ನೇತಾಜಿ ಸುಭಾಷ್ ಚಂದ್ರ ಬೋಸ್ Hologram ಪ್ರತಿಮೆ ಅನಾವರಣಗೊಳಿಸಿ ಪ್ರಧಾನಿ ಮೋದಿ
ನವದೆಹಲಿ, ಜನವರಿ 23: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನದ ಹಿನ್ನೆಲೆ ಅವರ ಸ್ಮರಣಾರ್ಥ ಇಂಡಿಯಾ ಗೇಟ್ನಲ್ಲಿ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣ ಮಾಡಿದರು. ಇನ್ನು ಈ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ 2019, 2020, 2021 ಮತ್ತು 2022 ರ ಸುಭಾಸ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರಗಳನ್ನು ಪ್ರದಾನ ಮಾಡಿದರು.
ಇನ್ನು ಈ ಬಗ್ಗೆ ಈ ಹಿಂದೆ ಮಾಹಿತಿ ನೀಡಿದ್ದ ಪ್ರಧಾನಿ ಮೋದಿ, "ಇಡೀ ರಾಷ್ಟ್ರವು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನವನ್ನು ಆಚರಿಸುತ್ತಿರುವ ಸಮಯದಲ್ಲಿ, ಗ್ರಾನೈಟ್ನಿಂದ ಮಾಡಿದ ಅವರ ಭವ್ಯವಾದ ಪ್ರತಿಮೆಯನ್ನು ಇಂಡಿಯಾ ಗೇಟ್ನಲ್ಲಿ ಸ್ಥಾಪಿಸಲಾಗುವುದು ಎಂದು ಹಂಚಿಕೊಳ್ಳಲು ನನಗೆ ಸಂತೋಷವಾಗಿದೆ. ಇದು ಇದರ ಸಂಕೇತವಾಗಿದೆ. ಅವರಿಗೆ ಭಾರತ ಋಣಿಯಾಗಿದೆ. ನೇತಾಜಿ ಬೋಸ್ ಅವರ ಭವ್ಯ ಪ್ರತಿಮೆ ಪೂರ್ಣಗೊಳ್ಳುವವರೆಗೆ, ಅವರ ಹೊಲೊಗ್ರಾಮ್ ಪ್ರತಿಮೆಯು ಅದೇ ಸ್ಥಳದಲ್ಲಿ ಇರುತ್ತದೆ," ಎಂದು ಮಾಹಿತಿ ನೀಡಿದ್ದರು.
ಭಾರತ ಸರ್ಕಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿಯನ್ನು ವರ್ಷಾಪೂರ್ತಿ ಆಚರಿಸುತ್ತಿದೆ. 2021ರ ಜನವರಿ 23ರಂದು ಕೋಲ್ಕತ್ತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ಜಯಂತಿಯ ಉದ್ಘಾಟನಾ ಸಮಾರಂಭ ನಡೆದಿದೆ.

"ಶೀಘ್ರ ಹೊಲೊಗ್ರಾಮ್ ಪ್ರತಿಮೆ ಭವ್ಯವಾದ ಗ್ರಾನೈಟ್ ಪ್ರತಿಮೆಯಾಗಿ ಬದಲಾವಣೆ"
ಇನ್ನು ಇಂಡಿಯಾ ಗೇಟ್ನಲ್ಲಿ ಹೊಲೊಗ್ರಾಮ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣ ಮಾಡಿದ ಬಳಿಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ, "ನೇತಾಜಿ ಸುಭಾಷ್ ಚಂದ್ರ ಬೋಸ್ ಬ್ರಿಟಿಷರ ಮುಂದೆ ತಲೆಬಾಗಲು ನಿರಾಕರಿಸಿದರು. ಶೀಘ್ರದಲ್ಲೇ ಹೊಲೊಗ್ರಾಮ್ ಪ್ರತಿಮೆಯನ್ನು ಭವ್ಯವಾದ ಗ್ರಾನೈಟ್ ಪ್ರತಿಮೆಯಾಗಿ ಬದಲಾವಣೆ ಮಾಡಲಾಗುವುದು. ನೇತಾಜಿ ಅವರ ಪ್ರತಿಮೆಯು ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ," ಎಂದು ತಿಳಿಸಿದರು.
ನಾವು ಸುಧಾರಣೆಗೆ ಒತ್ತು ನೀಡುವುದರ ಜೊತೆಗೆ ಪರಿಹಾರ, ರಕ್ಷಣೆ ಮತ್ತು ಪುನರ್ವಸತಿಗೆ ಒತ್ತು ನೀಡಿದ್ದೇವೆ. ನಾವು ಎನ್ಡಿಆರ್ಎಫ್ ಅನ್ನು ಆಧುನೀಕರಿಸಿದ್ದೇವೆ. ಅದನ್ನು ದೇಶಾದ್ಯಂತ ವಿಸ್ತರಿಸಿದ್ದೇವೆ. ಯೋಜನೆ ಮತ್ತು ನಿರ್ವಹಣೆಗಾಗಿ ಬಾಹ್ಯಾಕಾಶ ತಂತ್ರಜ್ಞಾನ ಮತ್ತು ಇತರ ಅತ್ಯುತ್ತಮ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲಾಗಿದೆ," ಎಂದಿದ್ದಾರೆ.
"ನೇತಾಜಿ ಹೇಳುತ್ತಿದ್ದರು, 'ಸ್ವತಂತ್ರ ಭಾರತದ ಕನಸಿನಲ್ಲಿ ಎಂದಿಗೂ ನಂಬಿಕೆ ಕಳೆದುಕೊಳ್ಳಬೇಡಿ, ಭಾರತವನ್ನು ಅಲುಗಾಡಿಸುವ ಶಕ್ತಿ ಜಗತ್ತಿನಲ್ಲಿ ಇಲ್ಲ' ಎಂದು. ಇಂದು ನಾವು ಸ್ವತಂತ್ರ ಭಾರತದ ಕನಸುಗಳನ್ನು ನನಸಾಗಿಸುವ ಗುರಿಯನ್ನು ಹೊಂದಿದ್ದೇವೆ. ಸ್ವಾತಂತ್ರ್ಯದ 100 ನೇ ವರ್ಷ, 2047 ರ ಮೊದಲು ನವ ಭಾರತವನ್ನು ನಿರ್ಮಿಸುವ ಗುರಿಯನ್ನು ನಾವು ಹೊಂದಿದ್ದೇವೆ," ಎಂದು ಹೇಳಿದರು.
"ಸ್ವಾತಂತ್ರ್ಯದ ನಂತರ ದೇಶದ ಸಂಸ್ಕೃತಿಯ ಜೊತೆಗೆ ಅನೇಕ ಮಹಾನ್ ವ್ಯಕ್ತಿಗಳ ಕೊಡುಗೆಯನ್ನು ಅಳಿಸುವ ಕೆಲಸ ನಡೆದಿರುವುದು ವಿಷಾದನೀಯ. ಸ್ವಾತಂತ್ರ್ಯ ಹೋರಾಟವು ಲಕ್ಷಾಂತರ ದೇಶವಾಸಿಗಳ ತಪಸ್ಸನ್ನು ಒಳಗೊಂಡಿತ್ತು. ಆದರೆ ಅವರ ಇತಿಹಾಸವನ್ನು ಸೀಮಿತಗೊಳಿಸುವ ಪ್ರಯತ್ನಗಳನ್ನು ಮಾಡಲಾಗಿದೆ," ಎಂದು ಕೂಡಾ ಪ್ರಧಾನಿ ಮೋದಿ ಆರೋಪ ಮಾಡಿದರು.
ಹೊಲೊಗ್ರಾಮ್ ಪ್ರತಿಮೆ ಹೇಗಿದೆ?
ಈ ಹೊಲೊಗ್ರಾಮ್ ಪ್ರತಿಮೆಗೆ 4ಕೆ ಪ್ರೊಜೆಕ್ಟರ್ ಬಳಸಿ, 30,000 ದಷ್ಟು ಬೆಳಕಿನ ತೀಕ್ಷ್ಣತೆಯ ಪ್ರಮಾಣ ಇದ್ದು, ಶೇ 90ರಷ್ಟು ಪಾರದರ್ಶಕ ವಾಗಿರುವಂತಹ ಹಾಲೊಗ್ರಾಫಿಕ್ ಸ್ಕ್ರೀನ್ ಮೂಲಕ ಈ ಪ್ರತಿಮೆಯನ್ನು ಮೂಡಿಸಲಾಗುತ್ತದೆ. ನೋಡುಗರಿಗೆ ಈ ಪರದೆ ಕಾಣದಂತೆ ಅಳವಡಿಸಲಾಗಿರುತ್ತದೆ. 3ಡಿ ಚಿತ್ರವು ಹಾಲೋಗ್ರಾಮ್ನ ಪ್ರತಿಮೆ ಮೂಡುವಂತೆ ವಿನ್ಯಾಸಗೊಳಿಸಲಾಗುತ್ತದೆ. ಈ ಪ್ರತಿಮೆಯ ಎತ್ತರವು 28 ಅಡಿ, ಅಗಲ ಆರು ಅಡಿ ಆಗಿರುತ್ತದೆ. (ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications