65 ಗಂಟೆಗಳಲ್ಲಿ 25 ಮೀಟಿಂಗ್, 8 ರಾಷ್ಟ್ರ ನಾಯಕರ ಜೊತೆ ಮೋದಿ ಮಾತುಕತೆ
ನವದೆಹಲಿ, ಮೇ 2 : ಪ್ರಧಾನಿ ನರೇಂದ್ರ ಮೋದಿ ಈ ವರ್ಷ ತಮ್ಮ ಮೊದಲ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ಗೆ ಭೇಟಿ ನೀಡಲಿದ್ದಾರೆ. ಈ ಭೇಟಿ ಸಮಯದಲ್ಲಿ ಸುಮಾರು 65 ಗಂಟೆಗಳ ಕಾಲ 25 ಸಭೆಗಳಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.
ಪ್ರಧಾನಿ ಮೋದಿ 7 ದೇಶಗಳ ಎಂಟು ವಿಶ್ವ ನಾಯಕರೊಂದಿಗೆ ದ್ವಿಪಕ್ಷಿಯ ಮತ್ತು ಬಹುಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಜೊತೆಗೆ 50 ಜಾಗತಿಕ ವ್ಯಾಪಾರಸ್ಥರೊಂದಿಗೆ ಸಂವಾದ ಕೂಡ ನಡೆಸಲಿದ್ದಾರೆ. ಬಳಿಕ ಭಾರತೀಯ ಸಮುದಾಯದ ಸಾವಿರಾರು ಸದಸ್ಯರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಪ್ರಧಾನಿ ಮೋದಿ ಬರ್ಲಿನ್ ತಲುಪಿದ್ದು, ಮಧ್ಯಾಹ್ನ ಜರ್ಮನಿ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 3.30 ಕ್ಕೆ ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ ಅವರೊಂದಿಗೆ 6 ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಳೆದ ವರ್ಷ ಡಿಸೆಂಬರ್ನಲ್ಲಿ ತಮ್ಮ ಪೂರ್ವಾಧಿಕಾರಿ ಏಂಜೆಲಾ ಮಾರ್ಕೆಲ್ರಿಂದ ಉನ್ನತ ಕಚೇರಿಯ ಅಧಿಕಾರ ವಹಿಸಿಕೊಂಡ ಚಾನ್ಸೆಲರ್ ಸ್ಕೋಲ್ಜ್ ಅವರೊಂದಿಗೆ ಇದು ಮೋದಿಯವವರ ಮೊದಲ ಸಭೆಯಾಗಿದೆ.

2021 ರಲ್ಲಿ ಭಾರತ ಮತ್ತು ಜರ್ಮನಿ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70 ವರ್ಷಗಳ ಸ್ಮರಣಾರ್ಥವಾಗಿ ಮತ್ತು 2000 ರಿಂದ ಕಾರ್ಯತಂತ್ರದ ಪಾಲುದಾರರಾಗಿದ್ದಾರೆ. ಈ ಭೇಟಿಯು ವಿಶಾಲ ವ್ಯಾಪ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಮತ್ತು ತೀವ್ರಗೊಳಿಸಲು ಮತ್ತು ಪ್ರಾದೇಶಿಕ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎರಡು ಸರ್ಕಾರಗಳಿಗೆ ಉತ್ತಮ ಅವಕಾಶವಾಗಿದೆ.
ನಾಳೆ ಡೆನ್ಮಾರ್ಕ್ಗೆ ಪ್ರಯಾಣಿಸುವ ಪ್ರಧಾನಿ ಮೋದಿ ಡೆನ್ಮಾರ್ಕ್ನ ಪ್ರಧಾನ ಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರ ಜೊತೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಭೇಟಿ ವೇಳೆ ಉಭಯ ದೇಶದ ನಾಯಕರು ದ್ವಿಪಕ್ಷೀಯ ಅಂಶಗಳ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಭಾರತ-ಡೆನ್ಮಾರ್ಕ್ ವ್ಯಾಪಾರ ವೇದಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮತ್ತು ಭಾರತೀಯ ವಲಸಿಗರನ್ನ ಉದ್ದೇಶಿಸಿ ಮಾತನಾಡಲಿದ್ದಾರೆ.

ಇದೇ ವೇಳೆ 2ನೇ ಭಾರತ ನಾರ್ಡಿಕ್ ಶೃಂಗಸಭೆಯ ಸಮಯದಲ್ಲಿ ಪ್ರಧಾನ ಮಂತ್ರಿ ಇತರ ನಾರ್ಡಿಕ್ ನಾಯಕರೊಂದಿಗೆ ಸಂವಾದ ನಡೆಸಲಿದ್ದಾರೆ. ಐಸ್ಲ್ಯಾಂಡ್ ಪ್ರಧಾನಿ ಕ್ಯಾಟ್ರಿನ್ ಜಾಕೋಬ್ಸ್ಡಾಟ್ಟಿರ್, ನಾರ್ವೆಯ ಪ್ರಧಾನಿ ಜೊನಾಸ್ ಗಹರ್ ಸ್ಟೋರ್, ಸ್ಪೀಡನ್ನ ಪ್ರಧಾನಿ ಮ್ಯಾಗ್ಡಲೀನಾ ಅಂಡರ್ಸನ್ ಮತ್ತು ಫಿನ್ಲ್ಯಾಡ್ನ ಪ್ರಧಾನಿ ಸನ್ನಾಮರಿನ್ ಜೊತೆ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆಯಲ್ಲಿ ಕೊರೊನಾ ನಂತರದ ಆರ್ಥಿಕ ಚೇತರಿಕೆ, ಹವಮಾನ ಬದಲಾವಣೆ, ನಾವಿನ್ಯತೆ ಮತ್ತು ತಂತ್ರಜ್ಞಾನ ನವೀಕರಿಸಬಹುದಾದ ಇಂಧನ, ಜಾಗತಿಕ ಭದ್ರತೆ ಕುರಿತು ಚರ್ಚೆ ನಡೆಸಲಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications