ದಿಗ್ಗಜರ ಸಮಾಗಮಕ್ಕೆ ಕಾರಣವಾದ ಸ್ವಚ್ಛ ಭಾರತ
ನವದೆಹಲಿ, ಅ.16: ದೇಶದ ಇಬ್ಬರು ದಿಗ್ಗಜರ ಸಮಾಗಮಕ್ಕೆ ಸ್ವಚ್ಛ ಭಾರತ ಅಭಿಯಾನ ಕಾರಣವಾಗಿದೆ ಕ್ರಿಕೆಟ್ ಕ್ಷೇತ್ರದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಇದೇ ಅಭಿಯಾನ ಕಾರಣವಾಗಿದೆ. ಮೋದಿ ಅವರ ಕರೆಗೆ ಓಗೊಟ್ಟು ಸಚಿನ್ ಅವರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿ ಸಚಿನ್ ರನ್ನು ಹಾಡಿ ಹೊಗಳಿದ್ದಾರೆ.
ಪತ್ನಿ ಅಂಜಲಿ ಜೊತೆ ಸಚಿನ್ ಅವರು ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಇತ್ತೀಚೆಗೆ ಮೋದಿ ಅವರಿಗೆ ಆರೋಗ್ಯಕರ ಸಲಹೆಯನ್ನು ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ ನೀಡಿದ್ದರು. ಸ್ವಚ್ಛತಾ ಅಭಿಯಾನದ ಜೊತೆಗೆ ಮೋದಿ ಅವರು ಗ್ರಾಮಗಳ ಆರೋಗ್ಯ ಕೇಂದ್ರಗಳ ಅಭಿವೃದ್ಧಿಗೂ ಒತ್ತು ನೀಡಿದರೆ ಒಳ್ಳೆಯದು ಎಂದು ಸಚಿನ್ ಹೇಳಿದ್ದರು. [ವಿವರ ಇಲ್ಲಿ ಓದಿ]

ಸಚಿನ್ ಭೇಟಿ ಕುರಿತಂತೆ ಪ್ರಧಾನಿ ಮೋದಿ ಅವರು ಸರಣಿ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ್ದರು. ದೇಶದ ಸ್ವಚ್ಛತೆ ವಿಷಯದಲ್ಲಿ ಸಚಿನ್ ಅವರು ತೋರಿರುವ ಕಾಳಜಿಗೆ ಧನ್ಯವಾದಗಳು ಎಂದು ಮೋದಿ ಟ್ವೀಟ್ ಮಾಡಿದ್ದರು. ಇದರ ಜೊತೆಗೆ ಸಂಸದರ ಆದರ್ಶ್ ಗ್ರಾಮ ಯೋಜನೆ ಅಡಿಯಲ್ಲಿ ಒಂದು ಗ್ರಾಮವನ್ನು ದತ್ತು ತೆಗೆದುಕೊಳ್ಳುವಂತೆ ಸಂಸದ ಸಚಿನ್ ಅವರಿಗೆ ಮೋದಿ ಅವರು ಕೇಳಿಕೊಂಡಿದ್ದಾರೆ.
It was wonderful meeting Prime Minister Modiji. Enthusiastically heard thoughts on #SportsForAll
— sachin tendulkar (@sachin_rt) October 16, 2014 ಮೋದಿ ಅವರ ಕೋರಿಕೆಯನ್ನು ಸಚಿನ್ ಅವರು ಒಪ್ಪಿಕೊಂಡ ನಂತರ ಖುಷಿಯಲ್ಲಿ ಮೋದಿ ಅವರು ಈ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನದಂದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಮೋದಿ ಅವರು ಸಚಿನ್ ತೆಂಡೂಲ್ಕರ್ ಸೇರಿದಂತೆ ದೇಶದ 9 ಪ್ರಮುಖ ಸೆಲೆಬ್ರಿಟಿಗಳನ್ನು ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಟ್ವೀಟ್ ಮಾಡಿ ನಾಮಾಂಕಿತಗೊಳಿಸಿದ್ದರು.
I am delighted to know that the sporting legend will adopt a village under Saansad Adarsh Gram Yojana. @sachin_rt
— Narendra Modi (@narendramodi) October 16, 2014 With @sachin_rt. pic.twitter.com/GO6eCRuHqw
— Narendra Modi (@narendramodi) October 16, 2014 -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications