ಮನಮೋಹನ್ ಸಿಂಗ್ ಆರೋಗ್ಯ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ
ನವದೆಹಲಿ, ಅಕ್ಟೋಬರ್ 14: ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.13ರ ಸಂಜೆ ಮತ್ತೆ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದೆ.
ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸೋಮವಾರವೂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಬಳಿಕ ಚೇತರಿಸಿಕೊಂಡಿದ್ದರು.
I pray for the good health and speedy recovery of Dr. Manmohan Singh Ji.
— Narendra Modi (@narendramodi) October 14, 2021
ಜ್ವರ ಕಾಣಿಸಿಕೊಂಡ ಬಳಿಕ ಮನ್ಮೋಹನ್ ಸಿಂಗ್ ಅವವರು ದ್ರವ ರೂಪದ ಆಹಾರವನ್ನು ಮಾತ್ರ ತೆಗೆದುಕೊಳ್ಳುತ್ತಿದ್ದರು. ಇದರಿಂದ ಆಯಾಸಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅವರು ಈ ಹಿಂದೆ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರು ಏಮ್ಸ್ ಆಸ್ಪತ್ರೆಯ ಟ್ರೌಮ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದರು.

ಇನ್ನು ಮನ್ಮೋಹನ್ ಸಿಂಗ್ ಆರೋಗ್ಯದ ಬಗ್ಗೆ ಎಐಸಿಸಿ ಕಾರ್ಯದರ್ಶಿ ಪ್ರಣವ್ ಝಾ ಪ್ರತಿಕ್ರಿಯಿಸಿದ್ದು, ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ಕೆಲವು ವದಂತಿಗಳು ಕೇಳಿ ಬರುತ್ತಿವೆ. ಅವರ ಆರೋಗ್ಯ ಸ್ಥಿರವಾಗಿವೆ. ಯಾವುದಾದರೂ ಮಾಹಿತಿ ಇದ್ದರೆ ನಾವು ಹಂಚಿಕೊಳ್ಳುತ್ತೇವೆ. ಮಾಧ್ಯಮದ ಸ್ನೇಹಿತರ ಕಾಳಜಿಗೆ ಧನ್ಯವಾದಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ ಅವರು ಆಸ್ಪತ್ರೆಗೆ ತೆರಳಿ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. 89 ವರ್ಷದ ಮನಮೋಹನ್ ಸಿಂಗ್ ಅವರು ಕಳೆದ ಏಪ್ರಿಲ್ 19ರಂದು ಕೋವಿಡ್ ಪಾಸಿಟಿವ್ ಬಂದಿದ್ದು ಸೋಂಕಿನಿಂದ ಯಶಸ್ವಿಯಾಗಿ ಚೇತರಿಸಿಕೊಂಡು ಏಪ್ರಿಲ್ 29ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ 89 ವರ್ಷದ ಮನಮೋಹನ್ ಸಿಂಗ್ ಅವರು ಇತ್ತೀಚೆಗೆ ಯಾವುದೇ ರಾಜಕೀಯ ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳದೆ ತಮ್ಮ ಆರೋಗ್ಯದ ಕಡೆ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನ ಮೋಹನ್ ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡರೂ ಕೂಡ ಒಂದೊಮ್ಮೆಗೆ ಜ್ವರ ಕಡಿಮೆಯಾಗಿ ಮತ್ತೆ ಕಾಣಿಸಿಕೊಂಡಿದೆ. ಜ್ವರ ಕಾಣಿಸಿಕೊಂಡ ಬಳಿಕ ಅತಿಯಾದ ಸುಸ್ತು ಉಂಟಾದ ಕಾರಣ ಅವರನ್ನು ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿಲ್ಲಿಯ ಏಮ್ಸ್ ಆಸ್ಪತ್ರೆಗೆ ಅನಾರೋಗ್ಯ ಹಿನ್ನೆಲೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಏಳು ಗಂಟೆಯ ವೇಳೆ ಬಂದಿರುವ ವರದಿಯ ಪ್ರಕಾರ ಸಿಂಗ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಏಮ್ಸ್ ಆಸ್ಪತ್ರೆಯ ವೈದ್ಯರೇ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಸದ್ಯ ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications