ಕೊಟ್ಟ ಮಾತಿನಂತೆ ನಡೆದುಕೊಂಡ ಮೋದಿ: ಪಿವಿ ಸಿಂಧು ಜೊತೆ ಐಸ್ಕ್ರೀಂ ಸವಿದ ಪ್ರಧಾನಿ
ನವದೆಹಲಿ, ಆಗಸ್ಟ್ 16: ಟೋಕಿಯೋ ಒಲಿಂಪಿಕ್ಸ್ 2020 ಕ್ರೀಡಾಕೂಟದಿಂದ ವಾಪಸ್ ಬಂದ ಬಳಿಕ ನಿಮ್ಮ ಜೊತೆ ಐಸ್ ಕ್ರೀಂ ತಿನ್ನುವುದಾಗಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧುಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತು ಕೊಟ್ಟಿದ್ದರು.
ಟೋಕಿಯೋ ಒಲಿಂಪಿಕ್ಸ್ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಿ.ವಿ. ಸಿಂಧು ಕಂಚಿನ ಪದಕ ಗೆದ್ದು ಭಾರತಕ್ಕೆ ಬಂದಿದ್ದರು. ಈ ಮೊದಲು ಮಾತು ಕೊಟ್ಟಂತೆ ಪಿ.ವಿ. ಸಿಂಧು ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಐಸ್ ಕ್ರೀಂ ಸೇವಿಸಿದ್ದಾರೆ.
75ನೇ ಸ್ವಾತಂತ್ರ್ಯ ದಿನಾಚರಣೆ (ಭಾನುವಾರ)ಯಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ನಿವಾಸದಲ್ಲಿ ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳಿಗೆ ಔತಣಕೂಟ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಪಿ.ವಿ. ಸಿಂಧು ಜೊತೆಗೆ ಐಸ್ಕ್ರೀಂ ಸವೆದಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರೋತ್ಸಾಹ ತುಂಬಿದ್ದರು
ಒಲಿಂಪಿಕ್ಸ್ ಆರಂಭಕ್ಕೂ ಮೊದಲು ಕ್ರೀಡಾಪಟುಗಳನ್ನು ಹುರಿದುಂಬಿಸಲು ಟೋಕಿಯೋಗೆ ತೆರಳುವ ಮೊದಲು ಪ್ರಧಾನಿ ನರೇಂದ್ರ ಮೋದಿ ಭಾರತದ ಕ್ರೀಡಾಪಟುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಪ್ರೋತ್ಸಾಹ ತುಂಬಿದ್ದರು. ಆಗ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಬಳಿ ಅವರ ಡಯೆಟ್ ಬಗ್ಗೆ ಕೇಳಿದ್ದರು.
ಈ ವೇಳೆ ತನ್ನ ಡಯಟ್ ಬಗ್ಗೆ ಮಾಹಿತಿ ನೀಡಿದ್ದ ಪಿ.ವಿ. ಸಿಂಧು, ಕಠಿಣ ಅಭ್ಯಾಸ, ಡಯಟ್ ಕಾರಣ ನಾನು ನನ್ನ ಇಷ್ಟದ ಐಸ್ಕ್ರೀಂ ತಿನ್ನುತ್ತಿಲ್ಲ. ಐಸ್ಕ್ರೀಂ ತಿನ್ನುವುದನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದರು. ಅದನ್ನು ಕೇಳಿದ್ದ ಪ್ರಧಾನಿ ನರೇಂದ್ರ ಮೋದಿ, ಒಲಿಂಪಿಕ್ಸ್ನಿಂದ ಮರಳಿದ ಬಳಿಕ ನಾವಿಬ್ಬರೂ ಒಟ್ಟಿಗೆ ಕೂತು ಐಸ್ಕ್ರೀಂ ತಿನ್ನೋಣ ಎಂದಿದ್ದರು.
ನೀರಜ್ ಚೋಪ್ರಾ ಜೊತೆ ವಿಶೇಷ ಮಾತುಕತೆ
ಆ ಮಾತನ್ನು ಉಳಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ನಿವಾಸದಲ್ಲಿ ಪಿ.ವಿ. ಸಿಂಧು ಜೊತೆಗೆ ಐಸ್ಕ್ರೀಂ ತಿಂದಿದ್ದಾರೆ. ದಾಖಲೆಯ ಸತತ ಎರಡು ಬಾರಿ ಒಲಿಂಪಿಕ್ಸ್ ಪದಕ ಪಡೆದಿರುವ ಪಿ.ವಿ. ಸಿಂಧು ಪ್ರಧಾನಿಯೊಂದಿಗೆ ಐಸ್ಕ್ರೀಂ ಸೇವಿಸಿರುವ ಫೋಟೋ ಈಗ ಭಾರೀ ವೈರಲ್ ಆಗುತ್ತಿದೆ.
ಒಲಿಂಪಿಕ್ಸ್ನಲ್ಲಿ ಭಾಗವಹಿಸಿದ ಎಲ್ಲ ಕ್ರೀಡಾಪಟುಗಳನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶದ ಗೌರವ ಹೆಚ್ಚಿಸಿದ್ದಕ್ಕೆ ವೈಯಕ್ತಿಕವಾಗಿ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ವೇಳೆ ಚಿನ್ನದ ಪದಕ ವಿಜೇತರಾದ ನೀರಜ್ ಚೋಪ್ರಾ ಜೊತೆ ವಿಶೇಷ ಮಾತುಕತೆ ನಡೆಸಿದರು. ಹಾಗೆಯೇ ನೀರಜ್ ಚೋಪ್ರಾರ ಇಷ್ಟದ ಆಹಾರ ಚೂರ್ಮಾ ಮಾಡಿಸಿ, ಡಯೆಟ್ ವೇಳೆ ಪಿ.ವಿ. ಸಿಂಧು ಮಿಸ್ ಮಾಡಿಕೊಂಡಿದ್ದ ಐಸ್ಕ್ರೀಂ ತರಿಸಿ ಅವರೊಂದಿಗೆ ಊಟ ಮಾಡಿದ್ದಾರೆ.
ಮುಂದಿನ ಪೀಳಿಗೆಗೆ ಸ್ಫೂರ್ತಿ ತುಂಬಿದ್ದಾರೆ
"ನಮ್ಮ ದೇಶಕ್ಕೆ ಹೆಮ್ಮೆ ತಂದಿರುವ ಒಲಿಂಪಿಕ್ಸ್ ಅಥ್ಲೀಟ್ಗಳು ಇಂದು ನಮ್ಮೊಂದಿಗೆ ಇದ್ದಾರೆ. ಒಂದು ಕಾಲದಲ್ಲಿ ಕ್ರೀಡೆಯನ್ನು ಯಾರೂ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಯಾವಾಗಲೂ ಆಟವಾಡುತ್ತಿದ್ದರೆ ಅದು ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತದೆ ಎಂದು ಪೋಷಕರು ಸದಾ ಬೈಯುತ್ತಿದ್ದರು. ಆದರೆ ಈಗ ಕ್ರೀಡೆ ಮತ್ತು ಫಿಟ್ನೆಸ್ ಬಗ್ಗೆ ಜನರ ಅಭಿಪ್ರಾಯಗಳು ಬದಲಾಗಿವೆ. ಆ ಕಾರಣದಿಂದಲೇ ಭಾರತ ಈ ಬಾರಿ ಒಲಿಂಪಿಕ್ಸ್ನಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಕ್ರೀಡಾಪಟುಗಳು ಪದಕ ಗೆದ್ದು ನಮ್ಮ ಹೃದಯ ಗೆದ್ದಿದ್ದು ಮಾತ್ರವಲ್ಲದೆ, ಮುಂದಿನ ಪೀಳಿಗೆಗೆ ಸ್ಫೂರ್ತಿ ತುಂಬಿದ್ದಾರೆ," ಎಂದು ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಐಸ್ಕ್ರೀಂ ಆಫರ್ ನೀಡಿದ್ದ ಮಂಗಳೂರಿನ ಪಬ್ಬಾಸ್
ಟೋಕಿಯೋ ಒಲಿಂಪಿಕ್ಸ್ 2020ರ ಕಂಚಿನ ಪದಕ ವಿಜೇತೆ, ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜೊತೆ ಐಸ್ ಕ್ರೀಂ ತಿನ್ನಲು ದಿ ಬೆಸ್ಟ್ ಐಸ್ ಕ್ರೀಂ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಬ್ಬಾಸ್ ಟ್ವೀಟ್ ಮಾಡಿತ್ತು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮಾಡಿದ್ದ ಪಬ್ಬಾಸ್ ಐಡಿಯಲ್ ಐಸ್ ಕ್ರೀಂ ಕೆಫೆ, ""ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಜೊತೆ ತಿನ್ನಲು ವೋಕಲ್ ಫಾರ್ ಲೋಕಲ್ ಮತ್ತು ಆತ್ಮ ನಿರ್ಭರ ಭಾರತ್ ಅಡಿಯಲ್ಲಿ ದಿ ಬೆಸ್ಟ್ ಐಸ್ ಕ್ರೀಂ ನೀಡುವುದಾಗಿ,'' ಪಬ್ಬಾಸ್ ಟ್ವೀಟ್ನಲ್ಲಿ ಹೇಳಿಕೊಂಡಿತ್ತು.
Recommended Video

ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು
ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭಾರತಕ್ಕೆ ಎರಡನೇ ಪದಕ ಗೆದ್ದು ಕೊಟ್ಟಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ನಲ್ಲಿ ಪಿ.ವಿ. ಸಿಂಧು ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು.
ಭಾನುವಾರ (ಆಗಸ್ಟ್ 1) ನಡೆದ ಮಹಿಳಾ ಸಿಂಗಲ್ಸ್ ಪಂದ್ಯದಲ್ಲಿ ಎದುರಾಳಿ ಚೀನಾ ದೇಶದ ಆಟಗಾರ್ತಿ ಹಿ ಬಿಂಗ್ ಜಿಯಾವೋ ವಿರುದ್ಧ ಭಾರತದ ಪಿ.ವಿ. ಸಿಂಧು 21-13, 21-15ರ ಅಂತರದಿಂದ ಗೆಲುವು ತನ್ನದಾಗಿಸಿಕೊಂಡಿದ್ದರು. ಇದರೊಂದಿಗೆ ಒಲಿಂಪಿಕ್ಸ್ನಲ್ಲಿ ಪಿ.ವಿ.ಸಿಂಧು ಸತತ ಎರಡು ಬಾರಿ ಪದಕ ಗೆದ್ದ ದಾಖಲೆ ನಿರ್ಮಿಸಿದರು.ಮೊದಲ ಸೆಟ್ನಲ್ಲಿ ಭಾರತೀಯ ನಾರಿ ಪಿ.ವಿ. ಸಿಂಧು ಸುಲಭವಾಗಿ ಜಯ ಸಾಧಿಸಿದಳು. ನಂತರ ದ್ವಿತೀಯ ಸೆಟ್ನಲ್ಲಿ ಚೀನಾದ ಹಿ ಬಿಂಗ್ ಜಿಯಾವೋ ಕೊಂಚ ಪೈಪೋಟಿ ನೀಡಿದರೂ, ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಪಾರುಪತ್ಯ ಸಾಧಿಸಿ, ಕಂಚಿನ ಪದಕ ತನ್ನದಾಗಿಸಿಕೊಂಡರು.-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications