ಪ್ರಧಾನಿ ಮೋದಿ ಇಂದಿನಿಂದ 3 ದಿನಗಳ ಕಾಲ ವಿದೇಶಿ ಪ್ರವಾಸ
ನವದೆಹಲಿ, ಮೇ 2 : ಪ್ರಧಾನಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ 3 ವಿದೇಶಗಳ(ಜರ್ಮನಿ, ಫ್ರಾನ್ಸ್, ಡೆನ್ಮಾರ್ಕ್) ಪ್ರವಾಸ ಹೊರಟಿದ್ದಾರೆ. ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ ಅವರ ಆಮಂತ್ರಣದ ಮೇರೆಗೆ ಮೋದಿ ಮೇ 2 ರಂದು ಬರ್ಲಿನ್ಗೆ ಭೇಟಿ ನೀಡಲಿದ್ದಾರೆ. ಮೊದಲಿಗೆ 6 ನೇ ಭಾರತ-ಜರ್ಮನಿ ಪಾಲುದಾರಿಕೆ ಸಹಕಾರ ಸಮಾಲೋಚನೆಯಲ್ಲಿ ಪ್ರಧಾನಿ ಮೋದಿ ಸಹ ಅಧ್ಯಕ್ಷತೆ ವಹಿಸಲಿದ್ದಾರೆ.
ಪ್ರವಾಸಕ್ಕೂ ಮುನ್ನ ಮಾತನಾಡಿರುವ ಪ್ರಧಾನಿ, "ಜಗತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ವಿದೇಶಿ ಪ್ರವಾಸವನ್ನು ಕೈಗೊಂಡಿದ್ದೇನೆ. ಶಾಂತಿ ಸಮೃದ್ದಿಗಾಗಿ ಭಾರತದ ಅನ್ವೇಷಣೆಯಲ್ಲಿ ಪ್ರಮುಖ ಪಾಲುದಾರರಾಗಿರುವ ಯುರೋಪಿನ ನಾಯಕರೊಂದೊಗಿನ ಸಹಕಾರ ಸಂಬಂಧವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾತುಕತೆಗಳು ನಡೆಸಲಿದ್ದೇನೆ," ಎಂದು ತಿಳಿಸಿದ್ದಾರೆ.
ಅಲ್ಲದೆ ತಮ್ಮ ಫ್ರಾನ್ಸ್ ಭೇಟಿಯು ಸಹ ಭಾರತ-ಫ್ರಾನ್ಸ್ ವ್ಯೂಹಾತ್ಮಕ ಪಾಲುದಾರಿಕೆಯ ಮುಂದಿನ ಹಂತದ ಧ್ವನಿಯನ್ನು ಹೊಂದಿಸಲು ಅವಕಾಶವನ್ನು ಒದಗಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಮೇ 3 ಮತ್ತು 4 ರಂದು ಡೆನ್ಮಾರ್ಕ್ ಕೋಪನ್ಹೆಗನ್ ಭೇಟಿ ನೀಡಲಿದ್ದು, ಡ್ಯಾನಿಶ್ ಪ್ರಧಾನಿ ಮಾಟ್ ಫ್ರೆಡ್ರಿಕ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಬಳಿಕ ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಎಮ್ಯಾನುಯೆಲ್ ಮಾಕ್ರನ್ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಎರಡು ದೇಶಗಳ ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಮೌಲ್ಯಮಾಪನಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಇನ್ನು ಪ್ರಧಾನಿ ಮೋದಿ ಪ್ರವಾಸದ ಕುರಿತು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಪ್ರತಿಕ್ರಿಯಿಸಿದ್ದು, 'ಹಿಂಸಾಚಾರನ್ನು ನಿಲ್ಲಿಸುವುದು ಮತ್ತು ಮಾತುಕತೆ ಹಾಗೂ ರಾಜತಾಂತ್ರಿಕತೆಗೆ ಮರುಳುವುದು ರಷ್ಯಾದ ಕ್ರಮಗಳನ್ನು ಬಲವಾಗಿ ಖಂಡಿಸಲು ಭಾರತ ಮುಂದಾಗಿಲ್ಲ. ಆದರೂ ಉಕ್ರೇನ್ನೊಂದಿಗಿನ ಸಂಬಂಧಗಳು ಹದಗೆಟ್ಟಿದ್ದರೂ ಸಹ ಭಾರತದ ಸ್ಥಾನದ ಬಗ್ಗೆ ಆಳವಾದ ಮೆಚ್ಚುಗೆ ಇದೆ,'' ಎಂದು ಕ್ವಾತ್ರಾ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಈ ಪ್ರವಾಸದ ಪ್ರಮುಖ ಉದ್ದೇಶ ಇಂಧನ ಭದ್ರತೆಯಾಗಿದೆ. ಉಕ್ರೇನ್ ರಷ್ಯಾ ಯುದ್ಧದಿಂದಾಗಿ ಜಗತ್ತಿನಲ್ಲಿ ಶಕ್ತಿ ಸಂಪನ್ಮೂಲಗಳ ಕೊರತೆ ಹೆಚ್ಚಾಗಿದ್ದು, ಇದನ್ನು ಬಗೆಹರಿಸಲು ಪ್ರಧಾನಿ ಮೋದಿ ವಿದೇಶಿ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಒದರ ಜೊತೆಗೆ ವಿದೇಶಗಳೊಂದಿಗಿನ ದ್ವಿಪಕ್ಷಿಯ ಸಂಬಂಧ ಹಾಗೂ ಕೊರೊನಾ ನಂತರದ ಆರ್ಥಿಕತೆ, ಜಾಗತಿಕ ಭದ್ರತೆ ಮುಂತಾದ ಮಹತ್ವಪೂರ್ಣ ವಿಚಾರಗಳ ಕುರಿತು ಚರ್ಚಿಸುವ ಉದ್ದೇಶ ಹೊಂದಿದ್ದಾರೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications