ಇನ್ಸ್ ಪೆಕ್ಟರ್ ರಾಜ್ ಬಲಿ ಹಾಕಲು ಮೋದಿ ಯೋಜನೆ
ನವದೆಹಲಿ, ಅ.15: ಬಹಳ ವರ್ಷಗಳಿಂದ ಕೈಗಾರಿಕಾ ವಲಯವನ್ನು ಕಾಡುತ್ತಿರುವ ಶ್ರಮಿಕರ ಮೇಲಿನ ದರ್ಬಾರು, ದಬ್ಬಾಳಿಕೆಯನ್ನು ಹತ್ತಿಕ್ಕಲು ಕಾರ್ಮಿಕ ಇನ್ಸ್ ಪೆಕ್ಟರ್ ಗಳ ಗೂಂಡಾಗಿರಿಗೆ ತಕ್ಕ ಉತ್ತರ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆಗೆ ಗುರುವಾರ ಚಾಲನೆ ನೀಡಿದ್ದಾರೆ.
ಇತ್ತೀಚೆಗೆ ಚಾಲನೆ ನೀಡಲಾದ ಮೇಕ್ ಇನ್ ಇಂಡಿಯಾ ಯೋಜನೆ ಸಾಕಾರಗೊಳ್ಳಲು ಶ್ರಮಿಕ ವರ್ಗಕ್ಕೆ ನೆರವಾಗಲಿರುವ ಶ್ರಮೇವ ಜಯತೆ ಕಾರ್ಮಿಕರ ಕಲ್ಯಾಣ ಯೋಜನೆ ಬಹುಮುಖ್ಯ ಎಂದು ಮೋದಿ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಹೇಳಿದರು.
Inspector Raj...we heard this since our childhood & we thought it is for policemen only but then we realised its a lot more:PM @narendramodi
— PMO India (@PMOIndia) October 16, 2014 ಉದ್ಯೋಗಾವಕಾಶಗಳನ್ನು ಹೆಚ್ಚಿಸುವಂಥ ಹಲವು ಕಾರ್ಯಕ್ಕೆ ಶ್ರಮ ಸುವಿಧಾ (ಶ್ರಮೇವ ಜಯತೆ) ಯೋಜನೆಗೆ ನಾಂದಿ ಹಾಡಲಾಯಿತು. ದೇಶದಲ್ಲಿ ಅಭಿವೃದ್ಧಿಯ ಬದಲಾವಣೆ ತರಬೇಕಾದರೆ ಸತ್ಯಮೇವ ಜಯತೇ ಜೊತೆಯಲ್ಲೇ ಶ್ರಮಮೇವ ಜಯತೇ ಕೂಡಾ ಅತಿ ಮುಖ್ಯ ಎಂದರು. ಜನರ ಮನಸ್ಥಿತಿಯೂ ಬದಲಾಗಬೇಕು. ಅದರಂತೆಯೇ ಶ್ರಮಿಕರಿಗೂ ಬೆಲೆ ಸಿಗಬೇಕು ಎಂದು ಮೋದಿ ಹೇಳಿದರು. [ಶ್ರಮವೇ ಜಯತೆ ಯೋಜನೆ ವಿಶೇಷವೇನು?]

ಮೇಕ್ ಇನ್ ಇಂಡಿಯಾ ಯಶಸ್ಸಿಗೆ ನಾವು ಈಗಿನಿಂದಲೇ ಪ್ರಯಾಸ ಪಡಬೇಕು. ಇದರ ಮೂಲಕ ವ್ಯವಹಾರಿಕವಾಗಿ ನಾವು ವಿಶ್ವದಲ್ಲೇ ಮುಂದೆ ಬರಲು ಸಾಧ್ಯ ಎಂದು ಹೇಳಿದರು. ಬಹಳ ವರ್ಷಗಳಿಂದ ಕೈಗಾರಿಕಾ ವಲಯವನ್ನು ಕಾಡುತ್ತಿರುವ ಶ್ರಮಿಕರ ಮೇಲಿನ ದರ್ಬಾರು, ದಬ್ಬಾಳಿಕೆ ಕಾರ್ಯವನ್ನು ಧಮನಗೊಳಿಸಲು ಈ ಹೊಸ ಯೋಜನೆ ನೆರವಾಗಲಿದೆ. ಕಾರ್ಮಿಕ ಸ್ನೇಹಿ ವಾತಾವರಣ ಸೃಷ್ಟಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
We have to see labour issues from the eyes of the Shramik. We can't see it from the eyes of the industrialists: PM @narendramodi
— PMO India (@PMOIndia) October 16, 2014 ಇ ಕಾಮರ್ಸ್, ಆರ್ಥಿಕ ಸುಧಾರಣೆ ಆಡಳಿತ, ಅಧಿಕಾರದಲ್ಲಿ ಪಾರದರ್ಶಕತೆ ಎಲ್ಲವೂ ಇನ್ಸ್ ಪೆಕ್ಟರ್ ರಾಜ್ ಎಂಬ ಪದವನ್ನು ತೊಲಗಿಸಲಿದೆ. ಚಿಕ್ಕಂದಿನಿಂದ ಕೇಳಿ ಬರುತ್ತಿದ್ದ ಈ ಪದಕ್ಕೆ ಮುಕ್ತಿಗಾಣಿಸಲಾಗುತ್ತದೆ. ಕೈಗಾರಿಕೆಗಳಲ್ಲಿ ದಾಖಲಾತಿ ಇಲ್ಲದೆ ದುಡಿಯುವ ಕಾರ್ಮಿಕರು ಮತ್ತು ಖಾಯಂ ಉದ್ಯೋಗಿಗಳ ಮಾಹಿತಿಯನ್ನು ಕಟ್ಟುನಿಟ್ಟಾಗಿ ದಾಖಲಿಸಲಾಗುತ್ತದೆ ಮತ್ತು ಪ್ರತಿ ತಿಂಗಳು ಅದನ್ನು ಪರಾಮರ್ಶಿಸಿ ಬದಲಾವಣೆಯಾಗಿದ್ದಲ್ಲಿ ಕಾರ್ಮಿಕ ಇಲಾಖೆಗೆ ಮಾಹಿತಿ ನೀಡುವಂತಹ ವ್ಯವಸ್ಥೆಯೂ ಇದರಲ್ಲಿದೆ ಎಂದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications