ಮತದಾನದ ಅರಿವು ಮೂಡಿಸಲು ಸೆಲೆಬ್ರಿಟಿಗಳಿಗೆ ಮೋದಿ ಮನವಿ
Recommended Video

ನವದೆಹಲಿ, ಮಾರ್ಚ್ 13: ಮತದಾನದ ಕುರಿತು ಅರಿವು ಮೂಡಿಸುವ ಸಲುವಾಗಿ ಬಾಲಿವುಡ್ ತಾರೆಯರು, ಕ್ರೀಡಾಪಟುಗಳು, ಮಾಧ್ಯಮ ಲೋಕದ ದಿಗ್ಗಜರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಬಾಲಿವುಡ್ ತಾರೆಯರಾದ ಅಕ್ಷಯ್ ಕುಮಾರ್, ಸಲ್ಮಾನ್ ಖಾನ್, ಆಮಿರ್ ಖಾನ್, ವಿಕಿ ಕೌಶಾಲ್ ಅನುಷ್ಕಾ ಶರ್ಮಾ, ದೀಪಿಕಾ ಪಡುಕೋಣೆ, ಆಲಿಯಾ ಭಟ್; ಗಾಯಕಿ ಲತಾ ಮಂಗೇಷ್ಕರ್, ಸಂಗೀತ ನಿರ್ದೇಶ ಎ ಆರ್ ರೆಹಮಾನ್, ಕ್ರೀಡಾ ಲೋಕದ ದಿಗ್ಗಜರಾದ ವಿರಾಟ್ ಕೋಹ್ಲಿ, ಎಂ ಎಸ್ ಧೋನಿ, ಅನಿಲ್ ಕುಂಭ್ಳೆ, ವೀರೇಂದ್ರ ಸೆಹ್ವಾಗ್ ಸೇರಿದಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ಪ್ರಸಿದ್ಧಿ ಪಡೆದ ತಾರೆಗಳಿಗೆ ಟ್ಯಾಗ್ ಮಾಡುವ ಮೂಲಕ ಮತದಾನದ ಮಹತ್ವದ ಅರಿವು ಮೂಡಿಸುವಂತೆ ಮನವಿ ಮಾಡಿದ್ದಾರೆ.
ಜೊತೆಗೆ ಮಾಧ್ಯಮ ಲೋಕದ ದಿಗ್ಗಜರನ್ನೂ ಟ್ಯಾಗ್ ಮಾಡಿ ಮೋದಿ ಮನವಿ ಮಾಡಿದ್ದಾರೆ. ಯೋಗ ಗುರು ಬಾಬಾ ರಾಮದೇವ್, ಸದ್ಗುರು ಜಗ್ಗಿವಾಸುದೇವ ಅವರಿಗೂ ಮೋದಿ ಮನವಿ ಮಾಡಿದ್ದಾರೆ. ಜೊತೆಗೆ ವಿಪಕ್ಷದ ನಾಯಕರಾದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮುಖ್ಯಮಮತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಂತಾದವರನ್ನೂ ಮೋದಿ ಮನವಿ ಮಾಡಿರುವುದು ವಿಶೇಷ.
ಅಷ್ಟಕ್ಕೂ ಮೋದಿಯವರು ಯಾರಿಗೆಲ್ಲ ಮನವಿ ಮಾಡಿದ್ದಾರೆ? ಆಯ್ದ ಟ್ವೀಟ್ ಗಳು ಇಲ್ಲಿವೆ.
|
ರಾಹುಲ್ ಗಾಂಧಿ, ಮಮತಾ ದೀದಿ ಗೂ ಮನವಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರ ಸಂಖ್ಯೆಯನ್ನು ಹೆಚ್ಚಿಸುವ ಮೂಲಕ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯುವಂತೆ ನಾನು ರಾಹುಲ್ ಗಾಂಧಿ, ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಾಯಾವತಿ, ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಎಂಕೆ ಸ್ಟಾಲಿನ್ ಅವರಲ್ಲಿ ಮನವಿ ಮಾಡುತ್ತೇನೆ -ನರೇಂದ್ರ ಮೋದಿ, ಪ್ರಧಾನಿ
|
ಎಚ್ ಡಿ ಕುಮಾರಸ್ವಾಮಿಗೂ ಮನವಿ
ಈ ಚುನಾವಣೆಯಲ್ಲಿ ಗರಿಷ್ಠ ಭಾರತೀಯರು ಮತಗಟ್ಟೆಗೆ ಬಂದು ಮತಚಲಾಯಿಸಿ ಭಾರತವನ್ನು ಮತ್ತಶಃ್ಟು ಬಲಗೊಳಿಸುವಂತೆ ಮಾಡಲಿ ಎಂದು ಕೆ.ಚಂದ್ರಶೇಖರ್ ರಾವ್, ನವೀನ್ ಪಟ್ನಾಯಕ್, ಎಚ್ ಡಿ ಕುಮಾರಸ್ವಾಮಿ, ಎಚ್ ಚಂದ್ರಬಾಬು ನಾಯ್ಡು ಅವರಿಗೂ ನಾನು ಮನವಿ ಮಾಡುತ್ತೇನೆ- ನರೇಂದ್ರ ಮೋದಿ, ಪ್ರಧಾನಿ
|
ಬಾಬಾ ರಾಮದೇವ್-ಸದ್ಗುರು
ಶ್ರೀ ರವಿಶಂಕರ ಗುರೂಜಿ, ಸದ್ಗುರು ಜಗ್ಗಿ ವಾಸುದೇವ ಮತ್ತು ಬಾಬಾ ರಾಮದೇವ್ ರಂಥ ಅಧ್ಯಾತ್ಮ ಮುಖಂಡರು ಈಗಾಗಲೇ ಹಲವರಲ್ಲಿ ಸ್ಫೂರ್ತಿ ತುಂಬಿದ್ದೀರಿ. ಅದೇ ರೀತಿ ಮತದಾನದ ಕುರಿತೂ ಅರಿವು ಮೂಡಿಸಲು ನಾನು ನಿಮ್ಮಲ್ಲಿ ವಿನಂತಿಸುತ್ತೇನೆ -ನರೇಂದ್ರ ಮೋದಿ, ಪ್ರಧಾನಿ
| Array |
ವಿಕ್ಕಿ ಕೌಶಾಲ್ನನ್ನ ಯುವ ಗೆಳೆಯರಾದ ರಣ್ವೀರ್ ಸಿಂಗ್, ವರುಣ್ ಧವನ್ ಮತ್ತು ವಿಕ್ಕಿ ಕೌಶಾಲ್ ಅವರೇ ಹಲವು ಯುವಕರಿಗೆ ನೀವೆಂದರೆ ಅಕ್ಕರೆ. ಅವರಿಗೆಲ್ಲ ''ನಿಮ್ಮ ಸಮಯ ಈಗ ಬಂದಿದೆ, ಜೋಶ್ ನಲ್ಲಿ ಹೋಗಿ ಮತಚಲಾಯಿಸಿ" ಎನ್ನುವ ಸಮಯ ಬಂದಿದೆ- ನರೇಂದ್ರ ಮೋದಿ, ಪ್ರಧಾನಿ
ನನ್ನ ಯುವ ಗೆಳೆಯರಾದ ರಣ್ವೀರ್ ಸಿಂಗ್, ವರುಣ್ ಧವನ್ ಮತ್ತು ವಿಕ್ಕಿ ಕೌಶಾಲ್ ಅವರೇ ಹಲವು ಯುವಕರಿಗೆ ನೀವೆಂದರೆ ಅಕ್ಕರೆ. ಅವರಿಗೆಲ್ಲ ''ನಿಮ್ಮ ಸಮಯ ಈಗ ಬಂದಿದೆ, ಜೋಶ್ ನಲ್ಲಿ ಹೋಗಿ ಮತಚಲಾಯಿಸಿ" ಎನ್ನುವ ಸಮಯ ಬಂದಿದೆ- ನರೇಂದ್ರ ಮೋದಿ, ಪ್ರಧಾನಿ
|
ಅನುಷ್ಕಾ ಶರ್ಮಾ
ದೀಪಿಕಾ ಪಡುಕೋಣೆ, ಆಲಿಯಾ ಭಟ್ ಮತ್ತು ಅನುಷ್ಕಾ ಶರ್ಮಾ ಅವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಅವರೆಲ್ಲರೂ ಮತದಾನದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ - ನರೇಂದ್ರ ಮೋದಿ, ಪ್ರಧಾನಿ
|
ಮಾಧ್ಯಮ ರಂಗಕ್ಕೆ
ರುಬಿಕಾ ಲಿಯಾಖತ್, ಅಂಜನಾ ಓಂ ಕಶ್ಯಪ್, ಸುಧೀರ್ ಚೌಧರಿ, ರಾಹುಲ್ ಕನ್ವಾಲ್ ಮತ್ತು ರಿಪಬ್ಲಿಕ್ ತಂಡದ ಬಳಿ ನನ್ನ ಮನವಿ. ಜನರಲ್ಲಿ ಮತದಾನದ ದಾಖಲಾತಿ, ಮತ್ತು ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿ. ಅದರಲ್ಲೂ ಯುವಕರಿಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ. ನಿಮ್ಮ ಬೆಂಬಲದಿಂದ ಮತದಾನ ಖಂಡಿತವಾಗಿಯೂ ಹೆಚ್ಚಾಗುತ್ತದೆ- ನರೇಂದ್ರ ಮೋದಿ
|
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್, ಶಾರೂಖ್ ಖಾನ್ ಮತ್ತು ಕರಣ್ ಜೋಹರ್ ಅವರೇ, ಈ ಬಾರಿ ಹೆಚ್ಚಿನ ಮತದಾನ ಮಾಡಲು ನೀವು ಕೈಜೋಡಿಸುವುದಾಗಿ ನನಗೆ ಭರವಸೆ ನೀಡಿ. ಏಕೆಂದರೆ ಮತದಾನ ಎಂದರೆ ನಮ್ಮ ಪ್ರಜಾಪ್ರಭುತ್ವವನ್ನು ಪ್ರೀತಿಸುವುದು ಮತ್ತು ಅದನ್ನು ಬಲಗೊಳಿಸುವುದು- ನರೇಂದ್ರ ಮೋದಿ
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications