಕ್ಕಬಳ್ಳಾಪುರದವರಾಗಿದ್ದು ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಮಕ್ಕಳಿಗೆ ಕ್ಲಿಷ್ಟಕರವಾದ ಗಣಿತವನ್ನು ಸುಲಭವಾಗಿ ಕಲಿಸುತ್ತಾರೆ.

ಹಾಗೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾ.ಜಿ.ರಮೇಶಪ್ಪ ಅವರು ದೈಹಿಕ ಶಿಕ್ಷಕರಾಗಿದ್ದು, ಮಕಕಳಿಗೆ ಯೋಗ ಮತ್ತು ಕ್ರೀಡೆಯ ಮಹತ್ವ ತಿಳಿಸಿಕೊಡುತ್ತಿದ್ದಾರೆ. ಅವರಿಗೂ ಈ ಬಾರಿಯ ಉತ್ತಮ ಶಿಕ್ಷಕ ರಾಷ್ಟ್ರಪ್ರಶಸ್ತಿ ಬಂದಿದೆ.

ಬೆಂಗಳೂರಿನ ದೆಹಲಿ ಪಬ್ಲಿಕ್ ಶಾಲೆಯ ಮಂಜು ಬಾಲಸುಬ್ರಹ್ಮಣ್ಯಂ ಅವರು ದಿವ್ಯಾಂಗ ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಅವರಿಗೂ ಈ ಪ್ರಶಸ್ತಿ ಲಭ್ಯವಾಗಿದ್ದು, ಮೋದಿಯವರು ಇವರನ್ನೂ ಶ್ಲಾಘಿಸಿದ್ದಾರೆ.

{document1}

English summary
Prime minister Narendra Modi on his twitter praised Bangaluru teacher Shaila R N for her selfless work in educational field. She is receiving Best teacher national award on Teachers day(Sep 5)
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X