"Selfie With Daughter ತೆಗೆದು ಕಳಿಸಿ ಧೈರ್ಯ ತುಂಬಿ"
ನವದೆಹಲಿ, ಜೂ.28: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 'ಬೇಟಿ ಪಡಾವೋ, ಬೇಟಿ ಬಚಾವೋ' ಯೋಜನೆಯ ಮಹತ್ವದ ಬಗ್ಗೆ ವಿವರಿಸುತ್ತಾ #SelfieWithDaughter ನೊಂದಿಗೆ ಫೋಟೋ ಹಾಕುವಂತೆ ಭಾನುವಾರ ಬೆಳಗ್ಗೆ ಕರೆ ನೀಡಿದ್ದರು. ಸಂಜೆ ವೇಳೆಗೆ ಮೈಕ್ರೋ ಬ್ಲಾಗಿಂಗ್ ತಾಣದಲ್ಲಿ ಈ ಹ್ಯಾಶ್ ಟ್ಯಾಗ್ ಟಾಪ್ ಟ್ರೆಂಡಿಂಗ್ ಗೆ ಬಂದಿದೆ.
ಮೋದಿ ಅವರು ತಮ್ಮ 9ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತಮ್ಮ ಸರ್ಕಾರವನ್ನು ಕೆಲಸ ಮಾಡುವ ಸರ್ಕಾರ ಎಂದು ಹೆಮ್ಮೆಯಿಂದ ಘೋಷಿಸಿದರು. 'ಬೇಟಿ ಪಡಾವೋ, ಬೇಟಿ ಬಚಾವೋ' ಯೋಜನೆ ಬಗ್ಗೆ ಹೆಚ್ಚಿನ ಒತ್ತು ನೀಡಿದ ಮೋದಿ ಅವರು 25 ನಿಮಿಷದ ತಮ್ಮ ಭಾಷಣದಲ್ಲಿ ವಿವಿಧ ವಿಷಯಗಳ ಬಗ್ಗೆ ಬೆಳಕು ಚೆಲ್ಲಿದರು.

ಸ್ಮಾರ್ಟ್ ಫೋನ್ ಬಳಸಿ ನಿಮ್ಮ ಹೆಣ್ಣು ಮಗುವಿನ ಜೊತೆ ಒಂದು ಸೆಲ್ಫಿ ಫೋಟೋ ತೆಗೆದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ಸಾಮಾಜಿಕ ಜಾಲ ತಾಣಗಳಾದ ಫೇಸ್ ಬುಕ್, ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಎಂದು ಕರೆ ನೀಡಿದರು.
ಹೆಣ್ಣು ಮಕ್ಕಳು ಹುಟ್ಟಿದಾಗ ಬೇಸರಪಟ್ಟುಕೊಳ್ಳುವುದು, ಭ್ರೂಣ ಹತ್ಯೆ ತಡೆ, ಬಾಲಕಿಯರಿಗೆ ಶಿಕ್ಷಣ ಹಕ್ಕು ಮುಂತಾದ ವಿಷಯಗಳಾನ್ನು ಹೊಂದಿರುವ ಬೇಟಿ ಪಡವೋ, ಬೇಟಿ ಬಚಾವೋ ಯೋಜನೆಗೆ ಪೋಷಕರು ಸಹಕರಿಸುವಂತೆ ಮೋದಿ ಹೇಳಿದರು.
.#SelfieWithDaughter becomes No. 1 Twitter trend in India & listed in worldwide trend. A Sarpanch Initiative promoted by @narendramodi ji
— #GauravPradhan (@DrGPradhan) June 28, 2015 #SelfieWithDaughter ಮೊಟ್ಟಮೊದಲಿಗೆ ಆರಂಭಿಸಿದ ಹರ್ಯಾಣದ ಗ್ರಾಮವೊಂದರ ಸರಪಂಚ್ ಅವರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು. ರಕ್ಷಾ ಬಂಧನ ಸದ್ಯದಲ್ಲಿಯೇ ಇದ್ದು, ಈ ಸಂದರ್ಭದಲ್ಲಿ ಮಹಿಳೆಯರಿಗಾಗಿ ಅವರ ಸಹೋದರರು ಮತ್ತು ಮನೆಯವರು ಕೆಲವು ವಿಶೇಷ ಕೊಡುಗೆಗಳನ್ನು ನೀಡಬೇಕು.
#SelfieWithDaughter full support to campaign by PM @narendramodi Sharing selfies taken over yrs #BetiBachaoBetiPadhao pic.twitter.com/WtFRRxGyQq
— Neha Rajpal (@neharajpalmusic) June 28, 2015 ವಿಶ್ವ ಯೋಗ ದಿನದಂದು ಸೂರ್ಯನ ಕಿರಣ ಎಲ್ಲೆಡೆ ಹರಡಿತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ಮಾನ್ಯತೆ ಸಿಕ್ಕಿದ್ದು, ವಿಶ್ವಸಂಸ್ಥೆಯಲ್ಲಿ ಅಧ್ಯಕ್ಷರು ಕೂಡಾ ಯೋಗಾಭ್ಯಾಸ ನಿರತರಾಗಿದ್ದು ಕಂಡು ಮನ ಪುಳಕಿತಗೊಂಡಿತು ಎಂದು ಮೋದಿ ಹೇಳಿದರು.
ಮೋದಿ ಅವರ ಮನ್ ಕೀ ಬಾತ್ ಕೇಳಿಸಿಕೊಳ್ಳಿ
(ಒನ್ ಇಂಡಿಯಾ ಸುದ್ದಿ)
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications