ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಖಮರ್ ಮೊಹ್ಸಿನ್ ಶೇಖ್
ನವದೆಹಲಿ, ಆಗಸ್ಟ್ 01: ಪ್ರಧಾನಿ ನರೇಂದ್ರ ಮೋದಿಗೆ ಪಾಕಿಸ್ತಾನ ಮೂಲದ ಸೋದರಿ ಖಮರ್ ಮೊಹ್ಸಿನ್ ಶೇಖ್ ರಾಖಿ ಕಳುಹಿಸಿ ರಕ್ಷಾ ಬಂಧನದ ಶುಭಾಶಯ ತಿಳಿಸಿದ್ದಾರೆ.
ಆಗಸ್ಟ್ 3 ರಂದು ಸೋಮವಾರ ರಕ್ಷಾ ಬಂಧನ ಇರುವುದರಿಂದ ನರೇಂದ್ರ ಮೋದಿಯವರಿಗೆ ಅನೇಕ ಮಂದಿ ಸೋದರಿಯರು ರಾಖಿ ಕಟ್ಟುತ್ತಾರೆ, ಆದರೆ ಇವರು ಪಾಕಿಸ್ತಾನ ಮೂಲದ ಮುಸ್ಲಿಂ ಮಹಿಳೆ ಖಮರ್ ಮೊಹ್ಸಿನ್ ಶೇಖ್. ಕೊವಿಡ್-19 ಸಮಯದಲ್ಲಿ ದೆಹಲಿಗೆ ಖುದ್ದಾಗಿ ಬಂದು ರಾಖಿ ಕಟ್ಟಲು ಸಾಧ್ಯವಿಲ್ಲ ಎಂದು ಈ ಮಹಿಳೆ ಪೋಸ್ಟ್ ಮೂಲಕ ರಾಖಿಯನ್ನು ಮೋದಿಯವರಿಗೆ ಕಳುಹಿಸಿದ್ದಾರೆ.
ಪಾಕಿಸ್ತಾನ ಮೂಲದವರಾದ ಶೇಖ್ ಮದುವೆಯಾದ ನಂತರ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಮೋದಿಯವರ ಜೊತೆ ಅವರು ಈ ಬಾರಿ 25ನೇ ವರ್ಷದ ರಾಖಿ ಹಬ್ಬ ಆಚರಿಸುತ್ತಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಶೇಖ್, ಮೋದಿಯವರನ್ನು ನಾನು 30-35 ವರ್ಷಗಳಿಂದ ಗೊತ್ತಿದೆ. ನಾನು ಅವರನ್ನು ಮೊದಲ ಬಾರಿಗೆ ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ನಾನು ಕರಾಚಿಯಿಂದ ಬಂದವಳು, ಮದುವೆಯಾಗಿ ಇಲ್ಲಿ ಬಂದು ನೆಲೆಸಿದ್ದೇನೆ ಎಂದು ಪರಿಚಯ ಮಾಡಿಕೊಂಡೆ. ಆಗಿನಿಂದ ನನ್ನನ್ನು ಅವರು ಬೆಹೆನ್(ಸೋದರಿ) ಎಂದು ಕರೆಯುತ್ತಾರೆ.
ನನಗೆ ಸ್ವಂತ ಸೋದರ ಇಲ್ಲ. ಎರಡು ಮೂರು ವರ್ಷ ಕಳೆದ ನಂತರ ಮತ್ತೆ ಅವರನ್ನು ನಾನು ದೆಹಲಿಯಲ್ಲಿ ರಕ್ಷಾ ಬಂಧನ ಸಮಯದಲ್ಲಿ ಭೇಟಿ ಮಾಡಿದೆ, ಆಗ ಅವರ ಕೈಗೆ ರಾಖಿ ಕಟ್ಟಿದೆ ಎಂದಿದ್ದಾರೆ.
ಕೊರೊನಾ ಇರುವ ಕಾರಣ ಈ ಬಾರಿ ದೆಹಲಿಗೆ ಹೋಗಲು ಸಾಧ್ಯವಾಗದೆ ಪೋಸ್ಟ್ ಮೂಲಕ ರಾಖಿ ಕಳುಹಿಸಿದ್ದೇನೆ, ರಾಖಿ ಮತ್ತು ನಾನು ಕಳುಹಿಸಿರುವ ಪುಸ್ತಕ ಪ್ರಧಾನಿಗೆ ತಲುಪಿದೆ ಎಂದು ತಿಳಿದುಬಂದಿದೆ ಎಂದರು.
ಒಂದು ಬಾರಿ ರಕ್ಷಾ ಬಂಧನ ಸಮಯದಲ್ಲಿ ನೀವು ಗುಜರಾತ್ ಗೆ ಬರಬೇಕು, ನಮಗೆ ಮುಖ್ಯಮಂತ್ರಿಯಾಗಬೇಕು ಎಂದು ದೇವರಲ್ಲಿ ಬೇಡಿಕೊಳ್ಳುತ್ತೇನೆ ಎಂದು ಹೇಳಿದ್ದೆ. ಆಗ ಅವರು ನಕ್ಕರು, ನಂತರ ಗುಜರಾತ್ ಮುಖ್ಯಮಂತ್ರಿ ಕೂಡ ಆದರು. ಮತ್ತೊಂದು ರಕ್ಷಾಬಂಧನ ದಿನ ನನ್ನ ಪ್ರಾರ್ಥನೆಯನ್ನು ದೇವರು ಕೇಳುತ್ತಾರೆ ಎಂದೆ, ನಂತರ ಅವರು ಪ್ರಧಾನಿ ಕೂಡ ಆದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications