ಬಸವ ಜಯಂತಿ: 'ಕಾಯಕವೇ ಕೈಲಾಸ' ಎಂದ ಪ್ರಧಾನಿ ಮೋದಿ
ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿ ದಿವಂಗತ ಎಂಎಂ ಕಲಬುರ್ಗಿ ಸಂಪಾದಿಸಿದ ವಚನ ಸಂಪುಟವನ್ನೂ ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದರು. ದೇಶದ ಬೇರೆ ಬೇರೆ ಭಾಷೆಗಳ 200 ತಜ್ಞರು ಭಾರತದ ಇತರ 22 ಭಾಷೆಗಳಿಗೆ ಇದನ್ನು ಅನುವಾದಿಸಿದ್ದಾರೆ.
ನವ ದೆಹಲಿ, ಏಪ್ರಿಲ್ 29: ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಸವ ಜಯಂತಿಯ ಶುಭ ಸಂದರ್ಭದಲ್ಲಿ 'ಅಂತರಾಷ್ಟ್ರೀಯ ಬಸವ ಸಮಾವೇಶ' ಉದ್ಘಾಟಿಸಿದರು. ದೆಹಲಿಯ ವಿಜ್ಞಾನ ಭವನದಲ್ಲಿ ಈ ವರ್ಣರಂಜಿತ ಕಾರ್ಯಕ್ರಮ ನಡೆಯಿತು.
ಕಾಯಕಯೋಗಿ ಬಸವಣ್ಣನವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಹೂವಿನ ಹಾರ ಹಾಕಿ ನಮಿಸಿದರು. ಉಳಿದ ಗಣ್ಯರು ಇದೇ ಸಂದರ್ಭದಲ್ಲಿ ಪುಷ್ಪನಮನ ಸಲ್ಲಿಸಿದರು. ನಂತರ 'ಓಂ ಶ್ರೀ ಬಸವ ಲಿಂಗಾಯ ನಮಃ' ಎನ್ನುವ ಮೂಲಕ ಬಸವ ನಾಮ ಸ್ಮರಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭಿಸಿದರು. ಭಾಷಣದುದ್ದಕ್ಕೂ ಬಸವಣ್ಣನವರ ನಿಲುವುಗಳು, ಕಾರ್ಯಗಳನ್ನು ಪ್ರಧಾನಿಗಳು ಕೊಂಡಾಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಿಗಳು ಭಾರತದ 23 ಭಾಷೆಗಳಲ್ಲಿ ಹೊರ ತಂದಿರುವ ವಚನ ಸಂಪುಟವನ್ನೂ ಬಿಡುಗಡೆಗೊಳಿಸಿದರು. ಇದರಲ್ಲಿ ಬಸವಣ್ಣನವರ ವಚನಗಳೂ ಸೇರಿದಂತೆ ಹಲವರ ವಚನಗಳಿವೆ. ರಾಷ್ಟ್ರ ಮಟ್ಟದಲ್ಲಿ ಮೊದಲ ಬಾರಿಗೆ ಬಸವಣ್ಣನವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಡಿಜಿಟಲ್ ರೂಪದಲ್ಲಿಯೂ ಈ ಹೊತ್ತಗೆಗಳನ್ನು ಬಿಡುಗಡೆ ಮಾಡಿದ್ದಾರೆ.

ನಾಡಿನ ಹೆಸರಾಂತ ಸಾಹಿತಿ ದಿವಂಗತ ಎಂಎಂ ಕಲಬುರ್ಗಿ ಈ ವಚನ ಸಂಪುಟವನ್ನು ಸಂಪಾದಿಸಿದ್ದಾರೆ. ಜತೆಗೆ ದೇಶದ ಬೇರೆ ಬೇರೆ ಭಾಷೆಗಳ 200 ತಜ್ಞರು ಭಾರತದ ಇತರ 22 ಭಾಷೆಗಳಿಗೆ ಇದನ್ನು ಅನುವಾದಿಸಿದ್ದಾರೆ. ಬಸವ ಸಮಿತಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪುಸ್ತಕ ಹೊರ ತಂದಿದೆ. ಇದಕ್ಕಾಗಿ ಕರ್ನಾಟಕ ಸರಕಾರವೂ 1 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಇವಲ್ಲದರ ಜತೆಗೆ ಇದು 'ಬಸವ ಸಮಿತಿ'ಯ ಸುವರ್ಣ ಮಹೋತ್ಸವವೂ ಹೌದು. 1964ರಲ್ಲಿ ಬಸವಣ್ಣನ ತತ್ವಗಳನ್ನು ದೇಶದೆಲ್ಲೆಡೆ ಹರಡಲು ಭಾರತದ ಮಾಜಿ ರಾಷ್ಟ್ರಪತಿ ಬಿಡಿ ಜತ್ತಿ ಈ ಬಸವ ಸಮಿತಿಯನ್ನು ರಚಿಸಿದ್ದರು.
ದೆಹಲಿಯಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬಸವ ಸಮಾವೇಶದಲ್ಲಿ ಕರ್ನಾಟಕದಿಂದ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಅನಂತ್ ಕುಮಾರ್, ಡಿವಿ ಸದಾನಂದ ಗೌಡ ಕೂಡಾ ಪಾಲ್ಗೊಂಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications